AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಚ್ ಹಿಡಿಯುವ ವೇಳೆ ಅವಘಡ; 4 ಹಲ್ಲುಗಳನ್ನು ಮುರಿದುಕೊಂಡ ಲಂಕಾ ಬೌಲರ್! ವಿಡಿಯೋ ನೋಡಿ

ಕೂಡಲೇ ಕರುಣಾರತ್ನೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಶಸ್ತ್ರಚಿಕಿತ್ಸೆಗಾಗಿ ಅವರನ್ನು ತಕ್ಷಣ ಗಾಲೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಕ್ಯಾಚ್ ಹಿಡಿಯುವ ವೇಳೆ ಅವಘಡ; 4 ಹಲ್ಲುಗಳನ್ನು ಮುರಿದುಕೊಂಡ ಲಂಕಾ ಬೌಲರ್! ವಿಡಿಯೋ ನೋಡಿ
ಕ್ಯಾಚ್ನ ಹಿಡಿಯುವ ವೇಳೆ ಹಲ್ಲು ಮುರಿದುಕೊಂಡ ಲಂಕಾ ಆಟಗಾರ
TV9 Web
| Edited By: |

Updated on:Dec 08, 2022 | 10:58 AM

Share

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಆದರೆ, ಕೆಲವೊಮ್ಮೆ ಕ್ಯಾಚ್ ಹಿಡಿಯುವ ವೇಳೆ ಆಟಗಾರನ ಎಡವಟ್ಟಿನಿಂದ ಆಗುವ ಅನಾಹುತಗಳಿಗೆ ಭಾರೀ ಬೆಲೆಯನ್ನೇ ತೆರಬೇಕಾಗುತ್ತದೆ. ಈಗ ಅಂತಹದ್ದೇ ಘಟನೆಯೊಂದು ಶ್ರೀಲಂಕಾದಲ್ಲಿ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ (lanka premier league) ನಡೆದಿದೆ. ಈ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ವೇಳೆ ಶ್ರೀಲಂಕಾ ಕ್ರಿಕೆಟಿಗ ಚಮಿಕಾ ಕರುಣಾರತ್ನೆಗೆ (Chamika Karunaratne) ಗಂಭೀರ ಗಾಯವಾಗಿದ್ದು, ಈ ಅವಘಡದಲ್ಲಿ ಕರುಣಾರತ್ನೆ ಅವರ 4 ಹಲ್ಲುಗಳು ಮುರಿದಿವೆ. ನವೆಂಬರ್ 7 ರಂದು ನಡೆದ ಈ ಪಂದ್ಯದಲ್ಲಿ ಚಾಮಿಕಾ ಕ್ಯಾಚ್ ಹಿಡಿಯುವಲ್ಲಿ ಯಶಸ್ವಿ ಏನೋ ಆದರು. ಆದರೆ ಈ ಪ್ರಯತ್ನದಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಬೇಕಾಯಿತು.

ನಾಲ್ಕನೇ ಓವರ್​ನಲ್ಲಿ ಈ ಅವಘಡ

ವಾಸ್ತವವಾಗಿ, ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಗಾಲ್ ಗ್ಲಾಡಿಯೇಟರ್ಸ್ ಮತ್ತು ಕ್ಯಾಂಡಿ ಫಾಲ್ಕನ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಈ ಅವಘಡ ಸಂಭವಿಸಿದೆ. ಈ ವೇಳೆ ಚಾಮಿಕಾ ಕರುಣಾರತ್ನೆ ಕ್ಯಾಂಡಿ ಫಾಲ್ಕನ್ಸ್ ತಂಡದ ಪರವಾಗಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಗಾಲೆ ಗ್ಲಾಡಿಯೇಟರ್ಸ್ ಮೊದಲು ಬ್ಯಾಟ್ ಮಾಡಲಾರಂಭಿಸಿತು. ಕ್ಯಾಂಡಿ ಫಾಲ್ಕನ್ಸ್ ತಂಡದ ಪರ ಕೆರಿಬಿಯನ್ ಬೌಲರ್ ಬ್ರೈತ್‌ವೈಟ್ ಅವರ ಇನ್ನಿಂಗ್ಸ್‌ನ ನಾಲ್ಕನೇ ಓವರ್​ನಲ್ಲಿ ಈ ಅವಘಡ ಸಂಭವಿಸಿತು. ಓವರ್​ನ ಮೊದಲ ಎಸೆತವನ್ನು ಎದುರಿಸಿದ ನುವಿಂದು ಫೆರ್ನಾಂಡೋ ಗಾಳಿಯಲ್ಲಿ ಬಿಗ್ ಶಾಟ್ ಆಡಿದರು.

ಇದನ್ನೂ ಓದಿ: Rohit Sharma Record: ಬ್ಯಾಂಡೇಜ್‌ ತೊಟ್ಟು ಮೈದಾನಕ್ಕಿಳಿದು ಸಿಕ್ಸರ್​ಗಳ ದಾಖಲೆ ಬರೆದ ರೋಹಿತ್ ಶರ್ಮಾ

4 ಹಲ್ಲುಗಳು ಮುರಿದಿವೆ

ಈ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಚಮಿಕಾ ಕರುಣಾರತ್ನೆ ಓಡಿ ಬಂದು ಅದ್ಭುತ ಕ್ಯಾಚ್ ತೆಗೆದುಕೊಂಡಿದ್ದಾರೆ. ಆದರೆ ಕ್ಯಾಚ್ ಹಿಡಿಯುವ ವೇಳೆ ಚೆಂಡು ಅವರ ಬಾಯಿಯ ಮೇಲೆ ಬಿದ್ದಿದೆ. ಚೆಂಡು ಬಿದ್ದ ರಭಸಕ್ಕೆ ಕರುಣರತ್ನೆ ಅವರ ಮುಂಭಾಗದ 4 ಹಲ್ಲುಗಳು ಮುರಿದಿವೆ. ಆರಂಭದಲ್ಲಿ ಈ ಘಟನೆ ಬಗ್ಗೆ ಏನು ಅರಿಯದ ಆಟಗಾರರು ಸಂಭ್ರಮಿಸಲು ಆರಂಭಿಸಿದ್ದಾರೆ. ಆದರೆ ಆ ನಂತರ ಕರುಣಾರತ್ನೆ ಅವರ ಬಾಯಿಯಿಂದ ಧಾರಕಾರವಾಗಿ ರಕ್ತ ಸುರಿಯುವುದನ್ನು ನೋಡಿ ಸಹ ಆಟಗಾರರು ದಂಗಾಗಿ ಹೋಗಿದ್ದಾರೆ.

ಕೂಡಲೇ ಕರುಣಾರತ್ನೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಶಸ್ತ್ರಚಿಕಿತ್ಸೆಗಾಗಿ ಅವರನ್ನು ತಕ್ಷಣ ಗಾಲೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲದೆ ವೈದ್ಯರ ಪ್ರಕಾರ, ಕರುಣಾರತ್ನೆ ಅವರು ಲಂಕಾ ಪ್ರೀಮಿಯರ್ ಲೀಗ್‌ನ ಕೆಲವು ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Thu, 8 December 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!