AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಮತ್ತೆ ಅಬ್ಬರಸಿದ ಕೃಷ್ಣ; ಚೆನ್ನೈ ತಂಡವನ್ನು 67 ರನ್​ಗಳಿಂದ ಮಣಿಸಿದ ಕರ್ನಾಟಕ

CCL 2024: ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್​ ಲೀಗ್ 2024 ರ ಟೇಬಲ್ ಟಾಪರ್​ಗಳ ಕಾಳಗದಲ್ಲಿ ಚೆನ್ನೈ ರೈನೋಸ್ ತಂಡವನ್ನು 67 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್​ ತಂಡ ಲೀಗ್​ನಲ್ಲಿ ಸತತ ಮೂರನೇ ಜಯ ದಾಖಲಿಸಿದೆ.

CCL 2024: ಮತ್ತೆ ಅಬ್ಬರಸಿದ ಕೃಷ್ಣ; ಚೆನ್ನೈ ತಂಡವನ್ನು 67 ರನ್​ಗಳಿಂದ ಮಣಿಸಿದ ಕರ್ನಾಟಕ
ಕರ್ನಾಟಕ ತಂಡ
ಪೃಥ್ವಿಶಂಕರ
|

Updated on:Mar 03, 2024 | 11:33 PM

Share

ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್​ ಲೀಗ್ (Celebrity Cricket League) 2024 ರ ಟೇಬಲ್ ಟಾಪರ್​ಗಳ ಕಾಳಗದಲ್ಲಿ ಚೆನ್ನೈ ರೈನೋಸ್ ತಂಡವನ್ನು 67 ರನ್​ಗಳಿಂದ ಮಣಿಸಿದ ಕರ್ನಾಟಕ ಬುಲ್ಡೋಜರ್ಸ್​ ತಂಡ (Chennai Rhinos vs Karnataka Bulldozers) ಲೀಗ್​ನಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಮುಂಬೈ ಹೀರೋಸ್ ತಂಡವನ್ನು ಮಣಿಸಿದ್ದ ಪ್ರದೀಪ್ ಪಡೆ, ತನ್ನ ಎರಡನೇ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್​ ತಂಡವನ್ನು 30 ರನ್​ಗಳಿಂದ ಮಣಿಸಿತ್ತು. ಇದೀಗ ನಡೆದ ಮೂರನೇ ಪಂದ್ಯದಲ್ಲಿ ಗೆಲುವಿಗೆ 202 ರನ್ ಟಾರ್ಗೆಟ್ ಪಡೆದಿದ್ದ ಚೆನ್ನೈ ರೈನೋಸ್ ತಂಡ ನಿಗದಿತ 10 ಓವರ್​ಗಳಲ್ಲಿ 134 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಕರ್ನಾಟಕ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದಲ್ಲದೆ, ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಆರಂಭಿಕರ ಅಬ್ಬರ

ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಕರ್ನಾಟಕ ಬುಲ್ಡೋಜರ್ಸ್​ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡ ಮೊದಲ 10 ಓವರ್​ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಬರೋಬ್ಬರಿ 137 ರನ್ ಕಲೆಹಾಕಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಪ್ರದೀಪ್ ಹಾಗೂ ಕೃಷ್ಣ ಕೇವಲ 5 ಓವರ್​ಗಳಲ್ಲಿ 90 ರನ್ ಕಲೆಹಾಕಿ ಉತ್ತಮ ಜೊತೆಯಾಟ ನೀಡಿತು. ಇದರಲ್ಲಿ ಪ್ರದೀಪ್ ಕೇವಲ 33 ಎಸೆತಗಳಲ್ಲಿ 65 ರನ್ ಕಲೆಹಾಕಿದರೆ, ಲೀಗ್​ನಲ್ಲಿ ಸತತ ನಾಲ್ಕನೇ ಶತಕ ಸಿಡಿಸಿದ ಕೃಷ್ಣ ಕೇವಲ 24 ಎಸೆತಗಳಲ್ಲಿ 57 ರನ್ ಚಚ್ಚಿದರು.

ಕರಣ್ ಹ್ಯಾಟ್ರಿಕ್ ವಿಕೆಟ್

ಈ ಗುರಿ ಬೆನ್ನಟ್ಟಿದ ಚೆನ್ನೈ ತಂಡ ಮೊದಲ 10 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 84 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಚೆನ್ನೈ ಪರ ವಿಕ್ರಾಂತ್ 19 ರನ್ ಬಾರಿಸಿ ಅತ್ಯಧಿಕ ಸ್ಕೋರರ್ ಎನಿಸಿಕೊಂಡರು. ರಮಣ ಹಾಗೂ ಅಜಯ್ ತಲಾ 12 ರನ್ ಬಾರಿಸಿದರು. ಉಳಿದಂತೆ ತಂಡದ ಯಾವುದೇ ಬ್ಯಾಟರ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಇತ್ತ ಕರ್ನಾಟಕ ಪರ ವೇಗಿಗಳಾದ ಕರಣ್ ಹಾಗೂ ಕಾರ್ತಿಕ್ ತಲಾ 3 ವಿಕೆಟ್ ಪಡೆದರೆ, ಸುನೀಲ್ ಹಾಗೂ ಚಂದನ್ ತಲಾ ಒಂದೊಂದು ವಿಕೆಟ್ ಪಡೆದರು. ಇದರಲ್ಲಿ ವಿಶೇಷತೆ ಎಂದರೆ ವೇಗಿ ಕರಣ್ ಈ ಸೀಸನ್​ನ ಮೊದಲ ಹ್ಯಾಟ್ರಿಕ್ ಸಂಪಾಧಿಸಿದರು.

53 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡಕ್ಕೆ ಕಾರ್ತಿಕ್ ಹಾಗೂ ರಾಜೀವ್ ಸ್ಫೋಟಕ ಆರಂಭ ನೀಡಿದರು. ಆರಂಭದಿಂದಲೂ ಬೌಂಡರಿಗಳ ಮಳೆಗರದ ರಾಜೀವ್ ಕೇವಲ 25 ಎಸೆತಗಳಲ್ಲಿ 63 ರನ್ ಕಲೆಹಾಕಿದರು. ಎರಡನೇ ಇನ್ನಿಂಗ್ಸ್​ನಲ್ಲೂ ಅಬ್ಬರಿಸಿದ ಕೃಷ್ಣ ಬ್ಯಾಕ್ ಟು ಬ್ಯಾಕ್ ಸಿಕ್ಸರ್ ಸಿಡಿಸಿ ತಂಡವನ್ನು 148 ರನ್​ಗಳಿಗೆ ಕೊಂಡೊಯ್ಯುವಲ್ಲಿ ನೆರವಾದರು.

ಗೆಲುವಿಗೆ 202 ರನ್​ಗಳ ಗುರಿ ಬೆನ್ನಟ್ಟಿದ ಚೆನ್ನೈ ರೈನೋಸ್ ತಂಡ ನಿಗದಿತ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 134 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ಆರಂಭಿಕ ಅಜೇಯ 29 ಎಸೆತಗಳಲ್ಲಿ 71 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:32 pm, Sun, 3 March 24

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!