AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಇವನ ಕೂದಲು ನೋಡು…ಸಿರಾಜ್​ನ ಫುಲ್ ಟ್ರೋಲ್ ಮಾಡಿದ ಚಹಾಲ್

ಮೂರನೇ ಟಿ20 ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 5 ವಿಕೆಟ್‌ ನಷ್ಟಕ್ಕೆ 146 ರನ್ ಗಳಿಸಿತು.

IND vs SL: ಇವನ ಕೂದಲು ನೋಡು...ಸಿರಾಜ್​ನ ಫುಲ್ ಟ್ರೋಲ್ ಮಾಡಿದ ಚಹಾಲ್
Chahal trolls Siraj
TV9 Web
| Updated By: ಝಾಹಿರ್ ಯೂಸುಫ್|

Updated on: Feb 28, 2022 | 3:22 PM

Share

ಶ್ರೀಲಂಕಾ ವಿರುದ್ಧದ T20 ಪಂದ್ಯಗಳ ಸರಣಿಯನ್ನು (India vs Sri Lanka) ಭಾರತ ಕ್ಲೀನ್ ಸ್ವೀಪ್ ಮಾಡಿದೆ. ಪಂದ್ಯದ ನಂತರ, ಯುಜ್ವೇಂದ್ರ ಚಹಾಲ್ (yuzvendra chahal ) ಅವರು ಚಾಹಲ್ ಟಿವಿಯಲ್ಲಿ ಪಂದ್ಯ ಶ್ರೇಷ್ಠ ಆಟಗಾರ ಶ್ರೇಯಸ್ ಅಯ್ಯರ್ ಅವರನ್ನು ಸಂದರ್ಶಿಸಿದರು. ಇದೇ ವೇಳೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ (mohammed siraj) ಕೂಡ ಕಾಣಿಸಿಕೊಂಡಿದ್ದಾರೆ. ಆದರೆ ಸಿರಾಜ್ ಎಂಟ್ರಿಯನ್ನು ಚಹಾಲ್ ಸಖತ್ ಟ್ರೋಲ್ ಮಾಡುವ ಮೂಲಕ ಸ್ವಾಗತಿಸಿದ್ದು ವಿಶೇಷ. ಈ ಸಂದರ್ಶನದಲ್ಲಿ, ಪಂದ್ಯ ಪ್ರದರ್ಶನದ ಬಗ್ಗೆ ಚಹಾಲ್ ಅಯ್ಯರ್ ಜೊತೆ ಮಾತನಾಡಿದ್ದರು.

ಚಾಹಲ್-ಅಯ್ಯರ್ ಚಿಟ್​ಚಾಟ್ ನಡುವೆ ಸಿರಾಜ್ ಕೂಡ ಕ್ಯಾಮರಾ ಮುಂದೆ ಕಾಣಿಸಿಕೊಂಡಿದ್ದಾರೆ. ಸಿರಾಜ್ ಆಗಮನವನ್ನು ಫನ್ನಿಯಾಗಿ ಸ್ವಾಗತಿಸಿದ ಚಹಾಲ್, ಸಿರಾಜ್ ತಲೆಕೂದಲನ್ನು ನೋಡಿ, ಬಹಳ ದಿನಗಳಿಂದ ಯಾರೂ ಹುಲ್ಲಿಗೆ ನೀರು ಹಾಕದೆ ಸಂಪೂರ್ಣ ಒಣಗಿ ಹೋಗಿರುವಂತೆ ಇದೆ ಎಂದು ಟ್ರೋಲ್ ಮಾಡಿದರು.

ಇತ್ತ ಸಿರೀಸ್ ಇಂಟರ್​ವ್ಯೂನಲ್ಲಿ ನಿಂತಿದ್ದ ಅಯ್ಯರ್ ಚಹಾಲ್ ಅವರ ಟ್ರೋಲ್ ಕೇಳಿ ನಗಲಾರಂಭಿಸಿದರು. ಅತ್ತ ಸಿರಾಜ್ ಕೂಡ ನಕ್ಕರು. ಇದಾದ ಬಳಿಕ ಪ್ರತಿ ಪಂದ್ಯಕ್ಕೂ ಮುನ್ನ ನೀವು ಕ್ಷೌರ ಸಲೂನ್‌ಗೆ ಹೋಗುವುದು ನಿಜವೇ ಎಂದು ಚಹಾಲ್ ಸಿರಾಜ್ ಅವರ ಕಾಲೆಳೆದರು. ಈ ಕುರಿತು ಸಿರಾಜ್‌, ಹಾಗೇನೂ ಇಲ್ಲ ಎನ್ನುವ ಮೂಲಕ ಟ್ರೋಲ್​ಗೆ ಫುಲ್​ ಸ್ಟಾಪ್ ಇಟ್ಟರು.

ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 5 ವಿಕೆಟ್‌ಗೆ 146 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡ ಶ್ರೇಯಸ್ ಅಯ್ಯರ್ ಅವರ ಅಜೇಯ ಅರ್ಧಶತಕದ ನೆರವಿನಿಂದ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಅಯ್ಯರ್ ಸರಣಿಯಲ್ಲಿ ಸತತ ಮೂರನೇ ಅಜೇಯ ಅರ್ಧಶತಕ ಗಳಿಸಿದ್ದರು. ಈ ಮೂಲಕ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(Chahal trolls Siraj as ‘Miya Magic’ gatecrashes Iyer’s interview)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?