AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಅನುಭವಿ ವೇಗಿ ಕಂಬ್ಯಾಕ್ ಸಾಧ್ಯತೆ!

IPL 2026: ಐಪಿಎಲ್ 2026 ಮುಗಿದ ಕೇವಲ ಆರೇ ದಿನಗಳಲ್ಲಿ ಆರಂಭವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಈಗಿನಿಂದಲೇ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಮುಂಬರುವ ಪ್ರಮುಖ ಸಭೆಯಲ್ಲಿ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದ ಸಮಿತಿಯು ಜಸ್​​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವ ಮತ್ತು ಗಾಯ ಮುಕ್ತರಾಗಿರುವ ಮೊಹಮ್ಮದ್ ಶಮಿ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳುವ ಕುರಿತು ಅಂತಿಮ ಮೊಹರು ಒತ್ತಲಿದೆ.

ಟೀಮ್ ಇಂಡಿಯಾಗೆ ಅನುಭವಿ ವೇಗಿ ಕಂಬ್ಯಾಕ್ ಸಾಧ್ಯತೆ!
Team India
ಝಾಹಿರ್ ಯೂಸುಫ್
|

Updated on: May 13, 2026 | 3:02 PM

Share

ಐಪಿಎಲ್ 2026 ಮುಗಿದ ಬೆನ್ನಲ್ಲೇ ಜೂನ್ 6 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಬೌಲಿಂಗ್ ವಿಭಾಗವನ್ನು ಅಂತಿಮಗೊಳಿಸಲು ಬಿಸಿಸಿಐ (BCCI) ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮುಂದಿನ ಕೆಲವು ದಿನಗಳಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಪಂದ್ಯಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲು ಮಂಡಳಿ ಯೋಚಿಸುತ್ತಿದ್ದು, ಗಾಯದಿಂದ ಚೇತರಿಸಿಕೊಂಡಿರುವ ಹಿರಿಯ ಬೌಲರ್ ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ಪುನರಾಗಮನದ ಬಗ್ಗೆ ಈ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

  • ಜಸ್​ಪ್ರೀತ್ ಬುಮ್ರಾ: ಈ ಪಂದ್ಯವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ವ್ಯಾಪ್ತಿಗೆ ಬರುವುದಿಲ್ಲ. ಅಲ್ಲದೆ ಐಪಿಎಲ್ ಮುಗಿದ ಕೇವಲ 6 ದಿನಗಳಲ್ಲಿ ಆರಂಭವಾಗುವುದರಿಂದ, ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಮಂಡಳಿ ನಿರ್ಧರಿಸಿದೆ. ವರ್ಷಾಂತ್ಯದ ಪ್ರಮುಖ 9 WTC ಟೆಸ್ಟ್ ಪಂದ್ಯಗಳಿಗಾಗಿ ಅವರನ್ನು ಕಾಯ್ದಿರಿಸಲಾಗುವುದು.
  • ಮೊಹಮ್ಮದ್ ಶಮಿ: ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿ ಕರೆತರುವ ಬಗ್ಗೆ ಬಿಸಿಸಿಐ ತೀವ್ರ ಚರ್ಚೆ ನಡೆಸುತ್ತಿದೆ. ಮೊಹಮ್ಮದ್ ಸಿರಾಜ್ ಜೊತೆ ಶಮಿ ಬೌಲಿಂಗ್ ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ.
  • ಯುವ ವೇಗಿಗಳಿಗೆ ಸೂಚನೆ: ಆಯ್ಕೆಯ ರೇಸ್‌ನಲ್ಲಿರುವ ಯುವ ವೇಗಿಗಳು ತಮ್ಮ ಬೌಲಿಂಗ್ ವರ್ಕ್‌ಲೋಡ್ (ಕಾರ್ಯಭಾರ) ಅನ್ನು ಹೆಚ್ಚಿಸಿಕೊಳ್ಳುವಂತೆ ಬಿಸಿಸಿಐ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ.
  • ಹೊಸ ಮುಖಗಳಿಗೆ ಅವಕಾಶ: ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದರೆ, ದೇಶಿ ಕ್ರಿಕೆಟ್‌ನಲ್ಲಿ ಮಿಂಚಿರುವ ಆಖಿಬ್ ನಬಿ, ಅನ್ಶುಲ್ ಕಂಬೋಜ್ ಮತ್ತು ಗುರ್ನೂರ್ ಬ್ರಾರ್ ಅವರಿಗೆ ಭಾರತ ತಂಡದ ಪರ ಆಡುವ ಅವಕಾಶ ಸಿಗಬಹುದು.

 ಭಾರತ vs ಅಫ್ಘಾನಿಸ್ತಾನ್ 2026 ಸರಣಿ ವೇಳಾಪಟ್ಟಿ:

  •  ಜೂನ್ 6: ಏಕೈಕ ಟೆಸ್ಟ್ ಪಂದ್ಯ | ಮುಲ್ಲನ್‌ಪುರ, ನ್ಯೂ ಚಂಡೀಗಢ್.
  •  ಜೂನ್ 14: ಮೊದಲ ಏಕದಿನ ಪಂದ್ಯ  | ಹೆಚ್​​ಪಿಸಿಎ ಮೈದಾನ, ಧರ್ಮಶಾಲಾ.
  •  ಜೂನ್ 17: ಎರಡನೇ ಏಕದಿನ ಪಂದ್ಯ | ಏಕಾನ ಸ್ಟೇಡಿಯಂ, ಲಕ್ನೋ.
  •  ಜೂನ್ 20: ಮೂರನೇ ಏಕದಿನ ಪಂದ್ಯ| ಚೆಪಾಕ್ ಸ್ಟೇಡಿಯಂ, ಚೆನ್ನೈ.

ಇದನ್ನೂ ಓದಿ: IPL 2026: ಈ 4 ತಂಡಗಳೇ ಪ್ಲೇಆಫ್ ಆಡಲಿದೆ: ಮೊಹಮ್ಮದ್ ಶಮಿ ಭವಿಷ್ಯ

ಒಟ್ಟಿನಲ್ಲಿ ಮುಂದಿನ ಪ್ರಮುಖ ವಿದೇಶಿ ಪ್ರವಾಸಗಳ ದೃಷ್ಟಿಯಿಂದ ಬಿಸಿಸಿಐ ಯುವ ಆಟಗಾರರ ಸಾಮರ್ಥ್ಯವನ್ನು ಪರೀಕ್ಷಿಸಲು ಅಫ್ಘಾನಿಸ್ತಾನ್ ವಿರುದ್ಧದ ಸರಣಿಯು ಅತ್ಯುತ್ತಮ ವೇದಿಕೆಯಾಗಿದೆ. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಅವರ ಗೈರುಹಾಜರಿಯಲ್ಲಿ ಭಾರತದ ಬೌಲಿಂಗ್ ಪಡೆ ಅಫ್ಘಾನ್ ಬ್ಯಾಟರ್‌ಗಳನ್ನು ಹೇಗೆ ಕಟ್ಟಿಹಾಕುತ್ತದೆ ಎಂಬುದೇ ಈಗ ದೊಡ್ಡ ಕುತೂಹಲ. ಹೀಗಾಗಿ ಈ ಸರಣಿಯಲ್ಲಿ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ