AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಷರತ್ತಿಗೆ ಐಸಿಸಿ ಒಪ್ಪಿಗೆ; ಹೈಬ್ರಿಡ್ ಮಾದರಿಯಲ್ಲಿ ನಡೆಯಲ್ಲಿದೆ ಚಾಂಪಿಯನ್ಸ್ ಟ್ರೋಫಿ..!

Champions Trophy 2025: 2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಆಯೋಜನೆಗೆ ಸಂಬಂಧಿಸಿದಂತೆ ಇದುವರೆಗೆ ಉಂಟಾಗಿದ್ದ ಗೊಂದಲಗಳಿಗೆ ಇಂದು ಐಸಿಸಿ ತೆರೆ ಎಳೆದಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಒಂದು ಷರತ್ತಿಗೆ ಒಪ್ಪಿಗೆ ಸೂಚಿಸಿರುವ ಐಸಿಸಿ, ಚಾಂಪಿಯನ್ಸ್ ಟ್ರೋಫಿಯನ್ನ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ತೀರ್ಮಾನಿಸಿದೆ.

ಪಾಕ್ ಷರತ್ತಿಗೆ ಐಸಿಸಿ ಒಪ್ಪಿಗೆ; ಹೈಬ್ರಿಡ್ ಮಾದರಿಯಲ್ಲಿ ನಡೆಯಲ್ಲಿದೆ ಚಾಂಪಿಯನ್ಸ್ ಟ್ರೋಫಿ..!
ಚಾಂಪಿಯನ್ಸ್ ಟ್ರೋಫಿ
ಪೃಥ್ವಿಶಂಕರ
|

Updated on:Dec 13, 2024 | 10:39 PM

Share

2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಆಯೋಜನೆಗೆ ಸಂಬಂಧಿಸಿದಂತೆ ಇದುವರೆಗೆ ಉಂಟಾಗಿದ್ದ ಗೊಂದಲಗಳಿಗೆ ಇಂದು ಐಸಿಸಿ ತೆರೆ ಎಳೆದಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಒಂದು ಷರತ್ತಿಗೆ ಒಪ್ಪಿಗೆ ಸೂಚಿಸಿರುವ ಐಸಿಸಿ, ಚಾಂಪಿಯನ್ಸ್ ಟ್ರೋಫಿಯನ್ನ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಆಯೋಜನೆಯ ಬಗ್ಗೆ ಐಸಿಸಿ ಮತ್ತು ಪಿಸಿಬಿ ನಡುವೆ ಒಪ್ಪಂದ ನಡೆದಿದೆ. ಆ ಒಪ್ಪಂದದ ಪ್ರಕಾರ, 2026 ರಲ್ಲಿ ಭಾರತದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ ಆಡಲು ಪಾಕಿಸ್ತಾನ ತಂಡ ಭಾರತಕ್ಕೆ ಬರುವುದಿಲ್ಲ. ಅಂದರೆ ಇದೀಗ ಟೀಂ ಇಂಡಿಯಾದ ಪಂದ್ಯಗಳನ್ನು ಹೇಗೆ ಬೇರೆಡೆ ಆಯೋಜಿಸಲಾಗುತ್ತಿದೆಯೋ ಹಾಗೆಯೇ ಪಾಕಿಸ್ತಾನದ ಪಂದ್ಯಗಳನ್ನು ಸಹ ಬೇರಡೆ ಆಯೋಜಿಸಬೇಕಾಗುತ್ತದೆ.

ವರದಿಗಳ ಪ್ರಕಾರ, ಐಸಿಸಿ ಸಭೆಯಲ್ಲಿ ಹೈಬ್ರಿಡ್ ಮಾದರಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಒಪ್ಪಿಗೆ ಸೂಚಿಸಿದೆ. ಆ ಪ್ರಕಾರ, ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಒಂದು ವೇಳೆ ಟೀಂ ಇಂಡಿಯಾ ಫೈನಲ್ ತಲುಪಿದರೆ ಆ ಪಂದ್ಯ ಕೂಡ ದುಬೈನಲ್ಲಿ ನಡೆಯಲಿದೆ. ಅರ್ಥಾತ್, ಭಾರತ-ಪಾಕಿಸ್ತಾನ ಫೈನಲ್ ನಡೆದರೆ ಆತಿಥೇಯ ದೇಶ ದುಬೈಗೆ ಪ್ರಯಾಣ ಬೆಳೆಸಬೇಕಾಗುತ್ತದೆ.

ಇತ್ತ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಳ್ಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೂಡ ಒಂದು ಷರತ್ತನ್ನು ಐಸಿಸಿ ಮುಂದಿಟಿದೆ. ಐಸಿಸಿ ಕೂಡ ಆ ಷರತ್ತಿಗೆ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದೆ. ಆ ಷರತ್ತಿನ ಪ್ರಕಾರ, 2026ರಲ್ಲಿ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಶ್ರೀಲಂಕಾದ ಕೊಲಂಬೊದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಹಾಗೆಯೇ ಟೀಂ ಇಂಡಿಯಾದ ಪಂದ್ಯಗಳನ್ನು ಪಾಕಿಸ್ತಾನದಲ್ಲಿ ನಡೆಸುವ ಅವಕಾಶ ಕಳೆದುಕೊಂಡ ಪಿಸಿಬಿಗೆ ಯಾವುದೇ ಪರಿಹಾರ ನೀಡಲು ಐಸಿಸಿ ನಿರಾಕರಿಸಿದೆ. ಆದರೆ, 2027ರ ನಂತರ ನಡೆಯಲ್ಲಿರುವ ಐಸಿಸಿ ಮಹಿಳಾ ಟ್ರೋಫಿಯ ಆತಿಥ್ಯವನ್ನು ನೀಡುವುದಾಗಿ ಐಸಿಸಿ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ಕೊನೆಗೂ ತಲೆಬಾಗಿದ ಪಿಸಿಬಿ

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿ ಇದುವರೆಗೆ ಪ್ರಕಟವಾಗದಿರಲು ಭಾರತ ಹಾಗೂ ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟವೇ ಪ್ರಮುಖ ಕಾರಣವಾಗಿತ್ತು. ಒಂದೆಡೆ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಭಾರತ ಸರ್ಕಾರ ಒಪ್ಪಿಗೆ ನೀಡದಿದ್ದರೆ, ಇನ್ನೊಂದೆಡೆ ಪಿಸಿಬಿ ಕೂಡ ಹೈಬ್ರಿಡ್ ಮಾದರಿಗೆ ನಾವು ಸಿದ್ದವಿಲ್ಲ ಎಂದು ಮೊಂಡುತನ ಪ್ರದರ್ಶಿಸಿತ್ತು. ಆದರೀಗ ಪಿಸಿಬಿ, ಅಂತಿಮವಾಗಿ ಐಸಿಸಿ ಮತ್ತು ಬಿಸಿಸಿಐ ಎದುರು ತನ್ನ ಸೋಲನ್ನು ಒಪ್ಪಿಕೊಂಡಿದೆ. ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ನಡೆಸಲು ಪಿಸಿಬಿ ಒಪ್ಪಿಗೆ ಸೂಚಿಸಿರುವುದರಿಂದ ಈ ಪಂದ್ಯಾವಳಿಯ ವೇಳಾಪಟ್ಟಿಯನ್ನು ಸಹ ಶೀಘ್ರದಲ್ಲೇ ಪ್ರಕಟಿಸಬಹುದು. ಫೆಬ್ರವರಿ ಅಂತ್ಯದಲ್ಲಿ ಪಂದ್ಯಾವಳಿ ಪ್ರಾರಂಭವಾಗುವ ಸಾಧ್ಯತೆಗಳಿವೆ.

ಸದ್ಯದ ಮಾಹಿತಿ ಪ್ರಕಾರ, 2025 ರ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಲಿದ್ದು, ಆ 8 ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯಲ್ಲಿವೆ. ಸೆಮೀಸ್​ನಲ್ಲಿ ಗೆದ್ದ ತಂಡಗಳ ನಡುವೆ ಫೈನಲ್‌ ಪಂದ್ಯ ನಡೆಯಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Fri, 13 December 24

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸಾಕಷ್ಟು ಭಿನ್ನವಾಗಿ ‘ಮೋಡ ಕವಿದ ವಾತಾವರಣ’ ಸಿನಿಮಾದ ಪ್ರಚಾರ ಮಾಡಿದ ಸುನಿ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ
ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ
ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ?
ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು
ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ