AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CEAT Awards: ಸಿಯೆಟ್ ಪ್ರಶಸ್ತಿ ಗೆದ್ದ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರೋಹಿತ್ ಶರ್ಮಾ

CEAT Awards: ಸಿಯೆಟ್ ಕಂಪೆನಿಯು ಆಗಸ್ಟ್ 21 ರಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ 26ನೇ ಆವೃತ್ತಿಯ ಕ್ರಿಕೆಟ್ ರೇಟಿಂಗ್ (ಸಿಸಿಆರ್) ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್, ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್, ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕಾಣಿಸಿಕೊಂಡಿದ್ದರು.

CEAT Awards: ಸಿಯೆಟ್ ಪ್ರಶಸ್ತಿ ಗೆದ್ದ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರೋಹಿತ್ ಶರ್ಮಾ
Virat Kohli - Phil Salt
ಝಾಹಿರ್ ಯೂಸುಫ್
|

Updated on:Aug 22, 2024 | 8:06 AM

Share

ಭಾರತದ ಟೈರ್ ತಯಾರಿಕಾ ಕಂಪನಿ ಸಿಯೆಟ್ ವರ್ಷದ ಕ್ರಿಕೆಟಿಂಗ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಬಾರಿ ಪುರುಷರ ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಟೀಮ್ ಇಂಢಿಯಾ ನಾಯಕ ರೋಹಿತ್ ಶರ್ಮಾಗೆ ಒಲಿದರೆ, ಒಡಿಐ ಬ್ಯಾಟರ್ ಆಫ್ ದಿ ಇಯರ್ ಪ್ರಶಸ್ತಿಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ವರ್ಷದ ಟಿ20 ಬ್ಯಾಟರ್ ಆಫ್ ದಿ ಇಯರ್ ಪ್ರಶಸ್ತಿಯು ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಪಾಲಾಗಿದೆ.

ಇನ್ನು ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಏಕದಿನ ಬೌಲರ್ ಪ್ರಶಸ್ತಿ ಪಡೆದರೆ, ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ವರ್ಷದ ಟೆಸ್ಟ್ ಬ್ಯಾಟರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ವರ್ಷದ ಟೆಸ್ಟ್ ಬೌಲರ್ ಪ್ರಶಸ್ತಿಯು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ನೀಡಲಾಗಿದೆ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಮಹಿಳಾ ವಿಭಾಗದಲ್ಲಿ ಟೀಮ್ ಇಂಡಿಯಾ ಆಟಗಾರ್ತಿಯರಾದ ಹರ್ಮನ್​ಪ್ರೀತ್ ಕೌರ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ ಹಾಗೂ ಸ್ಮೃತಿ ಮಂಧಾನ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.

ರಾಹುಲ್ ದ್ರಾವಿಡ್​ಗೆ ಗೌರವ:

ಜೀವಮಾನದ ಸರ್ವಶ್ರೇಷ್ಠ ಸಾಧನೆಗಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸಿಯೆಟ್ ಕಂಪೆನಿ ಗೌರವಿಸಿದೆ. ಹಾಗೆಯೇ ಶ್ರೇಷ್ಠ ಕ್ರೀಡಾ ಆಡಳಿತಕ್ಕಾಗಿ ಜಯ್ ಶಾ ಅವರಿಗೂ ವಿಶೇಷ ಪ್ರಶಸ್ತಿ ನೀಡಲಾಗಿದೆ. ಅದರಂತೆ ಈ ಬಾರಿಯ ಸಿಯೆಟ್​ ಪ್ರಶಸ್ತಿ ಪಡೆದವರ ಪಟ್ಟಿ ಈ ಕೆಳಗಿನಂತಿದೆ.

ಸಿಯೆಟ್ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ:

ಸಂಖ್ಯೆ ಪ್ರಶಸ್ತಿ ಪ್ರಶಸ್ತಿ ಪಡೆದವರು
1 ಜೀವಮಾನ ಸಾಧನೆ ಪ್ರಶಸ್ತಿ ರಾಹುಲ್ ದ್ರಾವಿಡ್
2 ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ರೋಹಿತ್ ಶರ್ಮಾ
3 ವರ್ಷದ ಏಕದಿನ ಬ್ಯಾಟರ್ ವಿರಾಟ್ ಕೊಹ್ಲಿ
4 ವರ್ಷದ ಏಕದಿನ ಬೌಲರ್ ಮೊಹಮ್ಮದ್ ಶಮಿ
5 ವರ್ಷದ ಟೆಸ್ಟ್ ಬ್ಯಾಟರ್ ಯಶಸ್ವಿ ಜೈಸ್ವಾಲ್
6 ವರ್ಷದ ಟೆಸ್ಟ್ ಬೌಲರ್ ರವಿಚಂದ್ರನ್ ಅಶ್ವಿನ್
7 ವರ್ಷದ ಟಿ20 ಬ್ಯಾಟರ್ ಫಿಲ್ ಸಾಲ್ಟ್
8 ವರ್ಷದ ಟಿ20 ಬೌಲರ್ ಟಿಮ್ ಸೌಥಿ
9 ವರ್ಷದ ದೇಶೀಯ ಕ್ರಿಕೆಟಿಗ ಸಾಯಿ ಕಿಶೋರ್
10 ವರ್ಷದ ಮಹಿಳಾ ಬ್ಯಾಟರ್ ಸ್ಮೃತಿ ಮಂಧಾನ
11 ವರ್ಷದ ಮಹಿಳಾ ಬೌಲರ್ ದೀಪ್ತಿ ಶರ್ಮಾ
12 ಹೆಚ್ಚು ಟಿ20 ಪಂದ್ಯಗಳನ್ನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್
13 ಐಪಿಎಲ್​ನ ಅತ್ಯುತ್ತಮ ನಾಯಕ ಶ್ರೇಯಸ್ ಅಯ್ಯರ್
14 ಮಹಿಳಾ ಟೆಸ್ಟ್‌ನಲ್ಲಿ ವೇಗದ ದ್ವಿಶತಕ ಬಾರಿಸಿದ ಬ್ಯಾಟರ್ ಶಫಾಲಿ ವರ್ಮಾ
15 ಶ್ರೇಷ್ಠ ಕ್ರೀಡಾ ಆಡಳಿತ ಜಯ್ ಶಾ

Published On - 8:05 am, Thu, 22 August 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?