AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಮಳೆಯಿಂದ ಆಸೀಸ್- ಆಫ್ರಿಕಾ ಪಂದ್ಯ ರದ್ದು; ಬಿ ಗುಂಪಿನ ಸೆಮೀಸ್ ಲೆಕ್ಕಾಚಾರ ಇನ್ನೂ ಅತಂತ್ರ

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಬಹುನಿರೀಕ್ಷಿತ ಪಂದ್ಯವು ರಾವಲ್ಪಿಂಡಿಯಲ್ಲಿ ಮಳೆಯಿಂದಾಗಿ ರದ್ದಾಯಿತು. ಎರಡೂ ತಂಡಗಳಿಗೆ ತಲಾ ಒಂದು ಅಂಕ ಲಭಿಸಿದೆ. ಇದರಿಂದ ಬಿ ಗುಂಪಿನಲ್ಲಿ ಸೆಮಿಫೈನಲ್ ಲೆಕ್ಕಾಚಾರ ತೀವ್ರ ಕುತೂಹಲ ಕೆರಳಿಸಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಾಲ್ಕೂ ತಂಡಗಳು ಸೆಮೀಸ್ ರೇಸ್​ನಲ್ಲಿವೆ.

Champions Trophy 2025: ಮಳೆಯಿಂದ ಆಸೀಸ್- ಆಫ್ರಿಕಾ ಪಂದ್ಯ ರದ್ದು; ಬಿ ಗುಂಪಿನ ಸೆಮೀಸ್ ಲೆಕ್ಕಾಚಾರ ಇನ್ನೂ ಅತಂತ್ರ
ಚಾಂಪಿಯನ್ಸ್ ಟ್ರೋಫಿ
ಪೃಥ್ವಿಶಂಕರ
|

Updated on:Mar 02, 2025 | 2:16 PM

Share

2025 ರ ಚಾಂಪಿಯನ್ಸ್ ಟ್ರೋಫಿಯ 7 ನೇ ಪಂದ್ಯವು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ರಾವಲ್ಪಿಂಡಿಯಲ್ಲಿ ನಡೆಯಬೇಕಿತ್ತು. ಆದರೆ ರಾವಲ್ಪಿಂಡಿಯಲ್ಲಿ ನಿರಂತರ ಮಳೆಯಿಂದಾಗಿ ಪಂದ್ಯವನ್ನು ಟಾಸ್ ನಡೆಸಲು ಸಾಧ್ಯವಾಗದೆ ರದ್ದುಗೊಳಿಸಲಾಯಿತು. ಅಂತಿಮವಾಗಿ ಉಭಯ ತಂಡಗಳ ನಡುವೆ ತಲಾ 1 ಅಂಕಗಳು ಹಂಚಿಕೆಯಾಗಿವೆ. ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದವು. ಆದರೆ ಮಳೆಯಿಂದಾಗಿ ಪಂದ್ಯ ಒಂದೇ ಒಂದು ಎಸೆತವನ್ನು ಎಸೆಯಲಾಗದೆ ರದ್ದಾಯಿತು. ಹೀಗಾಗಿ ಬಿ ಗುಂಪಿನಲ್ಲಿ ಸೆಮಿಫೈನಲ್ ಲೆಕ್ಕಾಚಾರ ಉಲ್ಟಾಪಲ್ಟಾ ಆದಂತಿದೆ. ಈ ಗುಂಪಿನಲ್ಲಿ ಈವರೆಗೂ ಯಾವ ತಂಡಕ್ಕೂ ಸೆಮೀಸ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗಿಲ್ಲ.

ಸೆಮೀಸ್ ಲೆಕ್ಕಾಚಾರ ಹೀಗಿದೆ

ನಿಯಮದ ಪ್ರಕಾರ ತಮ್ಮ ತಮ್ಮ ಗುಂಪುಗಳಲ್ಲಿ ಅಗ್ರ-2 ತಂಡಗಳು ಸೆಮಿಫೈನಲ್ ಪ್ರವೇಶಿಸುತ್ತವೆ. ಅದರಂತೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ‘ಎ’ ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಏತನ್ಮಧ್ಯೆ, ಬಾಂಗ್ಲಾದೇಶ ಮತ್ತು ಆತಿಥೇಯ ಪಾಕಿಸ್ತಾನ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಬಿ ಗುಂಪಿನ ಯಾವುದೇ ತಂಡವು ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಇನ್ನೂ ಖಚಿತಪಡಿಸಿಲ್ಲ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಹೊರತುಪಡಿಸಿ, ಗ್ರೂಪ್ ಬಿ ನಲ್ಲಿ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ಕೂಡ ಇವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಲಾ ಒಂದು ಪಂದ್ಯ ಗೆದ್ದಿದ್ದು, ಎರಡೂ ತಂಡಗಳು ತಲಾ ಎರಡು ಅಂಕಗಳನ್ನು ಹೊಂದಿವೆ. ಆದಾಗ್ಯೂ, ಉತ್ತಮ ನೆಟ್ ರನ್​ರೇಟ್​ನಿಂದಾಗಿ ದಕ್ಷಿಣ ಆಫ್ರಿಕಾ (2.140) ಬಿ ಗುಂಪಿನ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಬಿ ಗುಂಪಿನಲ್ಲಿ ಅತಂತ್ರ ಸ್ಥಿತಿ

ಆಸ್ಟ್ರೇಲಿಯಾ (+0.475) ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ (-0.475) ಮೂರನೇ ಸ್ಥಾನದಲ್ಲಿ ಮತ್ತು ಅಫ್ಘಾನಿಸ್ತಾನ (-2.140) ನಾಲ್ಕನೇ ಸ್ಥಾನದಲ್ಲಿದೆ. ಇದೀಗ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ಗ್ರೂಪ್ ಬಿ ನಲ್ಲಿ ಸೆಮಿಫೈನಲ್ ಸ್ಪರ್ಧೆ ಇನ್ನಷ್ಟು ರೋಮಾಂಚನಕಾರಿಯಾಗಿದೆ. ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ಇನ್ನೂ ತಲಾ ಎರಡು ಪಂದ್ಯಗಳನ್ನು ಆಡಬೇಕಾಗಿದೆ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಇನ್ನೂ ಒಂದು ಪಂದ್ಯವನ್ನು ಮಾತ್ರ ಆಡಬೇಕಾಗಿದೆ. ಇಂಗ್ಲೆಂಡ್, ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾವನ್ನು ಸೋಲಿಸಿದರೆ, ಅದು ಸೆಮಿಫೈನಲ್‌ಗೆ ಪ್ರವೇಶ ಪಡೆಯುತ್ತದೆ.

ಉಳಿದ ಪಂದ್ಯಗಳು ನಿರ್ಣಾಯಕ

ಮತ್ತೊಂದೆಡೆ, ಅಫ್ಘಾನಿಸ್ತಾನ ತಂಡವು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ನಾಲ್ಕು ಅಂಕಗಳನ್ನು ಪಡೆಯಬಹುದು. ಇದು ಖಂಡಿತವಾಗಿಯೂ ಕಷ್ಟವಾದರೂ ಅಫ್ಘಾನಿಸ್ತಾನ ಆಟಗಾರರು ಯಾವುದೇ ದೊಡ್ಡ ತಂಡವನ್ನು ಸೋಲಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದಾಗ್ಯೂ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಮ್ಮ ಕೊನೆಯ ಲೀಗ್ ಪಂದ್ಯಗಳನ್ನು ಗೆದ್ದರೆ ಉಭಯ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸುತ್ತವೆ. ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಬುಧವಾರ (ಫೆಬ್ರವರಿ 26) ಲಾಹೋರ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಇದು ಟೂರ್ನಿಯ ಎಂಟನೇ ಪಂದ್ಯ. ಅಫ್ಘಾನಿಸ್ತಾನ ತಂಡ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 107 ರನ್‌ಗಳಿಂದ ಸೋತಿತ್ತು. ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್‌ಗಳಿಂದ ಸೋತಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Tue, 25 February 25

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ