AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಸಿಸಿಎಲ್​ನಲ್ಲಿ ಅಬ್ಬರಿಸಲು ಸಜ್ಜಾದ ಪಂಜಾಬ್ ದಿ ಶೇರ್; ಮೊದಲ ಪಂದ್ಯ ಯಾವಾಗ ಗೊತ್ತಾ?

CCL 2024 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ಗೆ ದಿನಗಣನೆ ಆರಂಭವಾಗಿದ್ದು, ಭಾರತ ಚಿತ್ರರಂಗದ ದಿಗ್ಗಜರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಫೆಬ್ರವರಿ 23 ರಿಂದ ಆರಂಭವಾಗುವ ಸಿಸಿಎಲ್​ನ 10ನೇ ಸೀಸನ್​ ಮಾರ್ಚ್ 17 ರವರೆಗೆ ನಡೆಯಲ್ಲಿದೆ.

CCL 2024: ಸಿಸಿಎಲ್​ನಲ್ಲಿ ಅಬ್ಬರಿಸಲು ಸಜ್ಜಾದ ಪಂಜಾಬ್ ದಿ ಶೇರ್; ಮೊದಲ ಪಂದ್ಯ ಯಾವಾಗ ಗೊತ್ತಾ?
ಪಂಜಾಬ್ ದಿ ಶೇರ್ ತಂಡ
ಪೃಥ್ವಿಶಂಕರ
|

Updated on:Jan 28, 2024 | 8:05 PM

Share

ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ಗೆ (Celebrity Cricket League 2024) ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಫೆಬ್ರವರಿ 23 ರಿಂದ ಆರಂಭವಾಗುವ ಸಿಸಿಎಲ್​ನ 10ನೇ ಸೀಸನ್​ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಲೀಗ್ ಸುತ್ತು ಮಾರ್ಚ್​ 10 ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್‌ ಸುತ್ತು ಆರಂಭವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಯುನೈಟೆಡ್ ಅರಬ್ ಎಮಿರೇಟ್ಸ್‌ನ (United Arab Emirates) ಶಾರ್ಜಾದಲ್ಲಿ ನಡೆಯಲ್ಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ.

5 ನಗರಗಳಲ್ಲಿ ನಡೆಯಲ್ಲಿದೆ ಲೀಗ್

ಭಾರತದ ಎಂಟು ಚಲನಚಿತ್ರೋದ್ಯಮಗಳ ಸೂಪರ್‌ಸ್ಟಾರ್‌ಗಳನ್ನು ಒಳಗೊಂಡಿರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಮೇಲೆ ಹೇಳಿದಂತೆ ಯುಎಇಯ ಶಾರ್ಜಾದಲ್ಲಿ ಲೀಗ್​ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್​ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್​ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ. ಅಂದರೆ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ.

8 ತಂಡಗಳು ಹೀಗಿವೆ

  • ಮುಂಬೈ ಹೀರೋಸ್
  • ಕೇರಳ ಸ್ಟ್ರೈಕರ್ಸ್
  • ತೆಲುಗು ವಾರಿಯರ್ಸ್
  • ಭೋಜ್‌ಪುರಿ ದಬಾಂಗ್ಸ್
  • ಕರ್ನಾಟಕ ಬುಲ್ಡೋಜರ್ಸ್
  • ಬೆಂಗಾಲ್ ಟೈಗರ್ಸ್
  • ಚೆನ್ನೈ ರೈನೋಸ್
  • ಪಂಜಾಬ್ ದಿ ಶೇರ್

ಪಂಜಾಬ್​ಗೆ ಸೋನು ನಾಯಕ

ಈ ಎಂಟು ಫ್ರಾಂಚೈಸಿಗಳ ಪೈಕಿ, ಪಂಜಾಬ್ ದಿ ಶೇರ್ ಈ ಬಾರಿ ಕಪ್ ಗೆಲ್ಲುವ ಸಲುವಾಗಿ ಬಲಿಷ್ಠ ತಂಡವನ್ನೇ ಕಟ್ಟಿಕೊಂಡು ಅಖಾಡಕ್ಕಿಳಿಯುತ್ತಿದೆ. ತಂಡದ ನಾಯಕತ್ವ ಬಾಲಿವುಡ್‌ ನಾಯಕ ನಟ ಸೋನು ಸೂದ್ ವಹಿಸಿಕೊಂಡಿದ್ದು, ತಂಡವು ಲೀಗ್​ನ ಮೊದಲ ಪಂದ್ಯವನ್ನು ಫೆಬ್ರವರಿ 25 ರಂದು ಚೆನ್ನೈ ರೈನೋಸ್ ವಿರುದ್ಧ ಆಡಲಿದೆ.

ಅಭ್ಯಾಸ ಆರಂಭಿಸಿದ ಪಂಜಾಬ್

ಈ ಲೀಗ್​ಗಾಗಿ ಭರ್ಜರಿ ತಯಾರಿಯಲ್ಲಿ ತೊಡಗಿರುವ ಪಂಜಾಬ್ ತಂಡವು, ಲೀಗ್​ನ ಮೊದಲ ಪಂದ್ಯಕ್ಕೂ ಮುನ್ನ ಕೆಲವು ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಅದರಂತೆ ಡಿಸೆಂಬರ್ 16 ರಂದು ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡ, ಪಂಜಾಬ್ ಎಜುಕೇಟರ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಆ ಬಳಿಕ ಜನವರಿ 27 ರಂದು IRS ಆಫೀಸರ್ಸ್ XI ತಂಡದ ವಿರುದ್ಧ ಎರಡನೇ ಅಭ್ಯಾಸ ಪಂದ್ಯವನ್ನು ಆಡಿತ್ತು. ಇನ್ನು ಫೆಬ್ರವರಿ ತಿಂಗಳಲ್ಲಿ ತಂಡ ಇನ್ನೂ 3 ಅಭ್ಯಾಸ ಪಂದ್ಯಗಳನ್ನು ಆಡಲಿದ್ದು, ಆ ನಂತರ ಸಿಸಿಎಲ್​ಗೆ ಲಗ್ಗೆ ಇಡಲಿದೆ. ಈ ಭಾರಿ ಬಲಿಷ್ಠವಾಗಿ ಕಾಣುತ್ತಿರುವ ಪಂಜಾಬ್ ದಿ ಶೇರ್ ತಂಡದ ಮಾಧ್ಯಮ ಪಾಲುದಾರಿಕೆಯನ್ನು ಟಿವಿ9 ನೆಟ್‌ವರ್ಕ್ ಮತ್ತು ನ್ಯೂಸ್ 9 ಪಡೆದುಕೊಂಡಿದೆ.

ಕ್ರಿಕೆಟ್‌ನೊಂದಿಗೆ ಟಿವಿ9 ನೆಟ್‌ವರ್ಕ್ ಒಡನಾಟ

ಏತನ್ಮಧ್ಯೆ, ಟಿವಿ9 ನೆಟ್‌ವರ್ಕ್ ಕ್ರಿಕೆಟ್ ಲೋಕದಲ್ಲೂ ತನ್ನ ಛಾಪು ಮೂಡಿಸಿದ್ದು, ಟಿವಿ9 ಗ್ರೂಪ್ ಈಗಾಗಲೇ ಕ್ರಿಕೆಟ್​ನ ಮಿಲೇನಿಯರ್ ಕೂಸಾದ ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್‌ ಫ್ರಾಂಚೈಸಿಗಳ ಪ್ರಾಯೋಜಕತ್ವವನ್ನು ನಿರ್ವಹಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Sun, 28 January 24

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!