AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCL 2025: ಮೈಸೂರಿನಲ್ಲಿ ಸಿಸಿಎಲ್ ಸೆಮಿಫೈನಲ್; ಕಿಚ್ಚನ ತಂಡಕ್ಕೆ ಎದುರಾಳಿ ಯಾರು? ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

Celebrity Cricket League 2025: 11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ನ ಸೆಮಿಫೈನಲ್ ಪಂದ್ಯಗಳು ಮಾರ್ಚ್ 1 ರಂದು ಮೈಸೂರಿನಲ್ಲಿ ನಡೆಯಲಿವೆ. ಕರ್ನಾಟಕ ಬುಲ್ಡೋಜರ್ಸ್, ತಮಿಳು ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್ ಮತ್ತು ಪಂಜಾಬ್ ದಿ ಶೇರ್ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ. ಬೆಂಗಾಲ್ ಟೈಗರ್ಸ್ ಮತ್ತು ಪಂಜಾಬ್ ದಿ ಶೇರ್ ತಂಡಗಳು ಮೊದಲ ಸೆಮಿಫೈನಲ್‌ನಲ್ಲಿ ಭೇಟಿಯಾಗಲಿವೆ, ನಂತರ ಕರ್ನಾಟಕ ಬುಲ್ಡೋಜರ್ಸ್ ಮತ್ತು ತಮಿಳು ರೈನೋಸ್ ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

CCL 2025: ಮೈಸೂರಿನಲ್ಲಿ ಸಿಸಿಎಲ್ ಸೆಮಿಫೈನಲ್; ಕಿಚ್ಚನ ತಂಡಕ್ಕೆ ಎದುರಾಳಿ ಯಾರು? ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
Ccl 2025
ಪೃಥ್ವಿಶಂಕರ
|

Updated on: Feb 28, 2025 | 6:01 PM

Share

11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (Celebrity Cricket League) ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಫೆಬ್ರವರಿ 23 ಕ್ಕೆ ಈ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದವು. ಲೀಗ ಹಂತದ ಮುಕ್ತಾಯದೊಂದಿಗೆ ಸೆಮಿಫೈನಲ್‌ಗೆ ಅರ್ಹತೆ ಪಡೆದ ನಾಲ್ಕು ತಂಡಗಳು ಯಾವುವು ಎಂಬುದು ನಿರ್ಧಾರವಾಗಿತ್ತು. ಆ ಪ್ರಕಾರ, ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್​, ತಮಿಳು ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್​ ಹಾಗೂ ಪಂಜಾಬ್ ದಿ ಶೇರ್ ತಂಡಗಳು ಸೆಮಿಫೈನಲ್​ಗೆ ಎಂಟ್ರಿಕೊಟ್ಟಿವೆ. ಇದೀಗ ಈ ನಾಲ್ಕು ತಂಡಗಳು ಮಾರ್ಚ್​ 1 ರಂದು ಅಂದರೆ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಮುಖಾಮುಖಿಯಾಗಲು ಸಜ್ಜಾಗಿವೆ.

ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಬೆಂಗಾಲ್ ಟೈಗರ್ಸ್​ ತಂಡ, ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಪಂಜಾಬ್ ದಿ ಶೇರ್ ತಂಡವನ್ನು ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಎದುರಿಸಲಿದೆ. ಈ ಪಂದ್ಯ ಕೂಡ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಆ ಬಳಿಕ ಎರಡನೇ ಸೆಮಿಫೈನಲ್‌ ಪಂದ್ಯ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಕಾಳಗದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವಿನ ಸೆಮಿಫೈನಲ್‌ ಪಂದ್ಯ ಯಾವಾಗ ನಡೆಯಲಿದೆ?

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವಿನ ಸೆಮಿಫೈನಲ್‌ ಪಂದ್ಯ ಮಾರ್ಚ್​ 1 ರಂದು ನಡೆಯಲಿದೆ.

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವಿನ ಸೆಮಿಫೈನಲ್‌ ಪಂದ್ಯ ಎಲ್ಲಿ ನಡೆಯಲಿದೆ?

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವಿನ ಸೆಮಿಫೈನಲ್‌ ಪಂದ್ಯ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯಲಿದೆ.

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವಿನ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವಿನ ಸೆಮಿಫೈನಲ್‌ ಪಂದ್ಯ ಸಂಜೆ 6:30 ಕ್ಕೆ ಆರಂಭವಾಗಲಿದೆ.

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ನಡುವಿನ ಸೆಮಿಫೈನಲ್‌ ಪಂದ್ಯದ ನೇರ ಪ್ರಸಾರ ವೀಕ್ಷಿಸುವುದು ಹೇಗೆ?

ಚೆನ್ನೈ ರೈನೋಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ ನಡುವಿನ ಸೆಮಿಫೈನಲ್ 2 ಪಂದ್ಯವನ್ನು ಸೋನಿ ಟೆನ್ ಸ್ಪೋರ್ಟ್ಸ್ 3 ನಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ನೀವು ಜಿಯೋಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಉಭಯ ತಂಡಗಳು

ಕರ್ನಾಟಕ ಬುಲ್ಡೋಜರ್ಸ್: ಕಿಚ್ಚ ಸುದೀಪ್ (ನಾಯಕ), ಗೋಲ್ಡನ್ ಸ್ಟಾರ್ ಗಣೇಶ್,ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ಸುನೀಲ್ ರಾವ್, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ, ನಿರೂಪ್ ಭಂಡಾರಿ, ಅನುಪ್ ಭಂಡಾರಿ, ಕರಣ್ ಆರ್ಯನ್, ಮಂಜುನಾಥ್ ಗೌಡ, ಸಾಗರ್ ಗೌಡ, ಅಲಕನಂದಾ, ತ್ರಿವಿಕ್ರಮ್.

ಚೆನ್ನೈ ರೈನೋಸ್: ಆರ್ಯ ಅಶೋಕ್ ಸೆಲ್ವನ್ (ನಾಯಕ), ಭರತ್, ಶಾಮ್, ಬೋಸ್ ವೆಂಕಟ್, ಹೇಮಚಂದ್ರನ್, ಕಲೈಯರಸನ್, ಮಹೇಂದ್ರನ್, ನಂದಾ, ಪೃಥ್ವಿ, ರಮಣ, ಸಂಜಯ್ ಭಾರತಿ, ಶಂತನು, ಶರಣ್, ಉದಯ್ ಕುಮಾರ್, ವಿಕ್ರಾಂತ್, ವಿಷ್ಣು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ