AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದಲ್ಲಿ ಉಳಿಸಿಕೊಳ್ಳಬೇಕಾದ 3 ಆಟಗಾರರನ್ನು ಹೆಸರಿಸಿದ ಲಾರಾ

Brian Lara: ಮ್ಯಾಕ್ಸ್​ವೆಲ್​ ಈ ಬಾರಿ ತಮ್ಮ ಮೇಲಿದ್ದ ನಿರೀಕ್ಷೆಗಳನ್ನು ಪೂರ್ಣಗೊಳಿಸಿದ್ದಾರೆ. 14 ಕೋಟಿಗೂ ಅಧಿಕ ಮೊತ್ತಕ್ಕೆ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದ ಮ್ಯಾಕ್ಸ್​ವೆಲ್, ಬೆಲೆಗೆ ತಕ್ಕಂಥಹ ಆಟವನ್ನು ಆಡಿದ್ದಾರೆ.

IPL 2022: RCB ತಂಡದಲ್ಲಿ ಉಳಿಸಿಕೊಳ್ಳಬೇಕಾದ 3 ಆಟಗಾರರನ್ನು ಹೆಸರಿಸಿದ ಲಾರಾ
Brian Lara
TV9 Web
| Edited By: |

Updated on: Oct 13, 2021 | 2:59 PM

Share

ಆರ್​ಸಿಬಿ (RCB) ತಂಡ ಈ ಬಾರಿಯೂ ಕಪ್ ಗೆಲ್ಲುವಲ್ಲಿ ಎಡವಿದೆ. ಪ್ಲೇ ಆಫ್ ತಲುಪಿದರೂ ಫೈನಲ್ ರೇಸ್​ಗೇರುವಲ್ಲಿ ವಿಫಲವಾಗಿದೆ. ಇದಾಗ್ಯೂ ಈ ಸಲ ಆರ್​ಸಿಬಿ ತಂಡದ ಕೆಲ ಆಟಗಾರರು ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಈ ಆಟಗಾರರು ಆರ್​ಸಿಬಿ ತಂಡದಲ್ಲಿರುವುದು ಉತ್ತಮ ಎಂದಿದ್ದಾರೆ ಲೆಜೆಂಡ್ ಬ್ರಿಯಾನ್ ಲಾರಾ (Brian Lara). ಮುಂದಿನ ಸೀಸನ್​ನಲ್ಲಿ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಬಹುತೇಕ ತಂಡಗಳು ಬದಲಾಗಲಿದೆ. ಅಷ್ಟೇ ಅಲ್ಲದೆ ಹೊಸ 2 ತಂಡಗಳು ಸೇರ್ಪಡೆಯಾಗಲಿದೆ. ಹೀಗಾಗಿ ಆರ್​ಸಿಬಿ ಮೂವರು ಬ್ಯಾಟರುಗಳನ್ನು ಉಳಿಸಿಕೊಳ್ಳುವುದು ಉತ್ತಮ ಎಂದು ಲಾರಾ ಸಲಹೆ ನೀಡಿದ್ದಾರೆ.

ಲಾರಾ ಪ್ರಕಾರ, ಆರ್​ಸಿಬಿ ತಂಡ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲೇಬೇಕು. ಮುಂದಿನ ಸೀಸನ್​ನಲ್ಲಿ ಅವರು ಭರ್ಜರಿ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಹಾಗೆಯೇ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಕೂಡ ರಿಟೇನ್ ಮಾಡುವುದು ಉತ್ತಮ.

ಏಕೆಂದರೆ ಮ್ಯಾಕ್ಸ್​ವೆಲ್​ ಈ ಬಾರಿ ತಮ್ಮ ಮೇಲಿದ್ದ ನಿರೀಕ್ಷೆಗಳನ್ನು ಪೂರ್ಣಗೊಳಿಸಿದ್ದಾರೆ. 14 ಕೋಟಿಗೂ ಅಧಿಕ ಮೊತ್ತಕ್ಕೆ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದ ಮ್ಯಾಕ್ಸ್​ವೆಲ್, ಬೆಲೆಗೆ ತಕ್ಕಂಥಹ ಆಟವನ್ನು ಆಡಿದ್ದಾರೆ. ಹೀಗಾಗಿ ಅವರನ್ನು ಕೂಡ ಆಲ್​ರೌಂಡರ್ ಆಗಿ ತಂಡದಲ್ಲಿ ಇರಿಸಿಕೊಳ್ಳೋದು ಉತ್ತಮ.

ಇನ್ನು ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರನ್ನೂ ಸಹ ಆರ್​ಸಿಬಿ ಉಳಿಸಿಕೊಳ್ಳೋದು ಉತ್ತಮ ಎಂದಿದ್ದಾರೆ ಲಾರಾ. ಇದಾಗ್ಯೂ ಎಬಿ ಡಿವಿಲಿಯರ್ಸ್​ ಅನ್ನು ಕೈ ಬಿಡಬೇಕೆಂದು ಲಾರಾ ಅಭಿಪ್ರಾಯಪಟ್ಟರು.

ಏಕೆಂದರೆ ಎಬಿಡಿ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡುತ್ತಿಲ್ಲ. ಇಡೀ ವರ್ಷದಲ್ಲಿ ಆರು ವಾರ ಮಾತ್ರ ಕ್ರಿಕೆಟ್ ಆಡುತ್ತಾರೆ. ಇದೀಗ ಅವರಿಗೆ ವಯಸ್ಸಾಗಿದೆ. 42 ವರ್ಷದ ಕ್ರಿಸ್ ಗೇಲ್ ಇಡೀ ವರ್ಷ ಲೀಗ್ ಮೇಲೆ ಲೀಗ್​ಗಳಲ್ಲಿ ಆಡುತ್ತಲೆ ಇರುತ್ತಾರೆ. ಆದರೂ ಕೂಡ ಅವರು ರನ್ ಗಳಿಸಲು ಸಾಧ್ಯವಾಗುತ್ತಿಲ್ಲ. ಎಬಿಡಿ ಪರಿಸ್ಥಿತಿ ಕೂಡ ಹಾಗೆಯೇ ಇರಲಿದೆ ಎಂದು ಲಾರಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ:ಟಿ20 ವಿಶ್ವಕಪ್ ಪಾಕ್ ತಂಡದಲ್ಲಿ ಪ್ರಮುಖ ಬದಲಾವಣೆ: 39 ವರ್ಷದ ಆಲ್​ರೌಂಡರ್ ಆಯ್ಕೆ 

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

(Brian Lara names 3 players RCB should retain ahead of IPL 2022)

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​