AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2024: ಸಿಸಿಎಲ್ 10ನೇ ಸೀಸನ್​ಗೆ ಅದ್ಧೂರಿ ಚಾಲನೆ; ಕಿಚ್ಚನ ಟೀಂ ಕಣಕ್ಕಿಳಿಯುವುದು ಯಾವಾಗ?

CCL 2024: 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಿನ್ನೆಯಿಂದ ಅಂದರೆ ಫೆಬ್ರವರಿ 23 ರಿಂದ ಆರಂಭವಾಗಿದೆ.​ ಲೀಗ್ ಸುತ್ತು ಮಾರ್ಚ್​ 10 ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್‌ ಸುತ್ತು ಆರಂಭವಾಗಲಿದೆ.

CCL 2024: ಸಿಸಿಎಲ್ 10ನೇ ಸೀಸನ್​ಗೆ ಅದ್ಧೂರಿ ಚಾಲನೆ; ಕಿಚ್ಚನ ಟೀಂ ಕಣಕ್ಕಿಳಿಯುವುದು ಯಾವಾಗ?
ಸಿಸಿಎಎಲ್ 2024
ಪೃಥ್ವಿಶಂಕರ
|

Updated on:Feb 24, 2024 | 6:12 PM

Share

10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್​(Celebrity Cricket League 2024) ನಿನ್ನೆಯಿಂದ ಅಂದರೆ ಫೆಬ್ರವರಿ 23 ರಿಂದ ಆರಂಭವಾಗಿದೆ.​ ಲೀಗ್ ಸುತ್ತು ಮಾರ್ಚ್​ 10 ರವರೆಗೆ ನಡೆಯಲಿದ್ದು, ಈ ಸುತ್ತಿನಲ್ಲಿ 16 ಪಂದ್ಯಗಳು ನಡೆಯಲಿವೆ. ಆ ಬಳಿಕ ಪ್ಲೇಆಫ್‌ ಸುತ್ತು ಆರಂಭವಾಗಲಿದೆ. ಮಾರ್ಚ್​ 15 ರಂದು ಕ್ವಾಲಿಫೈಯರ್ 1 ಪಂದ್ಯ ಹಾಗೂ ಎಲಿಮಿನೇಟರ್ 1 ಪಂದ್ಯ ನಡೆದರೆ, ಮಾರ್ಚ್​ 16 ರಂದು ಕ್ವಾಲಿಫೈಯರ್ 2 ಪಂದ್ಯ ನಡೆಯಲ್ಲಿದೆ. ಇದರಲ್ಲಿ ಕ್ವಾಲಿಫೈಯರ್ 1 ರಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್ 1 ರಲ್ಲಿ ಗೆದ್ದ ತಂಡ ಮುಖಾಮುಖಿಯಾಗಲಿವೆ. ಮಾರ್ಚ್​ 17 ರಂದು ಫೈನಲ್ ಪಂದ್ಯ ನಡೆಯಲಿದ್ದು, ಇದರಲ್ಲಿ ಕ್ವಾಲಿಫೈಯರ್ 1 ರಲ್ಲಿ ಗೆದ್ದ ತಂಡ ಹಾಗೂ ಕ್ವಾಲಿಫೈಯರ್ 2 ರಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿವೆ.

ಟೂರ್ನಿಯ ಮೊದಲ ಐದು ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ನಡೆಯಲ್ಲಿವೆ. ಅದರಂತೆ ನಿನ್ನೆ ನಡೆದ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೇರಳ ಸ್ಟ್ರೈಕರ್ಸ್ ತಂಡವನ್ನು 9 ರನ್​ಗಳಿಂದ ಮಣಿಸಿದ ಮುಂಬೈ ಹೀರೋಸ್ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ.

ಇನ್ನಿಂಗ್ಸ್ ಮಾದರಿಯಲ್ಲಿ ಲೀಗ್

ವಾಸ್ತವವಾಗಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ 20 ಓವರ್​ನ ಪಂದ್ಯಾವಳಿಯಾಗಿದ್ದು, ಇದನ್ನು ಇನ್ನಿಂಗ್ಸ್ ರೂಪದಲ್ಲಿ ಆಡಲಾಗುತ್ತದೆ. ಅಂದರೆ ಮೊದಲು ಬ್ಯಾಟಿಂಗ್ ಮಾಡುವ ತಂಡ 10 ಓವರ್​ಗಳನ್ನು ಮಾತ್ರ ಆಡಬೇಕು. ಆ ನಂತರ ಬೌಲಿಂಗ್ ಮಾಡಿದ ತಂಡ ಕೂಡ 10 ಓವರ್ ಬ್ಯಾಟಿಂಗ್‌ ಮಾಡಬೇಕಾಗುತ್ತದೆ. ಇಲ್ಲಿಗೆ ಮೊದಲ ಇನ್ನಿಂಗ್ಸ್ ಮುಕ್ತಾಯವಾಗುತ್ತದೆ. ನಂತರ ಎರಡೂ ತಂಡಗಳು ಇನ್ನುಳಿದ 10 ಓವರ್​ಗಳನ್ನು ಆಡಬೇಕಾಗುತ್ತದೆ.

ಅದರಂತೆ ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಮೊದಲ 10 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿತು. ನಂತರ ಬ್ಯಾಟಿಂಗ್ ಆರಂಭಿಸಿದ ಕೇರಳ ತಂಡ ಮೊದಲ 10 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 84 ರನ್ ಕಲೆಹಾಕಿತು. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 8 ರನ್​ಗಳ ಮುನ್ನಡೆ ಕಾಯ್ದುಕೊಂಡಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಮುಂಬೈ ತಂಡ ಉಳಿದ 10 ಓವರ್​ಗಳಲ್ಲಿ 100 ರನ್ ಕಲೆಹಾಕಿತು. ಈ ಮೂಲಕ ಕೇರಳ ತಂಡಕ್ಕೆ 92 ರನ್​ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಕೇರಳ ತಂಡ ನಿಗದಿತ 10 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 83 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಅಂತಿಮವಾಗಿ ಮುಂಬೈ 9 ರನ್​ಗಳಿಂದ ಜಯದ ನಗೆ ಬೀರಿತು.

ಇಂದು ಎಷ್ಟು ಪಂದ್ಯಗಳು?

ವಾರಾಂತ್ಯವಾಗಿರುವುದರಿಂದ ಇಂದು ಡಬಲ್ ಹೆಡರ್ ಇದೆ. ಅಂದರೆ ಇಂದು ಒಂದೇ ದಿನ ಎರಡು ಪಂದ್ಯಗಳು ನಡೆಯುತ್ತಿವೆ. ಮಧ್ಯಾಹ್ನ 2:30 ಕ್ಕೆ ಆರಂಭವಾಗಿರುವ ಪಂದ್ಯದಲ್ಲಿ ತೆಲುಗು ವಾರಿಯರ್ಸ್​ ಹಾಗೂ ಭೋಜ್​ಪುರಿ ದಬಾಂಗ್ಸ್ತಂಡಗಳು ಮುಖಾಮುಖಿಯಾಗಿವೆ. ಇಂದು ಸಂಜೆ ನಡೆಯುವ ಪಂದ್ಯದಲ್ಲಿ ಕೇರಳ ಸ್ಟ್ರೈಕರ್ಸ್ ಹಾಗೂ ಬೆಂಗಾಲ್ ಟೈಗರ್ಸ್​ ತಂಡಗಳು ಮುಖಾಮುಖಿಯಾಗಲಿವೆ.

ನಾಳೆಯೂ ಡಬಲ್ ಹೆಡರ್

ನಾಳೆಯೂ ಸಹ ಡಬಲ್ ಹೆಡರ್ ಪಂದ್ಯ ಇದ್ದು, ದಿನದ ಮೊದಲ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಪಂಜಾಬ್ ದಿ ಶೇರ್ ತಂಡಗಳು ಮುಖಾಮುಖಿಯಾದರೆ, ಎರಡನೇ ಪಂದ್ಯದಲ್ಲಿ ಬಹು ನಿರೀಕ್ಷಿತ ಕರ್ನಾಟಕ ಬುಲ್ಡೋಜರ್ಸ್​ ಹಾಗೂ ಮುಂಬೈ ಹೀರೋಸ್ ತಂಡಗಳು ಮುಖಾಮುಖಿಯಾಗಲಿವೆ.

ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಅನ್ನು ಸೋನಿ ಸ್ಫೋಟ್ರ್ಸ್​ ನೆಟ್​ವರ್ಕ್​ನಲ್ಲಿ ಉಚಿತವಾಗಿ ಟಿವಿಯಲ್ಲಿ ವೀಕ್ಷಿಸಬಹುದಾಗಿದೆ. ಹಾಗೆಯೇ ಮೊಬೈಲ್​ನಲ್ಲಿ ಜಿಯೋ ಸಿನಿಮಾ ಆ್ಯಪ್​ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.

ಟಿವಿ9ಗೆ ಮಾಧ್ಯಮ ಪ್ರಾಯೋಜಕತ್ವ

10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನ ಮಾಧ್ಯಮ ಪಾಲುದಾರಿಕೆಯನ್ನು ಟಿವಿ9 ನೆಟ್‌ವರ್ಕ್ ಮತ್ತು ನ್ಯೂಸ್ 9 ಪಡೆದುಕೊಂಡಿದೆ. ಟಿವಿ9 ನೆಟ್‌ವರ್ಕ್ ಕ್ರಿಕೆಟ್ ಲೋಕದಲ್ಲೂ ತನ್ನ ಛಾಪು ಮೂಡಿಸಿದ್ದು, ಟಿವಿ9 ಗ್ರೂಪ್ ಈಗಾಗಲೇ ಕ್ರಿಕೆಟ್​ನ ಮಿಲೇನಿಯರ್ ಕೂಸಾದ ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್‌ ಫ್ರಾಂಚೈಸಿಗಳ ಪ್ರಾಯೋಜಕತ್ವವನ್ನು ನಿರ್ವಹಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Sat, 24 February 24

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ