AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AFG vs ENG: ಸೋತವರು ಟೂರ್ನಿಯಿಂದಲೇ ಔಟ್

Champions Trophy 2025: ಚಾಂಪಿಯನ್ಸ್ ಟ್ರೋಫಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇದೀಗ ಅಫ್ಘಾನಿಸ್ತಾನ್ ಮತ್ತು ಇಂಗ್ಲೆಂಡ್ ನಡುವಣ ಕದನದಲ್ಲಿ ಸೋಲುವ ತಂಡ ಕೂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯ 8ನೇ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

AFG vs ENG: ಸೋತವರು ಟೂರ್ನಿಯಿಂದಲೇ ಔಟ್
Afghanistan vs England
ಝಾಹಿರ್ ಯೂಸುಫ್
|

Updated on: Feb 26, 2025 | 9:54 AM

Share

ಚಾಂಪಿಯನ್ಸ್ ಟ್ರೋಫಿಯ 8ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ಇಂದು (ಫೆ.26) ನಡೆಯಲಿರುವ  ಈ ಪಂದ್ಯದಲ್ಲಿ ಸೋತ ತಂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ. ಏಕೆಂದರೆ ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್​ಗಳಿಂದ ಪರಾಜಯಗೊಂಡಿತ್ತು. ಇತ್ತ ಸೌತ್ ಆಫ್ರಿಕಾ ವಿರುದ್ದ ಅಫ್ಘಾನಿಸ್ತಾನ್ 107 ರನ್​ಗಳ ಹೀನಾಯ ಸೋಲನುಭವಿಸಿತ್ತು. ಈ ಸೋಲುಗಳೊಂದಿಗೆ ಗ್ರೂಪ್-ಬಿ ಅಂಕ ಪಟ್ಟಿಯಲ್ಲಿ ಉಭಯ ತಂಡಗಳು ಕೊನೆಯ ಎರಡು ಸ್ಥಾನಗಳಲ್ಲಿದೆ.

ಇನ್ನು ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ. ಉಭಯ ತಂಡಗಳು ಮೊದಲ ಪಂದ್ಯವನ್ನು ಗೆದ್ದು ತಲಾ 2 ಅಂಕಗಳನ್ನು ಪಡೆದುಕೊಂಡರೆ, ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಹೀಗಾಗಿ ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.

ಅದರಂತೆ ಇದೀಗ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 3 ಅಂಕಗಳನ್ನು ಹೊಂದಿದೆ. ಉಭಯ ತಂಡಗಳಿಗೆ ಇನ್ನೂ ಒಂದು ಪಂದ್ಯಗಳಿದ್ದು, ಈ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಒಟ್ಟು 5 ಅಂಕಗಳನ್ನು ಪಡೆಯಬಹುದು.

ಇತ್ತ ಇಂದಿನ ಪಂದ್ಯದಲ್ಲಿ ಸೋಲುವ ತಂಡ ಕೊನೆಯ ಮ್ಯಾಚ್​ನಲ್ಲಿ ಗೆದ್ದರೂ ಕೇವಲ 2 ಅಂಕಗಳನ್ನು ಮಾತ್ರ ಪಡೆಯಲಿದೆ. ಆದರೆ ಅದಾಗಲೇ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ತಲಾ 3 ಅಂಕಗಳನ್ನು ಹೊಂದಿರುವ ಕಾರಣ ಇಂದು ಸೋಲುವ ತಂಡಕ್ಕೆ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶ ಇರುವುದಿಲ್ಲ.

ಹೀಗಾಗಿ ಇಂದಿನ ಪಂದ್ಯವು ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ್ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು. ಈ ಪಂದ್ಯದಲ್ಲಿ ಯಾರು ಸೋಲುತ್ತಾರೋ ಅವರ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಅಂತ್ಯಗೊಳ್ಳಲಿದೆ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಇದನ್ನೂ ಓದಿ: ಅಗ್ರಸ್ಥಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಎಲ್ಲಿಸ್ ಪೆರ್ರಿ

ಅಫ್ಘಾನಿಸ್ತಾನ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ಇಕ್ರಮ್ ಅಲಿಖಿಲ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋತಿ, ನೂರ್ ಅಹ್ಮದ್, ನೂರ್ ಅಹ್ಮದ್, ಫಝಲ್​ಹಕ್ ಫಾರೂಖಿ, ಫಾರಿದ್ ಮಲಿಕ್, ನವೀದ್ ಝದ್ರಾನ್.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!