AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಪಾಕಿಸ್ತಾನದ ಕರಾಚಿಯಲ್ಲಿ ಕೊನೆಗೂ ಹಾರಿದ ತ್ರಿವರ್ಣ ಧ್ವಜ

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾರತದ ಧ್ವಜವನ್ನು ಹಾರಿಸದಿರುವುದರಿಂದ ಭಾರಿ ವಿವಾದ ಉಂಟಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ಎದುರಿಸಿದ ನಂತರ, ಪಿಸಿಬಿ ತನ್ನ ತಪ್ಪನ್ನು ಸರಿಪಡಿಸಿ ಭಾರತದ ಧ್ವಜವನ್ನು ಹಾರಿಸಿದೆ. ಆದರೆ, ಮೊದಲು ಧ್ವಜವನ್ನು ತಲೆಕೆಳಗಾಗಿ ಹಾರಿಸಿದ್ದ ಘಟನೆಯೂ ವರದಿಯಾಗಿದೆ.

Champions Trophy 2025: ಪಾಕಿಸ್ತಾನದ ಕರಾಚಿಯಲ್ಲಿ ಕೊನೆಗೂ ಹಾರಿದ ತ್ರಿವರ್ಣ ಧ್ವಜ
Champions Trophy 2025
ಪೃಥ್ವಿಶಂಕರ
|

Updated on: Feb 19, 2025 | 4:43 PM

Share

ಚಾಂಪಿಯನ್ಸ್ ಟ್ರೋಫಿಗೆ ಇಂದಿನಿಂದ ಅದ್ಧೂರಿ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಎದ್ದಿದ್ದ ವಿವಾದಕ್ಕೆ ತೆರೆ ಎಳೆಯುವ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿಶ್ವ ಕ್ರಿಕೆಟ್ ಮುಂದೆ ಮುಜುಗರಕ್ಕೀಡಾಗುವುದರಿಂದ ಪಾರಾಗಿದೆ. ವಾಸ್ತವವಾಗಿ ಈ ಐಸಿಸಿ ಟೂರ್ನಿಗೆ ಆತಿಥ್ಯ ನೀಡುತ್ತಿರುವ ಕರಾಚಿ ಮತ್ತು ಲಾಹೋರ್ ಕ್ರೀಡಾಂಗಣಗಳಲ್ಲಿ ಪಿಸಿಬಿ 7 ತಂಡಗಳ ಧ್ವಜಗಳನ್ನು ಹಾರಿಸಿತ್ತು. ಆದರೆ ಇದರಲ್ಲಿ ಭಾರತದ ಧ್ವಜವನ್ನು ಹಾರಿಸಿರಲಿಲ್ಲ. ಇದರಿಂದ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ವಿವಾದ ಎದ್ದಿತ್ತು. ಆದರೆ ಈಗ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಲಾಗಿದೆ.

ತ್ರಿವರ್ಣ ಧ್ವಜ ಹಾರಿಸದಿದ್ದಕ್ಕೆ ವಿವಾದ

ಮೇಲೆ ಹೇಳಿದಂತೆ ಕ್ರೀಡಾಂಗಣದಲ್ಲಿ ಭಾರತದ ಧ್ವಜವನ್ನು ಹಾರಿಸದ ಪಿಸಿಬಿ ನಡೆಗೆ ಭಾರತೀಯರು ಆಕ್ರೋಶ ಹೊರಹಾಕಿದ್ದರು. ಇದಾದ ನಂತರ ಪಿಸಿಬಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಟೀಕಿಸಲಾಗಿತ್ತು. ಭಾರತ ತಂಡವು ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡುತ್ತಿಲ್ಲವಾದ್ದರಿಂದ ಪಿಸಿಬಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಲಾಗಿತ್ತು. ಆದರೆ ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.

ತಲೆಕೆಳಗಾಗಿ ಹಾರಿದ್ದ ತ್ರಿವರ್ಣ ಧ್ವಜ

ಇದೀಗ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತದ ಧ್ವಜವನ್ನು ಹಾರಿಸಲಾಗಿದೆಯಾದರೂ, ಈ ಮೊದಲು ಕರಾಚಿಯಲ್ಲಿ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿತ್ತು.

ಉಡಾಫೆಯ ಉತ್ತರ ನೀಡಿದ್ದ ಪಿಸಿಬಿ

ವಾಸ್ತವವಾಗಿ ಈ ಹಿಂದೆ ಗಡಾಫಿ ಕ್ರೀಡಾಂಗಣದಲ್ಲಿ ಭಾರತದ ಧ್ವಜ ಹಾರಿಸದಿರುವ ಬಗ್ಗೆ ಗದ್ದಲ ಉಂಟಾದಾಗ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಬಗ್ಗೆ ಸ್ಪಷ್ಟೀಕರಣವನ್ನು ನೀಡಿತ್ತು. ಇದರ ಹಿಂದಿನ ಕಾರಣವನ್ನು ವಿವರಿಸಿದ ಪಾಕ್ ಮಾಧ್ಯಮ, ‘2025 ರ ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳಲ್ಲಿ ಕೇವಲ ನಾಲ್ಕು ಧ್ವಜಗಳು ಮಾತ್ರ ಹಾರಿಸಬೇಕು ಎಂದು ಐಸಿಸಿ ಸೂಚಿಸಿತ್ತು. ಈ ನಾಲ್ಕು ಧ್ವಜಗಳಲ್ಲಿ ಒಂದು ಐಸಿಸಿಯದ್ದು, ಇನ್ನೊಂದು ಆತಿಥೇಯ ದೇಶದ್ದು ಹಾಗೂ ಉಳಿದ ಎರಡು ಧ್ವಜಗಳು ಯಾವ ತಂಡಗಳ ನಡುವೆ ಪಂದ್ಯ ನಡೆಯುತ್ತಿರುತ್ತದೊ ಆ ದೇಶಗಳದ್ದು ಎಂದು ಹೇಳಿಕೊಂಡಿತ್ತು. ಆದರೆ ಪಿಸಿಬಿಯ ಈ ಕಳಪೆ ವಿವರಣೆಯು ಇನ್ನಷ್ಟು ಗದ್ದಲವನ್ನು ಸೃಷ್ಟಿಸಿತ್ತು. ಏಕೆಂದರೆ ಕ್ರೀಡಾಂಗಣದಲ್ಲಿ 4 ಕ್ಕೂ ಹೆಚ್ಚು ಧ್ವಜಗಳನ್ನು ಹಾರಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ.

ದುಬೈನಲ್ಲಿ ಟೀಂ ಇಂಡಿಯಾ ಪಂದ್ಯಗಳು

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿತ್ತು. ಇದಾದ ನಂತರ ಐಸಿಸಿ, ಟೀಂ ಇಂಡಿಯಾದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಿತು. ಈ ಟೂರ್ನಿಯಲ್ಲಿ ಭಾರತ ತಂಡ ಫೆಬ್ರವರಿ 20 ರಿಂದ ತನ್ನ ಅಭಿಯಾನ ಆರಂಭಿಸಲಿದೆ. ಮೊದಲ ಪಂದ್ಯ ಬಾಂಗ್ಲಾದೇಶ ವಿರುದ್ಧ ನಡೆಯಲಿದ್ದು ಇದರ ನಂತರ, ಭಾರತ ತಂಡವು ಫೆಬ್ರವರಿ 23 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಬಳಿಕ ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ