AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಇಬ್ಬರು ಯುವ ಆಟಗಾರರಿಗೆ ಭಾರತ ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡಬೇಕು’; ರವಿಶಾಸ್ತ್ರಿ

ODI World Cup 2023: ಟೀಂ ಇಂಡಿಯಾದ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ಟೆಸ್ಟ್, ಏಕದಿನ ಮತ್ತು ಟಿ20ಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ಇದೀಗ ಈ ಯುವ ಪ್ರತಿಭೆಘಲೀಘೇ ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂದು ರವಿಶಾಸ್ತ್ರಿ ಹೇಳಿದ್ದಾರೆ

‘ಈ ಇಬ್ಬರು ಯುವ ಆಟಗಾರರಿಗೆ ಭಾರತ ವಿಶ್ವಕಪ್​ ತಂಡದಲ್ಲಿ ಅವಕಾಶ ನೀಡಬೇಕು’; ರವಿಶಾಸ್ತ್ರಿ
ರವಿಶಾಸ್ತ್ರಿ
Follow us
ಪೃಥ್ವಿಶಂಕರ
|

Updated on:Aug 17, 2023 | 12:16 PM

ಭಾರತದ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ (India vs West Indies) ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್ ವರ್ಮಾ (Yashasvi Jaiswal, Tilak Varma) ಟೆಸ್ಟ್ ಮತ್ತು ಟಿ20ಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ಹೀಗಾಗಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಈ ಇಬ್ಬರ ಆಟವನ್ನು ಮನಸಾರೆ ಹಾಡಿ ಹೊಗಳಿದ್ದರು. ಇದೀಗ ಈ ಯುವ ಪ್ರತಿಭೆಗಳ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿರುವ ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ (Bring Ravi Shastri), ಈ ಇಬ್ಬರಿಗೆ ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಬೇಕು ಎಂದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲಿ ಜೈಸ್ವಾಲ್ ಶತಕ ಸಿಡಿಸಿ ಮಿಂಚಿದರೆ, ಐದು ಪಂದ್ಯಗಳ ಟಿ20 ಸರಣಿಯಲ್ಲಿ ತಿಲಕ್ ವರ್ಮಾ ಕ್ರಮವಾಗಿ 39, 51, 49, 7 ಮತ್ತು 27 ರನ್ ಸಿಡಿಸಿದ್ದರು. ಚೊಚ್ಚಲ ಸರಣಿಯಲ್ಲಿಯೇ ಈ ರೀತಿಯ ಪ್ರದರ್ಶನ ನೀಡಿದ್ದು, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರ ಗಮನ ಸೆಳೆದಿತ್ತು. ಹೀಗಾಗಿ ಏಕದಿನ ವಿಶ್ವಕಪ್‌ಗೆ ಆಯ್ಕೆಯಾಗುವ ತಂಡದಲ್ಲಿ ಈ ಇಬ್ಬರನ್ನು ಸೇರಿಸಿಕೊಳ್ಳಬೇಕೆಂಬ ಸಲಹೆಯನ್ನು ರವಿಶಾಸ್ತ್ರಿ ನೀಡಿದ್ದಾರೆ.

Asia Cup 2023: ಏಷ್ಯಾಕಪ್​ನಲ್ಲಿ ಕೆಎಲ್ ರಾಹುಲ್​ರನ್ನು ಆಡಿಸಬಾರದು ಎಂದ ರವಿಶಾಸ್ತ್ರಿ..!

ಆಯ್ಕೆದಾರರಿಗೆ ಇದು ತಿಳಿದಿದೆ

ಈ ಬಗ್ಗೆ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿರುವ ರವಿಶಾಸ್ತ್ರಿ, ‘ಭಾರತೀಯ ಆಯ್ಕೆದಾರರಿಗೆ ಯಾರು ಫಾರ್ಮ್‌ನಲ್ಲಿದ್ದಾರೆ ಎಂಬುದು ತಿಳಿದಿದೆ. ಆದ್ದರಿಂದ ಅವರನ್ನು ವಿಶ್ವಕಪ್‌ಗೆ ಆಯ್ಕೆ ಮಾಡಿ. ತಿಲಕ್ ವರ್ಮಾ ಫಾರ್ಮ್‌ನಲ್ಲಿದ್ದರೆ ಅವರನ್ನು ಆಯ್ಕೆ ಮಾಡಿ. ಯಶಸ್ವಿ ಜೈಸ್ವಾಲ್ ಫಾರ್ಮ್‌ನಲ್ಲಿದ್ದರೆ, ಅವರನ್ನೂ ಆಯ್ಕೆ ಮಾಡಿ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಇವರಿಂದ ಎರಡು ಪ್ರಯೋಜನಗಳಿವೆ

ತಿಲಕ್ ವರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಜೊತೆಗೆ ಅಗ್ರ ಕ್ರಮಾಂಕದಲ್ಲಿ ಎಡಗೈ ಬ್ಯಾಟ್ಸ್‌ಮನ್ ಆಯ್ಕೆಯನ್ನು ಒದಗಿಸುತ್ತಾರೆ. ಅವರು ಆಯ್ಕೆಯಾದರೆ ಸ್ಪಿನ್ ಬೌಲಿಂಗ್ ಆಯ್ಕೆಯೂ ಸಿಗಲಿದೆ. ಹೀಗಾಗಿ ಅವರು ತಂಡಕ್ಕೆ ಎಕ್ಸ್ ಫ್ಯಾಕ್ಟರ್ ಆಗಲಿದ್ದಾರೆ. ಇವರಲ್ಲದೆ, ಟೆಸ್ಟ್ ಮತ್ತು ಟಿ20ಯಲ್ಲಿ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಪಡೆದುಕೊಂಡಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್ ತಂಡಕ್ಕೆ ಈ ಇಬ್ಬರು ಆಯ್ಕೆಯಾಗಬೇಕು ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವಕಪ್‌ಗೆ ಟೀಂ ಇಂಡಿಯಾ ಆಯ್ಕೆ ಯಾವಾಗ?

ಸೆಪ್ಟೆಂಬರ್ 5 ರಂದು ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಆಯ್ಕೆಯಾಗಲಿದೆ. ಆರಂಭದಲ್ಲಿ 18 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಅಂತಿಮ 15 ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ. ವೆಸ್ಟ್ ಇಂಡೀಸ್ ಸರಣಿಯಲ್ಲಿ ತಿಲಕ್ ವರ್ಮಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಇದು ಆಯ್ಕೆಗಾರರ ​​ತಲೆನೋವನ್ನು ಹೆಚ್ಚಿಸಿದೆ. ವರ್ಮಾ ಮಾತ್ರವಲ್ಲದೆ, ಏಕದಿನ ವಿಶ್ವಕಪ್ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಇಶಾನ್ ಕಿಶನ್ ಅವರನ್ನೂ ಸೇರಿಸಿಕೊಳ್ಳಬೇಕು ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Thu, 17 August 23

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ