AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ನೋ ಬಾಲ್ ಎಸೆದು, ನೋ ಬಾಲ್ ಎಸೆಯುವುದು ಅಪರಾಧ ಎಂದ ಹಾರ್ದಿಕ್ ಪಾಂಡ್ಯ

IPL 2025 MI vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 56ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 156 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 147 ರನ್​ಗಳ ಗುರಿ ನೀಡಲಾಗಿತ್ತು.

2 ನೋ ಬಾಲ್ ಎಸೆದು, ನೋ ಬಾಲ್ ಎಸೆಯುವುದು ಅಪರಾಧ ಎಂದ ಹಾರ್ದಿಕ್ ಪಾಂಡ್ಯ
Hardik Pandya
Follow us
ಝಾಹಿರ್ ಯೂಸುಫ್
|

Updated on:May 07, 2025 | 10:55 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡವು ರೋಚಕ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಖಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ಇನಿಂಗ್ಸ್​ಗೆ ಮಳೆ ಅಡಚಣೆಯನ್ನುಂಟು ಮಾಡಿದ ಪರಿಣಾಮ ಡಕ್​ವರ್ತ್ ಲೂಯಿಸ್ ಪ್ರಕಾರ, 19 ಓವರ್​ಗಳಲ್ಲಿ 147 ರನ್​ಗಳ ಗುರಿ ನೀಡಲಾಯಿತು. 19ನೇ ಓವರ್​ನ ಅಂತಿಮ ಎಸೆತದಲ್ಲಿ ಈ ಗುರಿಯನ್ನು ಮುಟ್ಟುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಟಿ20 ಕ್ರಿಕೆಟ್​ನಲ್ಲಿ ನೋ ಬಾಲ್ ಎಸೆಯುವುದು ಪರಮ ಅಪರಾಧ ಎಂದು ಬಣ್ಣಿಸಿದರು. ಏಕೆಂದರೆ ಈ ಪಂದ್ಯದ ಕೊನೆಯ ಓವರ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ 15 ರನ್​ಗಳ ಅವಶ್ಯಕತೆಯಿತ್ತು. ಈ ನಿರ್ಣಾಯಕ ಓವರ್​ನಲ್ಲಿ ದೀಪಕ್ ಚಹರ್ ನೋ ಬಾಲ್ ಎಸೆಯುವ ಮೂಲಕ ಹೆಚ್ಚುವರಿ ರನ್​ಗಳನ್ನು ಬಿಟ್ಟು ಕೊಟ್ಟಿದ್ದರು. ಇದನ್ನೆ ಪರೋಕ್ಷವಾಗಿ ಹಾರ್ದಿಕ್ ಪಾಂಡ್ಯ ನೋ ಬಾಲ್ ಎಸೆಯುವುದು ಅಪರಾಧ ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ವಿಶೇಷ ಎಂದರೆ ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಒಂದೇ ಓವರ್​ನಲ್ಲಿ ಎರಡು ನೋ ಬಾಲ್ ಮಾಡಿದ್ದರು. ಈ ನೋ ಬಾಲ್​ ಮೂಲಕ ನೀಡಲಾದ ಫ್ರೀ ಹಿಟ್ ಎಸೆತದಲ್ಲಿ ಶುಭ್​ಮನ್ ಗಿಲ್ ಭರ್ಜರಿ ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕೊನೆಯ ನೋ ಬಾಲ್ ಅನ್ನು ಪ್ರಸ್ತಾಪಿಸಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ಇನ್ನು ಈ ಪಂದ್ಯದ ಸೋಲನ್ನು ವಿಮರ್ಶಿಸಿದ ಹಾರ್ದಿಕ್ ಪಾಂಡ್ಯ, ಕಡಿಮೆ ಸ್ಕೋರ್​ಗಳಿಸಿದರೂ ನಾವು ಉತ್ತಮ ಪೈಪೋಟಿ ನೀಡಿದ್ದೇವೆ ಎಂದು ಭಾವಿಸುತ್ತೇನೆ. ಏಕೆಂದರೆ 150 ರನ್​ಗಳು ಕಠಿಣ ಸಾವಾಲಾಗಿರಲಿಲ್ಲ. ನಾವು ಇನ್ನೂ 25 ರನ್​ಗಳನ್ನು ಹೆಚ್ಚು ಗಳಿಸಬೇಕಿತ್ತು. ಇದಾಗ್ಯೂ ನಮ್ಮ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ನೀಡಿದರು. ಕೊನೆಯವರೆಗೆ ಹೋರಾಟ ಮುಂದುವರೆಸುವ ಮೂಲಕ ಪಂದ್ಯ ಗೆಲ್ಲಲು ಶ್ರಮಿಸಿದ್ದರು. ಹೀಗಾಗಿ ನಮ್ಮ ಬೌಲರ್​ಗಳು ಅಭಿನಂದನೆಗೆ ಅರ್ಹರು ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದನ್ನೂ ಓದಿ: IPL 2025: ಹೀಗಾದ್ರೆ RCB ಐಪಿಎಲ್​ನಿಂದ ಹೊರಬೀಳುತ್ತೆ..!

ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿರುವ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದೆ. ಇದಾಗ್ಯೂ ಮುಂಬೈ ಪಡೆಗೆ ಇನ್ನೂ 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಳ್ಳಲು ಉತ್ತಮ ಅವಕಾಶವಿದೆ.

Published On - 10:55 am, Wed, 7 May 25

ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ