AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Azharuddin: ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿ ಭ್ರಷ್ಟಾಚಾರ: ಮೊಹಮ್ಮದ್ ಅಜರುದ್ದೀನ್ ವಿರುದ್ಧ ಪ್ರಕರಣ ದಾಖಲು

Case against Mohd Azharuddin: ಹಣವನ್ನು ದುರುಪಯೋಗಪಡಿಸಿದ ಆರೋಪದ ಮೇಲೆ ಉಪ್ಪಳ ಪೊಲೀಸ್ ಠಾಣೆಯಲ್ಲಿ ಎಚ್‌ಸಿಎ ಮಾಜಿ ಅಧ್ಯಕ್ಷ ಅಜರುದ್ದೀನ್ ಮತ್ತು ಇತರ ಮಾಜಿ ಪದಾಧಿಕಾರಿಗಳ ವಿರುದ್ಧ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Mohammad Azharuddin: ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿ ಭ್ರಷ್ಟಾಚಾರ: ಮೊಹಮ್ಮದ್ ಅಜರುದ್ದೀನ್ ವಿರುದ್ಧ ಪ್ರಕರಣ ದಾಖಲು
Mohammad Azharuddin
Vinay Bhat
|

Updated on:Oct 20, 2023 | 2:03 PM

Share

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ (Mohammad Azharuddin) ಮತ್ತು ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ (ಎಚ್‌ಸಿಎ) ಕೆಲ ಮಾಜಿ ಪದಾಧಿಕಾರಿಗಳ ವಿರುದ್ಧ ಹಣವನ್ನು ದುರುಪಯೋಗಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಕಾಂತೆ ಬೋಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಹೈದರಾಬಾದ್​ನ ಉಪ್ಪಳ ಪೊಲೀಸ್ ಠಾಣೆಯಲ್ಲಿ ಎಚ್‌ಸಿಎ ಮಾಜಿ ಅಧ್ಯಕ್ಷ ಅಜರುದ್ದೀನ್ ಮತ್ತು ಇತರ ಮಾಜಿ ಪದಾಧಿಕಾರಿಗಳ ವಿರುದ್ಧ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏತನ್ಮಧ್ಯೆ, ಅಜರುದ್ದೀನ್ ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸುಳ್ಳು ಎಂದು ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಅವುಗಳಿಗೆ ಉತ್ತರಿಸುತ್ತೇನೆ ಎಂದಿದ್ದಾರೆ. “ಸಿಇಒ, ಹೆಚ್‌ಸಿಎ ನೀಡಿದ ದೂರಿನ ಮೇರೆಗೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳನ್ನು ನಾನು ನೋಡಿದ್ದೇನೆ. ಇವೆಲ್ಲವೂ ಸುಳ್ಳು ಮತ್ತು ಪ್ರೇರಿತ ಆರೋಪಗಳು. ನನ್ನ ವಿರುದ್ಧದ ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇನೆ. ಇದು ನನ್ನ ಪ್ರತಿಸ್ಪರ್ಧಿಗಳು ನನ್ನ ಖ್ಯಾತಿಯನ್ನು ಹಾಳುಮಾಡಲು ಮಾಡಿದ ಪಿತೂರಿ. ನಾವು ಇದಕ್ಕೆಲ್ಲ ಜಗ್ಗುವುದಿಲ್ಲ, ಹೋರಾಡುತ್ತೇವೆ,” ಎಂದು ಹೇಳಿದ್ದಾರೆ.

IND vs BAN, ICC World Cup: ಪೋಸ್ಟ್ ಮ್ಯಾಚ್​ನಲ್ಲಿ ಕೊಹ್ಲಿ ಶತಕದ ಬಗ್ಗೆ ಒಂದೂ ಮಾತನಾಡದ ರೋಹಿತ್

ಇದನ್ನೂ ಓದಿ
Image
ಸತತ 4 ಗೆಲುವಿನ ಬಳಿಕ ಬಿಸಿಸಿಐಯಿಂದ ಟೀಮ್ ಇಂಡಿಯಾ ಆಟಗಾರರಿಗೆ ಬಂಪರ್ ಆಫರ್
Image
ಜಯದ ಬೆನ್ನಲ್ಲೆ ಭಾರತಕ್ಕೆ ಶಾಕ್: ಸ್ಟಾರ್ ಆಟಗಾರ ಮುಂದಿನ ಪಂದ್ಯದಿಂದ ಔಟ್
Image
ಶತಕಕ್ಕೂ ಮುನ್ನ ಕೊಹ್ಲಿ-ರಾಹುಲ್ ನಡುವೆ ಏನು ಮಾತುಕತೆ ಆಯಿತು?
Image
ಕೊಹ್ಲಿ ಶತಕ ಗಳಿಸಲೆಂದು ಕ್ರಿಕೆಟ್ ನಿಯಮ ಮರೆತಿಲ್ಲ ಅಂಪೈರ್: ಇಲ್ಲಿದೆ ಸತ್ಯ

ತೆಲಂಗಾಣ ಹೈಕೋರ್ಟ್‌ಗೆ ವಿವಿಧ ಪಕ್ಷಗಳು ಸಲ್ಲಿಸಿದ ಹಿಂದಿನ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಮಾರ್ಚ್ 1, 2020 ರಿಂದ ಫೆಬ್ರವರಿ 28, 2023 ರವರೆಗೆ ಅಸೋಸಿಯೇಷನ್‌ನ ಫೊರೆನ್ಸಿಕ್ ಆಡಿಟ್ (ಮಧ್ಯಂತರ ವರದಿ) ಅನ್ನು ಸಲ್ಲಿಸಿತು. ಇದರಲ್ಲಿ ಲೆಕ್ಕಪರಿಶೋಧಕರು ಹಣಕಾಸಿನ ನಷ್ಟದ ಕೆಲವು ದಾಖಲೆಯನ್ನು ಗುರುತಿಸಿದ್ದಾರೆ. ಅಲ್ಲದೆ, ಎಚ್‌ಸಿಎಗೆ ಸೇರಿದ ಆಸ್ತಿಗಳ ದುರುಪಯೋಗ ಕೂಡ ಇದರಲ್ಲಿದೆ.

ದೂರುದಾರರ ಪ್ರಕಾರ, ಫೊರೆನ್ಸಿಕ್ ಆಡಿಟ್ (ಮಧ್ಯಂತರ ವರದಿ) ಆಧಾರದ ಮೇಲೆ, ಮೂರನೇ ವ್ಯಕ್ತಿಯ ಮಾರಾಟಗಾರರೊಂದಿಗೆ HCA ಪರವಾಗಿ ನಮೂದಿಸಲಾದ ಕೆಲವು ವಹಿವಾಟುಗಳು ನಿಜವಲ್ಲ ಎಂದು ಕಂಡುಬಂದಿದೆ ಮತ್ತು ವಹಿವಾಟುಗಳನ್ನು ಹಾನಿಕರ ರೀತಿಯಲ್ಲಿ ನಡೆಸಲಾಗಿದೆ ಎಂಬುದು ಸ್ಪಷ್ಟವಾಗಿದೆ. ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಗ್ನಿಶಾಮಕ ಉಪಕರಣಗಳ ಸ್ಥಾಪನೆಗೆ ಸಂಬಂಧಿಸಿದಂತೆ ಸಿಎ ಸಂಸ್ಥೆಯು ಅವಲೋಕನ ಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ.

“ಮಾರ್ಚ್ 3, 2021 ರಂದು ನಡೆದ 9 ನೇ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಸಂಘದ ಆಗಿನ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಅಗ್ನಿಶಾಮಕ ಉಪಕರಣಗಳ ಬಗ್ಗೆ ಚರ್ಚೆ ಮಾಡಿದ್ದರು. ಆದರೆ, ನಂತರ ಯಾವುದೇ ಕಾರಣ ನೀಡದೆ ಯಾವುದೇ ಬಿಡ್‌ದಾರರಿಗೆ ಟೆಂಡರ್‌ ಹಂಚಿಕೆ ಮಾಡಿರಲಿಲ್ಲ. ನಂತರ, ಅದೇ ಕೆಲಸಕ್ಕಾಗಿ ಎಚ್‌ಸಿಎ ಎರಡನೇ ಟೆಂಡರ್ ಅನ್ನು ಕರೆಯಿತು”ಎಂದು ದೂರುದಾರರು ಹೇಳಿದ್ದಾರೆ. ಎಚ್‌ಸಿಎಗೆ ಎಷ್ಟು ನಷ್ಟವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿವರವಾದ ತನಿಖೆಯ ಅಗತ್ಯವಿದೆ ಎಂದು ದೂರುದಾರರು ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:02 pm, Fri, 20 October 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!