AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ಪಾಕಿಸ್ತಾನ ತಂಡ ಪ್ರಕಟ

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಅಂತಿಮವಾಗಿ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಪಿಸಿಬಿ ಪ್ರಕಟಿಸಿದೆ. ಈ ಮೂಲಕ ಈ ಐಸಿಸಿ ಟೂರ್ನಿಗೆ ಎಲ್ಲಾ 8 ತಂಡಗಳನ್ನು ಪ್ರಕಟಿಸಿದಂತ್ತಾಗಿದೆ. 2017ರಲ್ಲಿ ಪ್ರಶಸ್ತಿ ಗೆದ್ದ ಆಟಗಾರರ ವಿಶೇಷ ವಿಡಿಯೋ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿದೆ.

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ಪಾಕಿಸ್ತಾನ ತಂಡ ಪ್ರಕಟ
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on:Jan 31, 2025 | 9:01 PM

Share

ಚಾಂಪಿಯನ್ಸ್ ಟ್ರೋಫಿ ಸಮೀಪಿಸುತ್ತಿರುವ ಬೆನ್ನಲ್ಲೇ ಆತಿಥೇಯ ಪಾಕಿಸ್ತಾನ, ಈ ಐಸಿಸಿ ಟೂರ್ನಿಗೆ ಕೊನೆಗೂ ತನ್ನ ತಂಡವನ್ನು ಪ್ರಕಟಿಸಿದೆ.ಪಿಸಿಬಿಯ ಆಯ್ಕೆ ಸಮಿತಿಯು ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಆಯ್ಕೆಯಾಗಿರುವವರಲ್ಲಿ ಕೆಲವು ಆಟಗಾರರು ಬಹಳ ಸಮಯದ ನಂತರ ತಂಡಕ್ಕೆ ಮರಳಿದ್ದಾರೆ. ಉಳಿದಂತೆ ಆಘಾ ಸಲ್ಮಾನ್ ಅವರನ್ನು ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದ್ದು, ಟ್ವೀಟ್ ಮೂಲಕ ವಿವಾದಕ್ಕೀಡಾಗಿದ್ದ ಸ್ಫೋಟಕ ಆರಂಭಿಕ ಆಟಗಾರ ಫಖರ್ ಜಮಾನ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

15 ಸದಸ್ಯರ ಪಾಕ್ ತಂಡ ಪ್ರಕಟ

ಚಾಂಪಿಯನ್ಸ್ ಟ್ರೋಫಿಗೆ ಆತಿಥ್ಯ ವಹಿಸುತ್ತಿರುವ ಪಾಕಿಸ್ತಾನವನ್ನು ಹೊರತುಪಡಿಸಿ ಉಳಿದ 7 ತಂಡಗಳು ಈಗಾಗಲೇ ತಮ್ಮ ತಂಡವನ್ನು ಪ್ರಕಟಿಸಿದ್ದವು. ಆದರೆ ಪಾಕಿಸ್ತಾನ ಮಾತ್ರ ತನ್ನ ತಂಡವನ್ನು ಪ್ರಕಟಿಸಿರಲಿಲ್ಲ. ಮೊದಲ 6 ತಂಡಗಳು ಐಸಿಸಿ ನಿಗದಿಪಡಿಸಿದ ದಿನಾಂಕದೊಳಗೆ ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿದ್ದವು. ಆದರೆ ಭಾರತ ಹಾಗೂ ಪಾಕಿಸ್ತಾನ ಮಾತ್ರ ತಂಡ ಪ್ರಕಟಣೆಯನ್ನು ತಡ ಮಾಡಿದ್ದವು. ಆ ಬಳಿಕ ಭಾರತ ಕೂಡ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿತ್ತು. ಇದೀಗ 2017ರಲ್ಲಿ ಪ್ರಶಸ್ತಿ ಗೆದ್ದ ಆಟಗಾರರ ವಿಶೇಷ ವಿಡಿಯೋ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿದೆ.

ಭಾರತದ ಗುಂಪಿನಲ್ಲಿ ಪಾಕಿಸ್ತಾನ

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿವೆ. ಇವೆರಡನ್ನು ಹೊರತುಪಡಿಸಿ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಕೂಡ ಇದೇ ತಂಡದಲ್ಲಿವೆ. ಫೆಬ್ರವರಿ 19 ರಂದು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯದೊಂದಿಗೆ ಪಂದ್ಯಾವಳಿಯು ಪ್ರಾರಂಭವಾಗಲಿದೆ. ಇದಾದ ಬಳಿಕ ಪಾಕಿಸ್ತಾನ ತಂಡ ಟೀಂ ಇಂಡಿಯಾವನ್ನು ಎದುರಿಸಲಿದೆ. ಈ ಪಂದ್ಯ ಫೆಬ್ರವರಿ 23 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಾಕಿಸ್ತಾನ ತಂಡ: ಬಾಬರ್ ಆಝಂ, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ನಾಯಕ), ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 pm, Fri, 31 January 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ