AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಭಾರತ-ಪಾಕ್ ಪಂದ್ಯ ನಡೆಯುತ್ತಾ? ನಡೆಯಲ್ವಾ? ಇಲ್ಲಿದೆ ಉತ್ತರ

T20 World Cup 2021: ಭಾರತ-ಪಾಕಿಸ್ತಾನ್ ಟಿ20 ವಿಶ್ವಕಪ್​ನಲ್ಲಿ ಐದು ಬಾರಿ ಮುಖಾಮುಖಿಯಾಗಿದೆ. ಈ ಐದು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರೋದು ವಿಶೇಷ.

India vs Pakistan: ಭಾರತ-ಪಾಕ್ ಪಂದ್ಯ ನಡೆಯುತ್ತಾ? ನಡೆಯಲ್ವಾ? ಇಲ್ಲಿದೆ ಉತ್ತರ
India vs Pakistan, T20 World cup 2021
TV9 Web
| Updated By: ಝಾಹಿರ್ ಯೂಸುಫ್|

Updated on: Oct 20, 2021 | 3:58 PM

Share

T20 World Cup 2021: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ್ ಪ್ರೇರಿತ ಉಗ್ರರು ನಾಗರೀಕರ ಹತ್ಯೆ ಹಾಗೂ ಭಯೋತ್ಪಾದನೆ ಚುಟುವಟಿಕೆಯನ್ನು ಮುಂದುವರೆಸಿದೆ. ಇತ್ತ ಟೀಮ್ ಇಂಡಿಯಾ (Team India) ಟಿ20 ವಿಶ್ವಕಪ್​ಗಾಗಿ (T20 World Cup 2021) ಸಕಲ ಸಿದ್ಧತೆಯಲ್ಲಿದೆ. ಅದರಲ್ಲೂ ಮೊದಲ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ್ ತಂಡವನ್ನು ಎದುರಿಸುತ್ತಿರುವುದು ವಿಶೇಷ. ಹೀಗಾಗಿಯೇ ಉಗ್ರರಿಗೆ ಬೆಂಬಲ ನೀಡುತ್ತಿರುವ ಪಾಕ್ ವಿರುದ್ದ ಭಾರತ ಕ್ರಿಕೆಟ್ ಆಡಬಾರದೆಂಬ ಕೂಗುಗಳು ಕೇಳಿ ಬರುತ್ತಿವೆ. ಅದರಲ್ಲೂ ಭಾರತ ಪಾಕ್ ವಿರುದ್ದದ ಮೊದಲ ಪಂದ್ಯದಿಂದ ಹಿಂದೆ ಸರಿಯಬೇಕೆಂಬ ಸೋಷಿಯಲ್ ಮೀಡಿಯಾ ಅಭಿಯಾನ ಕೂಡ ನಡೆಯುತ್ತಿದೆ.

ಇನ್ನು ಕೆಲ ರಾಜಕಾರಣಿಗಳು ಕೂಡ ಭಾರತ-ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ ಪಂದ್ಯವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ಯಾವುದೇ ಕಾರಣಕ್ಕೂ ಪಾಕಿಸ್ತಾನ್ ವಿರುದ್ದ ಆಡಬಾರದು ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯಗಳಲ್ಲೂ ಇದೆ. ಹೀಗಾಗಿಯೇ ಅಕ್ಟೋಬರ್ 24 ರಂದು ಪಂದ್ಯ ನಡೆಯಲಿದೆಯಾ ಅಥವಾ ರದ್ದಾಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಎಲ್ಲಾ ಪ್ರಶ್ನೆಗಳಿಗೆ ಇದೀಗ ಬಿಸಿಸಿಐ ಸ್ಪಷ್ಟ ಉತ್ತರ ನೀಡಿದ್ದಾರೆ. ಬಿಸಿಸಿಐ ತಿಳಿಸಿರುವಂತೆ ಪಾಕಿಸ್ತಾನ್ ವಿರುದ್ದದ ಪಂದ್ಯವು ಯಾವುದೇ ಕಾರಣಕ್ಕೂ ರದ್ದಾಗದು. ಏಕೆಂದರೆ ಐಸಿಸಿ ಸಂಘಟಿಸುವ ಟೂರ್ನಿಯಲ್ಲಿ ಪ್ರತಿಯೊಂದು ತಂಡವು ತನ್ನ ಎದುರಾಳಿ ವಿರುದ್ದ ಆಡಲೇಬೇಕು. ಇದನ್ನು ನಿರಾಕರಿಸುವ ಆಯ್ಕೆ ಯಾವುದೇ ಕ್ರಿಕೆಟ್ ಮಂಡಳಿಗೆ ಇರುವುದಿಲ್ಲ. ಹೀಗಾಗಿ ಅಕ್ಟೋಬರ್ 24 ರಂದು ಭಾರತ-ಪಾಕ್ ಪಂದ್ಯ ನಡೆದೇ ನಡೆಯಲಿದೆ.

ಇನ್ನು ಭಾರತ-ಪಾಕಿಸ್ತಾನ್ ನಡುವಣ ಪಂದ್ಯ ನಡೆಯುವ ಬಗ್ಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾಶ್ಮೀರದಲ್ಲಿ ನಡೆಯುತ್ತಿರುವ ನಾಗರಿಕರ ಹತ್ಯೆಯನ್ನು ನಾವು ಕೂಡ ಖಂಡಿಸುತ್ತೇವೆ. ಇಂತಹ ಕುಕೃತ್ಯಗಳನ್ನು ನಡೆಸುವ ಭಯೋತ್ಪಾದಕರ ವಿರುದ್ದ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಈ ಘಟನೆಯ ಕಾರಣದಿಂದಾಗಿ ನಾವು ಪಂದ್ಯವನ್ನು ರದ್ದುಗೊಳಿಸುವಂತಿಲ್ಲ. ಹೀಗಾಗಿ ನಿಗದಿಯಂತೆ ಭಾರತ-ಪಾಕ್ ನಡುವಣ ಪಂದ್ಯ ನಡೆಯಲಿದೆ ಎಂದಿದ್ದಾರೆ.

ಇದುವರೆಗೆ ಭಾರತ-ಪಾಕಿಸ್ತಾನ್ ಟಿ20 ವಿಶ್ವಕಪ್​ನಲ್ಲಿ ಐದು ಬಾರಿ ಮುಖಾಮುಖಿಯಾಗಿದೆ. ಈ ಐದು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರೋದು ವಿಶೇಷ. ಇನ್ನು ಅಕ್ಟೋಬರ್ 24 ರಂದು ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲೂ ಭಾರತ ಪಾಕ್​ ಮಣ್ಣು ಮುಕ್ಕಿಸಿ ಖಡಕ್ ತಿರುಗೇಟು ನೀಡುವ ವಿಶ್ವಾಸದಲ್ಲಿದೆ.

ಇದನ್ನೂ ಓದಿ: T20 World Cup 2021: ಕೆಎಲ್ ರಾಹುಲ್​ ಆರಂಭಿಕನಲ್ವಾ: ಕೊಹ್ಲಿ ಸಜ್ಜಾಗಿರಲು ಹೇಳಿದ್ದು ಯಾರಿಗೆ?

ಇದನ್ನೂ ಓದಿ:T20 World Cup 2021: ಟಿ20 ವಿಶ್ವಕಪ್ ಗೆದ್ದವರಿಗೆ ಸಿಗೋ ಹಣವೆಷ್ಟು? ಸೋತರೆ ಸಿಗೋದೆಷ್ಟು? 

ಇದನ್ನೂ ಓದಿ: T20 World Cup Winners: ಟಿ20 ವಿಶ್ವಕಪ್​ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ

(Can India vs Pakistan T20 World Cup 2021 match get cancelled?)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ