AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿಗರನ್ನು ಅಪಹರಿಸಿ ಸುಲಿಗೆಗೆ ಸಂಚು; ಚಾಂಪಿಯನ್ಸ್ ಟ್ರೋಫಿಗೆ ಭಯೋತ್ಪಾದಕರ ಭೀತಿ

ICC Champions Trophy 2025: ಪಾಕಿಸ್ತಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯ ಮೇಲೆ ಐಎಸ್‌ಕೆಪಿ ಗುಂಪು ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿವೆ ಎಂಬ ಮಾಹಿತಿ ಪಾಕಿಸ್ತಾನ ಗುಪ್ತಚರ ಇಲಾಖೆಗೆ ಸಿಕ್ಕಿದ್ದು, ಎಚ್ಚರಿಕೆವಹಿಸುವಂತೆ ಆಯೋಜಕರಿಗೆ ಮಾಹಿತಿ ನೀಡಿವೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ ಭಯೋತ್ಪಾದಕರು ಚಾಂಪಿಯನ್ಸ್ ಟ್ರೋಫಿ ವೀಕ್ಷಿಸಲು ಬಂದ ವಿದೇಶಿಯರನ್ನು ಅಪಹರಿಸಿ ಹಣ ಸುಲಿಗೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿದೇಶಿಗರನ್ನು ಅಪಹರಿಸಿ ಸುಲಿಗೆಗೆ ಸಂಚು; ಚಾಂಪಿಯನ್ಸ್ ಟ್ರೋಫಿಗೆ  ಭಯೋತ್ಪಾದಕರ ಭೀತಿ
ಚಾಂಪಿಯನ್ಸ್ ಟ್ರೋಫಿ
ಪೃಥ್ವಿಶಂಕರ
|

Updated on:Mar 02, 2025 | 2:19 PM

Share

ಸುಮಾರು 3 ದಶಕಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಿಯೊಂದನ್ನು ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಆಯೋಜಿಸಲಾಗುತ್ತಿದೆ. ಈಗಾಗಲೇ ದಿವಾಳಿ ಎದ್ದಿರುವ ಪಾಕಿಸ್ತಾನಕ್ಕೆ ಹಾಗೂ ಪಾಕ್ ಕ್ರಿಕೆಟ್ ಮಂಡಳಿಗೆ ಐಸಿಸಿಯ ಈ ಟೂರ್ನಿ ಉಸಿರಾಡುವುದಕ್ಕೆ ಅವಕಾಶ ಮಾಡಿಕೊಡುತ್ತದೆ ಎಂಬುದು ಆಯೋಜಕ ಅಭಿಪ್ರಾಯವಾಗಿತ್ತು. ಆದರೆ ಇಲ್ಲಿಯವರೆಗೆ ನಡೆದಿರುವ ಪಂದ್ಯಗಳಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ಹೊರತುಪಡಿಸಿ ಉಳಿದ ಪಂದ್ಯಗಳಿಗೆ ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರು ಮೈದಾನಕ್ಕೆ ಬಂದಿಲ್ಲ. ಇದು ಆಯೋಜಕರಿಗೆ ದೊಡ್ಡ ಚಿಂತೆಯ ವಿಷಯವಾಗಿದೆ. ಇದೆಲ್ಲದೆ ನಡುವೆ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಗೆ ಭಯೋತ್ಪಾದಕ ದಾಳಿಯ ಭಯ ಆವರಿಸಿದೆ. ಐಎಸ್‌ಕೆಪಿ ಭಯೋತ್ಪಾದಕ ಗುಂಪು ಚಾಂಪಿಯನ್ಸ್ ಟ್ರೋಫಿಯನ್ನು ವೀಕ್ಷಿಸಲು ಪಾಕಿಸ್ತಾನಕ್ಕೆ ಬಂದಿರುವ ವಿದೇಶಿಗರನ್ನು ಅಪಹರಿಸಿ ಹಣ ಸುಲಿಗೆ ಮಾಡಲು ಸಂಚು ರೂಪಿಸಿವೆ ಎಂಬ ಮಾಹಿತಿ ಪಾಕ್ ಗುಪ್ತಚರ ಇಲಾಖೆಗೆ ಸಿಕ್ಕಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವಾಸ್ತವವಾಗಿ ಇದೇ ಭಯೋತ್ಪಾದಕ ದಾಳಿಯ ಭಯದಿಂದ ಪಾಕಿಸ್ತಾನದಲ್ಲಿ ಯಾವುದೇ ಮಹತ್ವದ ಈವೆಂಟ್​ಗಳನ್ನು ಆಯೋಜಿಸಲು ಐಸಿಸಿ ಹಿಂದೇಟು ಹಾಕುತ್ತಿತ್ತು. ಇದರ ಜೊತೆಗೆ ಲಂಕಾ ತಂಡದ ಮೇಲೆ ಭಯೋತ್ಪಾದಕರ ದಾಳಿ ನಡೆದ ಬಳಿಕ ಯಾವ ಕ್ರಿಕೆಟ್ ತಂಡವೂ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲು ಮುಂದೆ ಬರುತ್ತಿರಲಿಲ್ಲ. ಆದರೆ ಸೂಕ್ತ ಭದ್ರತೆ ಕಲ್ಪಿಸುವ ಭರವಸೆ ಸಿಕ್ಕ ಬಳಿಕ ಇದೀಗ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲಾಗುತ್ತಿದೆ. ಆದರೆ ಈ ಟೂರ್ನಿ ಆರಂಭವಾಗಿ ಕೆಲವೇ ದಿನಗಳು ಕಳೆದಿರುವಾಗ ಈ ಟೂರ್ನಿಯ ಮೇಲೆ ಭಯೋತ್ಪಾದಕರ ಕರಿನೆರಳು ಆವರಿಸಿದೆ.

ISKP ಯ ಯೋಜನೆ ಏನು?

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವ ವಿದೇಶಿಯರನ್ನು ಅಪಹರಿಸಿ ಸುಲಿಗೆ ಮಾಡಲು ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ISKP) ಸಂಚು ರೂಪಿಸಿದೆ ಎಂಬ ಮಾಹಿತಿ ಪಾಕಿಸ್ತಾನದ ಗುಪ್ತಚರ ಬ್ಯೂರೋಗೆ ಸಿಕ್ಕಿದೆ. ಆ ಪ್ರಕಾರ ಭಯೋತ್ಪಾದಕ ಗುಂಪು ನಿರ್ದಿಷ್ಟವಾಗಿ ಚೀನೀ ಮತ್ತು ಅರಬ್ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಲಾಗುತ್ತದೆ. ಅಲ್ಲದೆ ಈ ದೇಶಗಳ ಸಂದರ್ಶಕರು ಆಗಾಗ್ಗೆ ಬಳಸುವ ಬಂದರುಗಳು, ವಿಮಾನ ನಿಲ್ದಾಣಗಳು, ಕಚೇರಿಗಳು ಮತ್ತು ವಸತಿ ಪ್ರದೇಶಗಳ ಮೇಲೆ ಕಣ್ಣಿಟ್ಟಿವೆ ಎಂಬ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ.

ಭಾರತೀಯ ಏಜೆನ್ಸಿಗಳು ಕೂಡ ಇಂತಹ ದಾಳಿಯ ಸಾಧ್ಯತೆಯ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ನೀಡಿವೆ. ಇಸ್ಲಾಮಿಕ್ ಸ್ಟೇಟ್ – ಖೊರಾಸನ್ ಪ್ರಾಂತ್ಯದ (ISKP) ಭಯೋತ್ಪಾದಕರು ಚಾಂಪಿಯನ್ಸ್ ಟ್ರೋಫಿಯನ್ನು ವೀಕ್ಷಿಸಲು ಬರುವ ವಿದೇಶಿಯರನ್ನು ಅಪಹರಿಸಿ ಹಣ ಸುಲಿಗೆ ಮಾಡಲು ಮುಂದಾಗಿವೆ ಎಂಬ ಮಾಹಿತಿಯನ್ನು ಪಾಕ್ ಗುಪ್ತಚರ ಇಲಾಖೆಗೆ ಭಾರತೀಯ ಏಜೆನ್ಸಿಗಳು ನೀಡಿವೆ ಎಂದು ಹೇಳಲಾಗುತ್ತಿದೆ.

ಏನಿದು ISKP?

ಇಸ್ಲಾಮಿಕ್ ಸ್ಟೇಟ್ – ಖೊರಾಸನ್ ಪ್ರಾಂತ್ಯ (ISKP) ಸಲಾಫಿ ಜಿಹಾದಿ ಗುಂಪು, ಇದು ಇಸ್ಲಾಮಿಕ್ ಸ್ಟೇಟ್‌ನ ಪ್ರಾದೇಶಿಕ ಶಾಖೆಯಾಗಿದ್ದು, ದಕ್ಷಿಣ-ಮಧ್ಯ ಏಷ್ಯಾದಲ್ಲಿ, ಮುಖ್ಯವಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಸಕ್ರಿಯವಾಗಿದೆ. ಇದುವರೆಗೂ ಭಯೋತ್ಪಾದಕ ದಾಳಿಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮೂಲದಿಂದ ಮಾಹಿತಿ ಬಂದಿಲ್ಲವಾದರೂ, ಈ ಗಂಭೀರ ಸ್ವರೂಪದ ಬೆದರಿಕೆಯನ್ನು ನಿರ್ಲಕ್ಷಿಸಿದರೆ ಪಾಕಿಸ್ತಾನ ವಿಶ್ವ ಮಟ್ಟದಲ್ಲಿ ಮುಜುಗರಕ್ಕೀಡಾಗಬೇಕಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Mon, 24 February 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ