AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCB vs BCCI: ಬಿಸಿಸಿಐ ಹೂಡಿದ ಅಸ್ತ್ರವನ್ನೇ ಪ್ರತ್ಯಾಸ್ತ್ರವಾಗಿ ಬಳಸಿದ ಪಾಕಿಸ್ತಾನ

PCB vs BCCI: 2024ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಆತಿಥ್ಯ ಪಾಕಿಸ್ತಾನ ವಹಿಸುತ್ತಿದ್ದರೂ, ಬಿಸಿಸಿಐ ಮತ್ತು ಪಿಸಿಬಿ ನಡುವಿನ ವಿವಾದ ಇನ್ನೂ ಬಗೆಹರಿದಿಲ್ಲ. ಹೀಗಾಗಿ ಸಭೆ ಕರೆದಿರುವ ಐಸಿಸಿ, ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಲು ನಿರ್ಧರಿಸುವ ಸಾಧ್ಯತೆಗಳಿವೆ. ಇದನ್ನು ನಿರೀಕ್ಷಿಸಿರುವ ಪಾಕಿಸ್ತಾನ, ಮಹಿಳಾ ವಿಶ್ವಕಪ್ ಮತ್ತು 2026ರ ಟಿ20 ವಿಶ್ವಕಪ್‌ಗಳನ್ನೂ ಸಹನ ಹೈಬ್ರಿಡ್ ಮಾದರಿಯಲ್ಲಿ ಆಡುವುದಾಗಿ ಐಸಿಸಿ ಮೇಲೆ ಒತ್ತಡ ಹೇರಲು ಸಜ್ಜಾಗಿದೆ.

PCB vs BCCI: ಬಿಸಿಸಿಐ ಹೂಡಿದ ಅಸ್ತ್ರವನ್ನೇ ಪ್ರತ್ಯಾಸ್ತ್ರವಾಗಿ ಬಳಸಿದ ಪಾಕಿಸ್ತಾನ
ಪಿಸಿಬಿ- ಬಿಸಿಸಿಐ
ಪೃಥ್ವಿಶಂಕರ
|

Updated on: Nov 29, 2024 | 2:43 PM

Share

ಮುಂದಿನ ವರ್ಷ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೆ. ಆದರೆ ಈ ಟೂರ್ನಿಯ ಆಯೋಜನೆಗೆ ಸಂಬಂಧಿಸಿದಂತೆ ಬಿಸಿಸಿಐ ಮತ್ತು ಪಿಸಿಬಿ ನಡುವಿನ ವಿವಾದ ಇದುವರೆಗೂ ಕೊನೆಗೊಂಡಿಲ್ಲ. ಹೀಗಾಗಿ ಐಸಿಸಿ, ಎರಡು ಮಂಡಳಿಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ವರ್ಚುವಲ್ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಐಸಿಸಿ, ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ನಡೆಸಲು ಪಾಕಿಸ್ತಾನದ ಮೇಲೆ ಒತ್ತಡ ಹೇರುವ ನಿರೀಕ್ಷೆಯಿದೆ. ಹೀಗಾಗಿ ಐಸಿಸಿ ವಿರುದ್ಧವೇ ತಿರುಗಿಬೀಳಲು ಸಿದ್ದವಾಗಿರುವ ಪಿಸಿಬಿ, ಇದೀಗ ಬಿಸಿಸಿಐ ಹೂಡುತ್ತಿರುವ ಅಸ್ತ್ರವನ್ನೇ ಮುಂದಿನ ದಿನಗಳಲ್ಲಿ ಪ್ರತ್ಯಾಸ್ತ್ರವಾಗಿ ಬಳಸಲು ಸಜ್ಜಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಪ್ರತ್ಯಾಸ್ತ್ರ ಏನು?

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿ ನಂತರ ಭಾರತದಲ್ಲಿ ಎರಡು ದೊಡ್ಡ ಟೂರ್ನಿಗಳು ನಡೆಯಲಿವೆ. ಮುಂದಿನ ವರ್ಷ ನಡೆಯಲ್ಲಿರುವ ಮಹಿಳಾ ಏಕದಿನ ವಿಶ್ವಕಪ್​ಗೆ ಭಾರತ ಆತಿಥ್ಯ ವಹಿಸಲಿದೆ. ಇದಾದ ನಂತರ, 2026 ಪುರುಷರ ಟಿ20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐನಂತೆಯೇ ಪಿಸಿಬಿ ಕೂಡ ಅದೇ ನಿಲುವನ್ನು ಅಳವಡಿಸಿಕೊಳ್ಳಬಹುದು. ಒಂದು ವೇಳೆ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಒತ್ತಾಯಿಸಿದರೆ, ಮುಂದಿನ ಎರಡು ಪ್ರಮುಖ ಟೂರ್ನಿಗಳಿಗೂ ಅದನ್ನೇ ಬೇಡಿಕೆ ಇಡಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮೂಲಗಳನ್ನು ಉಲ್ಲೇಖಿಸಿ ಟೆಲಿಗ್ರಾಫ್ ವರದಿ ಮಾಡಿದೆ.

ಮೂಲಗಳ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಿದರೆ, ಮುಂದಿನ ವರ್ಷ ನಡೆಯಲ್ಲಿರುವ ಮಹಿಳಾ ಏಕದಿನ ವಿಶ್ವಕಪ್‌ಗೆ ಭಾರತಕ್ಕೆ ತನ್ನ ತಂಡವನ್ನು ಕಳುಹಿಸುವುದಿಲ್ಲ ಎಂದು ಪಿಸಿಬಿ, ಐಸಿಸಿಗೆ ಬೆದರಿಕೆ ಹಾಕಿದೆ. ಇದಲ್ಲದೆ, 2026 ರ ಟಿ20 ವಿಶ್ವಕಪ್‌ನಲ್ಲಿನ ಪಾಕಿಸ್ತಾನದ ಎಲ್ಲಾ ಪಂದ್ಯಗಳನ್ನು ಭಾರತದವನ್ನು ಬಿಟ್ಟು ಶ್ರೀಲಂಕಾದಲ್ಲಿ ಆಡುವುದಾಗಿ ಐಸಿಸಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

2 ಟೂರ್ನಿಗಳಿಂದ ತಂಡ ಹಿಂದಕ್ಕೆ

ಒಂದು ವೇಳೆ ಈ ಎರಡೂ ಪಂದ್ಯಾವಳಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸದಿದ್ದರೆ, ಪಾಕಿಸ್ತಾನ ಈ ಎರಡೂ ಪಂದ್ಯಾವಳಿಗಳಿಂದ ತನ್ನ ಹೆಸರನ್ನು ಹಿಂತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಪಾಕಿಸ್ತಾನ ತಂಡವೂ ಭಾರತಕ್ಕೆ ಬರುವುದಿಲ್ಲ ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಇತ್ತೀಚೆಗೆ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಆ ಪ್ರಕಾರ, ಮುಂದಿನ ದಿನಗಳಲ್ಲಿ ಬಿಸಿಸಿಐ ನಡೆಯನ್ನೇ ಪಿಸಿಬಿ ಅನುಸರಿಸುವ ಸಾಧ್ಯತೆಗಳಿವೆ.

ಬಿಸಿಸಿಐ ಹೇಳಿದ್ದೇನು?

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಚಾಂಪಿಯನ್ಸ್ ಟ್ರೋಫಿ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ‘ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಇದರ ಹೊರತಾಗಿ ಇತರ ಆಯ್ಕೆಗಳೂ ಇವೆ. ನಮಗೆ ಭಾರತೀಯ ಆಟಗಾರರ ಸುರಕ್ಷತೆಯೇ ಮೊದಲ ಆದ್ಯತೆ, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಇದೀಗ ಮಾತುಕತೆ ನಡೆಯುತ್ತಿದೆ, ಎಲ್ಲವೂ ಅಂತಿಮಗೊಂಡ ನಂತರ ನಾವು ನಿಮಗೆ ತಿಳಿಸುತ್ತೇವೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ