AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್, ಕೊಹ್ಲಿಯಲ್ಲ: ಸರ್ವ ಶ್ರೇಷ್ಠ ಕ್ರಿಕೆಟಿಗನನ್ನು ಹೆಸರಿಸಿದ ಬ್ರೇಟ್ ಲೀ

ಕ್ರಿಕೆಟ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಯಾರು ಎಂಬ ಚರ್ಚೆ ಎಂದಿಗೂ ಮುಗಿಯದ ಒಂದು ರೋಚಕ ಅಧ್ಯಾಯ. ಸಾಮಾನ್ಯವಾಗಿ ಈ ಸಿಂಹಾಸನದ ಮೇಲೆ ಸಚಿನ್ ತೆಂಡೂಲ್ಕರ್ ಅಥವಾ ವಿರಾಟ್ ಕೊಹ್ಲಿ ಅವರಂತಹ ಬ್ಯಾಟಿಂಗ್ ದಿಗ್ಗಜರ ಹೆಸರುಗಳೇ ರಾರಾಜಿಸುತ್ತವೆ. ಆದರೆ, ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಇತ್ತೀಚೆಗೆ ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ, ಕ್ರಿಕೆಟ್‌ನ ಪ್ರತಿಯೊಂದು ವಿಭಾಗದಲ್ಲೂ ತಂಡಕ್ಕೆ ಆಸರೆಯಾಗಬಲ್ಲ ಆಟಗಾರನೇ ನಿಜವಾದ ಶ್ರೇಷ್ಠ ಎಂದು ವಾದಿಸುವ ಮೂಲಕ ಕ್ರೀಡಾಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ಸಚಿನ್, ಕೊಹ್ಲಿಯಲ್ಲ: ಸರ್ವ ಶ್ರೇಷ್ಠ ಕ್ರಿಕೆಟಿಗನನ್ನು ಹೆಸರಿಸಿದ ಬ್ರೇಟ್ ಲೀ
Sachin - Virat - Brett LeeImage Credit source: x.com
ಝಾಹಿರ್ ಯೂಸುಫ್
|

Updated on: Aug 11, 2026 | 1:18 PM

Share

ವಿಶ್ವ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ (GOAT – Greatest of All Time) ಯಾರು ಎಂಬ ಚರ್ಚೆ ಬಂದಾಗಲೆಲ್ಲಾ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಅಥವಾ ವೆಸ್ಟ್ ಇಂಡೀಸ್‌ನ ವಿವಿಯನ್ ರಿಚರ್ಡ್ಸ್ ಅವರ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಆಸ್ಟ್ರೇಲಿಯಾದ ಮಾಜಿ ಮಾರಕ ವೇಗಿ ಬ್ರೆಟ್ ಲೀ ಈ ಚರ್ಚೆಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಅವರ ಪ್ರಕಾರ, ಸಚಿನ್ ತೆಂಡೂಲ್ಕರ್ ಅವರನ್ನೂ ಮೀರಿಸಿ ಕ್ರಿಕೆಟ್ ಇತಿಹಾಸದ ಅತ್ಯಂತ ಶ್ರೇಷ್ಠ ಆಟಗಾರನಾಗಿ ನಿಲ್ಲುವುದು ಸೌತ್ ಆಫ್ರಿಕಾದ ಆಲ್‌ರೌಂಡರ್ ಜ್ಯಾಕ್ ಕಾಲಿಸ್! ಇತ್ತೀಚಿಗೆ ಪಾಡ್‌ಕಾಸ್ಟ್​ವೊಂದರಲ್ಲಿ ಮಾತನಾಡಿದ ಬ್ರೆಟ್ ಲೀ, ಈ ಕುರಿತು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಸಚಿನ್ ಶ್ರೇಷ್ಠ ಬ್ಯಾಟರ್, ಕಾಲಿಸ್ ‘GOAT’!

ಬ್ರೆಟ್ ಲೀ ತಮ್ಮ ಹೇಳಿಕೆಯಲ್ಲಿ ಬ್ಯಾಟಿಂಗ್ ಮತ್ತು ಒಟ್ಟಾರೆ ಕ್ರಿಕೆಟ್ ಸಾಮರ್ಥ್ಯದ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಿದ್ದಾರೆ. “ಸಚಿನ್ ತೆಂಡೂಲ್ಕರ್ ಕ್ರಿಕೆಟ್ ಜಗತ್ತು ಕಂಡ ಅತ್ಯಂತ ಶ್ರೇಷ್ಠ ಬ್ಯಾಟರ್ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ನೀವು ಇಡೀ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ (GOAT) ಕ್ರಿಕೆಟಿಗನನ್ನು ಆಯ್ಕೆ ಮಾಡಬೇಕಾದರೆ, ಅಲ್ಲಿ ಜ್ಯಾಕ್ ಕಾಲಿಸ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ” ಎಂದು ಲೀ ಹೇಳಿದ್ದಾರೆ.

ಕಾಲಿಸ್ ಅವರನ್ನೇ ಆಯ್ಕೆ ಮಾಡಲು ಕಾರಣಗಳೇನು?

ಟೆಸ್ಟ್ ಮತ್ತು ಏಕದಿನ, ಎರಡೂ ಮಾದರಿಗಳಲ್ಲಿ 10,000 ಕ್ಕೂ ಹೆಚ್ಚು ರನ್ ಹಾಗೂ 250 ಕ್ಕೂ ಹೆಚ್ಚು ವಿಕೆಟ್ ಪಡೆದ ವಿಶ್ವದ ಏಕೈಕ ಆಟಗಾರ ಜ್ಯಾಕ್ ಕಾಲಿಸ್. ಇಂತಹ ಸಾಧನೆ ಮತ್ತೊಬ್ಬರಿಗೆ ಅಸಾಧ್ಯ ಎಂದು ಬ್ರೇಟ್ ಲೀ ಬಣ್ಣಿಸಿದ್ದಾರೆ.

ಕಾಲಿಸ್ ಕೇವಲ ಪಾರ್ಟ್-ಟೈಮ್ ಬೌಲರ್ ಆಗಿರಲಿಲ್ಲ. ತಂಡದ ಪ್ರಮುಖ ಬ್ಯಾಟರ್ ಆಗಿ ಆಡುವ ಜೊತೆಗೆ, ಗಂಟೆಗೆ 140 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದರು. ಅಷ್ಟೇ ಅಲ್ಲದೆ, ಸ್ಲಿಪ್ ಫೀಲ್ಡಿಂಗ್‌ನಲ್ಲಿ ಅದ್ಭುತ ಕ್ಯಾಚ್‌ಗಳನ್ನು ಹಿಡಿಯುತ್ತಿದ್ದರು.

ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಲ್ಲಿ ಕಾಲಿಸ್ ಅವರೊಂದಿಗೆ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದ ಲೀ, “ಪಂದ್ಯದ ಒತ್ತಡದ ಸಮಯದಲ್ಲಿ ಬ್ಯಾಟಿಂಗ್‌ಗೆ ಹೋಗುವ ಮುನ್ನವೂ  ಅವರ ಹೃದಯ ಬಡಿತ ಅತ್ಯಂತ ಸಾಮಾನ್ಯ ಸ್ಥಿತಿಯಲ್ಲಿರುತ್ತಿತ್ತು. ಅಷ್ಟೊಂದು ಕೂಲ್ ಆಗಿ ಅವರು ಇರುತ್ತಿದ್ದರು” ಎಂದು ನೆನಪಿಸಿಕೊಂಡಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ಬ್ರೇಟ್ ಲೀ ಜ್ಯಾಕ್ ಕಾಲಿಸ್ ಅವರನ್ನು ಗ್ರೇಟೆಸ್ಟ್​ ಆಫ್ ಆಲ್​ ಟೈಮ್ (GOAT)  ಕ್ರಿಕೆಟಿಗ ಎಂದು ಬಣ್ಣಿಸಿದ್ದಾರೆ.

ಸಚಿನ್ vs ಕಾಲಿಸ್ ಅಂಕಿ ಅಂಶಗಳು:

  • ಟೆಸ್ಟ್ ಕ್ರಿಕೆಟ್: ಸಚಿನ್ 15,921 ರನ್ (ಸರಾಸರಿ 53.78) ಗಳಿಸಿದ್ದರೆ, ಕಾಲಿಸ್ 13,289 ರನ್ (ಸರಾಸರಿ 55.37) ಗಳಿಸಿದ್ದಾರೆ. ಆದರೆ ಬೌಲಿಂಗ್‌ನಲ್ಲಿ ಸಚಿನ್ 46 ವಿಕೆಟ್ ಪಡೆದರೆ, ಕಾಲಿಸ್ ಬರೋಬ್ಬರಿ 292 ವಿಕೆಟ್ ಕಬಳಿಸಿದ್ದಾರೆ.
  • ಏಕದಿನ ಕ್ರಿಕೆಟ್: ಸಚಿನ್ 18,426 ರನ್ ಹಾಗೂ 154 ವಿಕೆಟ್ ಪಡೆದಿದ್ದಾರೆ. ಕಾಲಿಸ್ 11,579 ರನ್ ಹಾಗೂ 273 ವಿಕೆಟ್ ಕಬಳಿಸಿದ್ದಾರೆ.
  • ಕ್ಯಾಚ್‌ಗಳು: ಫೀಲ್ಡಿಂಗ್‌ನಲ್ಲಿ ಕಾಲಿಸ್ ಟೆಸ್ಟ್‌ನಲ್ಲಿ 200 ಕ್ಯಾಚ್‌ಗಳನ್ನು ಹಿಡಿದು ಸಚಿನ್ (115 ಕ್ಯಾಚ್) ಅವರಿಗಿಂತ ಮುಂದಿದ್ದಾರೆ.

ಬ್ರೆಟ್ ಲೀ ಮಾತ್ರವಲ್ಲದೆ, ಆಸ್ಟ್ರೇಲಿಯಾದ ಇತರ ದಿಗ್ಗಜರಾದ ರಿಕ್ಕಿ ಪಾಂಟಿಂಗ್ ಮತ್ತು ಸ್ಟೀವ್ ಸ್ಮಿತ್ ಕೂಡ ಜ್ಯಾಕ್ ಕಾಲಿಸ್ ಅವರನ್ನು ಕ್ರಿಕೆಟ್‌ನ ಅತ್ಯಂತ ಪ್ರಭಾವಶಾಲಿ ಆಟಗಾರ ಎಂದು ಈ ಹಿಂದೆ ಹಲವು ಬಾರಿ ಒಪ್ಪಿಕೊಂಡಿದ್ದಾರೆ. ಕಾಲಿಸ್ ಅವರಂತಹ ಆಟಗಾರ ತಂಡದಲ್ಲಿದ್ದರೆ ಅದು ಇಬ್ಬರು ವಿಶ್ವದರ್ಜೆಯ ಆಟಗಾರರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಿಸಿದಂತೆ ಎಂಬುದು ಲೀ ಅವರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: IPL 2027: ಹಾರ್ದಿಕ್ ಪಾಂಡ್ಯ ಖರೀದಿಗೆ ಐದು ಫ್ರಾಂಚೈಸಿಗಳ ಬಿಗ್ ಪ್ಲ್ಯಾನ್!

ಒಟ್ಟಾರೆಯಾಗಿ ಹೇಳುವುದಾದರೆ, ಬ್ರೆಟ್ ಲೀ ಅವರ ವಿಶ್ಲೇಷಣೆಯು ಸಚಿನ್ ಮತ್ತು ಕಾಲಿಸ್ ನಡುವಿನ ಶ್ರೇಷ್ಠತೆಯ ಚರ್ಚೆಗೆ ಹೊಸ ಆಯಾಮ ನೀಡಿದೆ. ಸಚಿನ್ ಬ್ಯಾಟಿಂಗ್‌ನಲ್ಲಿ ಸಾಟಿಯಿಲ್ಲದ ‘ದೇವರು’ ಎನಿಸಿದರೆ, ಜ್ಯಾಕ್ ಕಾಲಿಸ್ ಏಕಾಂಗಿಯಾಗಿ ಪಂದ್ಯದ ಗತಿಯನ್ನು ಬದಲಿಸಬಲ್ಲ ಅತ್ಯಂತ ಪರಿಪೂರ್ಣ ‘ಆಲ್‌ರೌಂಡರ್’ ಎಂಬುದನ್ನು ಒಪ್ಪಲೇಬೇಕಾಗುತ್ತದೆ.

Follow Us
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ