AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Auction: ಆರ್​ಸಿಬಿ ಸೇರಿದ ತಕ್ಷಣ ಸ್ಫೋಟಕ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಹೇಳಿದ್ದೇನು ಗೊತ್ತೇ?

Cameron Green in a video by RCB: ಐಪಿಎಲ್ 2024 ಹರಾಜಿಗು ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ತಂಡದಿಂದ ಕ್ಯಾಮರೂನ್ ಗ್ರೀನ್ ಅವರನ್ನು ಖರೀದಿ ಮಾಡಿದೆ. ಇದರ ಬೆನ್ನಲ್ಲೇ ಆರ್​ಸಿಬಿ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಗ್ರೀನ್ ಮಾತನಾಡಿರುವ ವಿಡಿಯೋ ಹಂಚಿಕೊಂಡಿದೆ.

IPL 2024 Auction: ಆರ್​ಸಿಬಿ ಸೇರಿದ ತಕ್ಷಣ ಸ್ಫೋಟಕ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಹೇಳಿದ್ದೇನು ಗೊತ್ತೇ?
Cameron Green RCB
Vinay Bhat
|

Updated on: Nov 28, 2023 | 7:23 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 2024 ಹರಾಜಿಗೂ (IPL 2024 Auction) ಮುನ್ನ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಗುಜರಾತ್ ಟೈಟಾನ್ಸ್​ನಿಂದ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ. ಇದೀಗ ಜಿಟಿ ಶುಭ್​ಮನ್ ಗಿಲ್ ಅವರಿಗೆ ನಾಯಕತ್ವದ ಪಟ್ಟ ನೀಡಿದೆ. ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂಬೈ ತಂಡದಲ್ಲಿದ್ದ ಕ್ಯಾಮರೂನ್ ಗ್ರೀನ್ ಅವರನ್ನು ಖರೀದಿ ಮಾಡಿದೆ. ಇದರ ಬೆನ್ನಲ್ಲೇ ಆರ್​ಸಿಬಿ ಪರ ಆಡುವ ಉತ್ಸಾಹವನ್ನು ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ವ್ಯಕ್ತಪಡಿಸಿದ್ದಾರೆ.

ಆರ್​ಸಿಬಿ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಕ್ಯಾಮರೂನ್ ಗ್ರೀನ್ ಮಾತನಾಡಿರುವ ವಿಡಿಯೋ ಹಂಚಿಕೊಂಡಿದೆ. “ಹೇ ಆರ್​ಸಿಬಿ ಅಭಿಮಾನಿಗಳೇ, ನಾನು ಕ್ಯಾಮ್ ಗ್ರೀನ್, ನಾನು ಆ್ಯಂಡಿ ಫ್ಲವರ್ (ತಂಡದ ಮುಖ್ಯ ಕೋಚ್) ಜೊತೆ ಆರ್​ಸಿಬಿ ತಂಡ ಸೇರಲು ಉತ್ಸುಕನಾಗಿದ್ದೇನೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಿಮ್ಮನ್ನು ನೋಡಲು ಕಾತುರನಾಗಿದ್ದೇನೆ, ಚೀಯರ್ಸ್,” ಎಂದು ಆರ್​ಸಿಬಿಯ ವಿಡಿಯೋದಲ್ಲಿ ಗ್ರೀನ್ ಹೇಳಿದ್ದಾರೆ.

ಇದನ್ನೂ ಓದಿ
Image
ಇಂದು IND vs AUS ತೃತೀಯ ಟಿ20 ಪಂದ್ಯ: ಸೂರ್ಯ ಪಡೆಯ ಟೀಮ್ ಬದಲಾಗುತ್ತಾ?
Image
3ನೇ ಟಿ20 ಪಂದ್ಯಕ್ಕೆ ತಂಡ ಬದಲಿಸ್ತಾರಾ ಸೂರ್ಯ? ಯಾರಿಗೆ ಅವಕಾಶ?
Image
ವಿವಾದಾತ್ಮಕ ಹೇಳಿಕೆ; ಕ್ರೀಡಾ ಸಚಿವರಿಗೆ ಗೇಟ್​ಪಾಸ್ ನೀಡಿದ ಲಂಕಾ ಸರ್ಕಾರ
Image
ರೆಡ್ ಆರ್ಮಿಗೆ ‘ಗ್ರೀನ್’ ಬಲ; ಆದರೂ ತಂಡದಲ್ಲಿದೆ ಅದೊಂದು ಕೊರತೆ..!

ಕ್ಯಾಮರೂನ್ ಗ್ರೀನ್ ಮಾತನಾಡಿರುವ ವಿಡಿಯೋ ಇಲ್ಲಿದೆ:

ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಕ್ಯಾಮರೂನ್ ಗ್ರೀನ್ ಅವರನ್ನು ಬರೋಬ್ಬರಿ 17.5 ಕೋಟಿ ರೂಪಾಯಿಗೆ ಖರೀದಿಸಿತ್ತು. ಐಪಿಎಲ್ 2023 ರಲ್ಲಿ 16 ಪಂದ್ಯಗಳನ್ನು ಆಡಿದ ಆಸ್ಟ್ರೇಲಿಯ ಆಟಗಾರ ಭರ್ಜರಿ ಪ್ರದರ್ಶನ ತೋರಿದ್ದರಯ. 452 ರನ್ ಗಳಿಸಿದ್ದಲ್ಲದೆ, ಅಜೇಯ ಶತಕ ಮತ್ತು ಎರಡು ಅರ್ಧ ಶತಕಗಳನ್ನು ಬಾರಿಸಿದ್ದರು. ಜೊತೆಗೆ ಆರು ವಿಕೆಟ್‌ಗಳನ್ನು ಪಡೆದಿದ್ದರು.

IPL 2024: ಮುಂಬೈಗೆ ಹಾರಿದ ಹಾರ್ದಿಕ್; ಗುಜರಾತ್ ತಂಡದ ನೂತನ ನಾಯಕ ಯಾರು ಗೊತ್ತಾ?

ಒಟ್ಟಾರೆಯಾಗಿ ಗ್ರೀನ್ ಅವರು 37 ಟಿ20I ಪಂದ್ಯಗಳನ್ನು ಆಡಿದ್ದು, 29.04 ರ ಸರಾಸರಿಯಲ್ಲಿ 697 ರನ್ ಗಳಿಸಿದ್ದಾರೆ, 151 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ ಇದೆ. 100* ರ ಅತ್ಯುತ್ತಮ ಸ್ಕೋರ್‌ನೊಂದಿಗೆ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದಾರೆ. 2/16 ರ ಅತ್ಯುತ್ತಮ ಅಂಕಿಅಂಶಗಳೊಂದಿಗೆ 11 ವಿಕೆಟ್‌ಗಳನ್ನು ಪಡೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹರಾಜಿಗೂ ಮುನ್ನ ಶ್ರೀಲಂಕಾದ ಸ್ಪಿನ್ನರ್ ವನಿಂದು ಹಸರಂಗ, ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ ಮತ್ತು ಭಾರತದ ವೇಗಿ ಹರ್ಷಲ್ ಪಟೇಲ್ ಅವರನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾದ ಇತರ ಆಟಗಾರರಲ್ಲಿ ನ್ಯೂಝಿಲೆಂಡ್ ಆಟಗಾರರಾದ ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ವೇಯ್ನ್ ಪಾರ್ನೆಲ್, ಇಂಗ್ಲೆಂಡ್‌ನ ಡೇವಿಡ್ ವಿಲ್ಲಿ ಮತ್ತು ಭಾರತದ ಆಟಗಾರರಾದ ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್ ಮತ್ತು ಕೇದಾರ್ ಜಾಧವ್ ಕೂಡ ಸೇರಿದ್ದಾರೆ. ಇದರ ಜೊತೆಗೆ ಆರ್​ಸಿಬಿ ಫ್ರಾಂಚೈಸಿ ಆಲ್‌ರೌಂಡರ್ ಮಯಾಂಕ್ ದಾಗರ್‌ಗೆ ಬದಲಾಗಿ ಸನ್‌ರೈಸರ್ಸ್ ಹೈದರಾಬಾದ್‌ಗೆ ತಮ್ಮ ಆಲ್‌ರೌಂಡರ್ ಶಹಬಾಜ್ ಅಹ್ಮದ್ ಅನ್ನು ವ್ಯಾಪಾರ ಮಾಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!