AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCB vs BCCI: ಬಿಸಿಸಿಐ ಹೂಡಿದ ಅಸ್ತ್ರವನ್ನೇ ಪ್ರತ್ಯಾಸ್ತ್ರವಾಗಿ ಬಳಸಿದ ಪಾಕಿಸ್ತಾನ

PCB vs BCCI: 2024ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಆತಿಥ್ಯ ಪಾಕಿಸ್ತಾನ ವಹಿಸುತ್ತಿದ್ದರೂ, ಬಿಸಿಸಿಐ ಮತ್ತು ಪಿಸಿಬಿ ನಡುವಿನ ವಿವಾದ ಇನ್ನೂ ಬಗೆಹರಿದಿಲ್ಲ. ಹೀಗಾಗಿ ಸಭೆ ಕರೆದಿರುವ ಐಸಿಸಿ, ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಸಲು ನಿರ್ಧರಿಸುವ ಸಾಧ್ಯತೆಗಳಿವೆ. ಇದನ್ನು ನಿರೀಕ್ಷಿಸಿರುವ ಪಾಕಿಸ್ತಾನ, ಮಹಿಳಾ ವಿಶ್ವಕಪ್ ಮತ್ತು 2026ರ ಟಿ20 ವಿಶ್ವಕಪ್‌ಗಳನ್ನೂ ಸಹನ ಹೈಬ್ರಿಡ್ ಮಾದರಿಯಲ್ಲಿ ಆಡುವುದಾಗಿ ಐಸಿಸಿ ಮೇಲೆ ಒತ್ತಡ ಹೇರಲು ಸಜ್ಜಾಗಿದೆ.

PCB vs BCCI: ಬಿಸಿಸಿಐ ಹೂಡಿದ ಅಸ್ತ್ರವನ್ನೇ ಪ್ರತ್ಯಾಸ್ತ್ರವಾಗಿ ಬಳಸಿದ ಪಾಕಿಸ್ತಾನ
ಪಿಸಿಬಿ- ಬಿಸಿಸಿಐ
ಪೃಥ್ವಿಶಂಕರ
|

Updated on: Nov 29, 2024 | 2:43 PM

Share

ಮುಂದಿನ ವರ್ಷ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೆ. ಆದರೆ ಈ ಟೂರ್ನಿಯ ಆಯೋಜನೆಗೆ ಸಂಬಂಧಿಸಿದಂತೆ ಬಿಸಿಸಿಐ ಮತ್ತು ಪಿಸಿಬಿ ನಡುವಿನ ವಿವಾದ ಇದುವರೆಗೂ ಕೊನೆಗೊಂಡಿಲ್ಲ. ಹೀಗಾಗಿ ಐಸಿಸಿ, ಎರಡು ಮಂಡಳಿಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ವರ್ಚುವಲ್ ಸಭೆಯನ್ನು ಆಯೋಜಿಸಿದೆ. ಈ ಸಭೆಯಲ್ಲಿ ಐಸಿಸಿ, ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ನಡೆಸಲು ಪಾಕಿಸ್ತಾನದ ಮೇಲೆ ಒತ್ತಡ ಹೇರುವ ನಿರೀಕ್ಷೆಯಿದೆ. ಹೀಗಾಗಿ ಐಸಿಸಿ ವಿರುದ್ಧವೇ ತಿರುಗಿಬೀಳಲು ಸಿದ್ದವಾಗಿರುವ ಪಿಸಿಬಿ, ಇದೀಗ ಬಿಸಿಸಿಐ ಹೂಡುತ್ತಿರುವ ಅಸ್ತ್ರವನ್ನೇ ಮುಂದಿನ ದಿನಗಳಲ್ಲಿ ಪ್ರತ್ಯಾಸ್ತ್ರವಾಗಿ ಬಳಸಲು ಸಜ್ಜಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಪ್ರತ್ಯಾಸ್ತ್ರ ಏನು?

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿ ನಂತರ ಭಾರತದಲ್ಲಿ ಎರಡು ದೊಡ್ಡ ಟೂರ್ನಿಗಳು ನಡೆಯಲಿವೆ. ಮುಂದಿನ ವರ್ಷ ನಡೆಯಲ್ಲಿರುವ ಮಹಿಳಾ ಏಕದಿನ ವಿಶ್ವಕಪ್​ಗೆ ಭಾರತ ಆತಿಥ್ಯ ವಹಿಸಲಿದೆ. ಇದಾದ ನಂತರ, 2026 ಪುರುಷರ ಟಿ20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐನಂತೆಯೇ ಪಿಸಿಬಿ ಕೂಡ ಅದೇ ನಿಲುವನ್ನು ಅಳವಡಿಸಿಕೊಳ್ಳಬಹುದು. ಒಂದು ವೇಳೆ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಒತ್ತಾಯಿಸಿದರೆ, ಮುಂದಿನ ಎರಡು ಪ್ರಮುಖ ಟೂರ್ನಿಗಳಿಗೂ ಅದನ್ನೇ ಬೇಡಿಕೆ ಇಡಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮೂಲಗಳನ್ನು ಉಲ್ಲೇಖಿಸಿ ಟೆಲಿಗ್ರಾಫ್ ವರದಿ ಮಾಡಿದೆ.

ಮೂಲಗಳ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಿದರೆ, ಮುಂದಿನ ವರ್ಷ ನಡೆಯಲ್ಲಿರುವ ಮಹಿಳಾ ಏಕದಿನ ವಿಶ್ವಕಪ್‌ಗೆ ಭಾರತಕ್ಕೆ ತನ್ನ ತಂಡವನ್ನು ಕಳುಹಿಸುವುದಿಲ್ಲ ಎಂದು ಪಿಸಿಬಿ, ಐಸಿಸಿಗೆ ಬೆದರಿಕೆ ಹಾಕಿದೆ. ಇದಲ್ಲದೆ, 2026 ರ ಟಿ20 ವಿಶ್ವಕಪ್‌ನಲ್ಲಿನ ಪಾಕಿಸ್ತಾನದ ಎಲ್ಲಾ ಪಂದ್ಯಗಳನ್ನು ಭಾರತದವನ್ನು ಬಿಟ್ಟು ಶ್ರೀಲಂಕಾದಲ್ಲಿ ಆಡುವುದಾಗಿ ಐಸಿಸಿಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

2 ಟೂರ್ನಿಗಳಿಂದ ತಂಡ ಹಿಂದಕ್ಕೆ

ಒಂದು ವೇಳೆ ಈ ಎರಡೂ ಪಂದ್ಯಾವಳಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸದಿದ್ದರೆ, ಪಾಕಿಸ್ತಾನ ಈ ಎರಡೂ ಪಂದ್ಯಾವಳಿಗಳಿಂದ ತನ್ನ ಹೆಸರನ್ನು ಹಿಂತೆಗೆದುಕೊಳ್ಳಲಿದೆ ಎಂದು ವರದಿಯಾಗಿದೆ. ಭಾರತ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಪಾಕಿಸ್ತಾನ ತಂಡವೂ ಭಾರತಕ್ಕೆ ಬರುವುದಿಲ್ಲ ಎಂದು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಇತ್ತೀಚೆಗೆ ತಮ್ಮ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. ಆ ಪ್ರಕಾರ, ಮುಂದಿನ ದಿನಗಳಲ್ಲಿ ಬಿಸಿಸಿಐ ನಡೆಯನ್ನೇ ಪಿಸಿಬಿ ಅನುಸರಿಸುವ ಸಾಧ್ಯತೆಗಳಿವೆ.

ಬಿಸಿಸಿಐ ಹೇಳಿದ್ದೇನು?

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಚಾಂಪಿಯನ್ಸ್ ಟ್ರೋಫಿ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ‘ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಇದರ ಹೊರತಾಗಿ ಇತರ ಆಯ್ಕೆಗಳೂ ಇವೆ. ನಮಗೆ ಭಾರತೀಯ ಆಟಗಾರರ ಸುರಕ್ಷತೆಯೇ ಮೊದಲ ಆದ್ಯತೆ, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಇದೀಗ ಮಾತುಕತೆ ನಡೆಯುತ್ತಿದೆ, ಎಲ್ಲವೂ ಅಂತಿಮಗೊಂಡ ನಂತರ ನಾವು ನಿಮಗೆ ತಿಳಿಸುತ್ತೇವೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!