AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಪ್ರೇಕ್ಷಕರೇ ಇಲ್ಲ, ಗ್ಯಾಲರಿಗಳೆಲ್ಲ ಖಾಲಿ ಖಾಲಿ; ಮುಜುಗರಕ್ಕೀಡಾದ ಪಾಕಿಸ್ತಾನ

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ಆರಂಭವಾಗಿದ್ದು, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಉದ್ಘಾಟನಾ ಪಂದ್ಯದಲ್ಲಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಕೊರತೆ ಕಂಡುಬಂದಿದೆ. ಇದನ್ನು ಗಮನಿಸಿ, ಮಾಜಿ ಇಂಗ್ಲೆಂಡ್ ಆಟಗಾರ ಮೈಕೆಲ್ ವಾನ್ ತಮ್ಮ ಟ್ವೀಟ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸಿದ್ದಾರೆ. 1996ರ ನಂತರ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಮೊದಲ ಪ್ರಮುಖ ಐಸಿಸಿ ಟೂರ್ನಿ ಇದಾಗಿದ್ದು, ಕಡಿಮೆ ಪ್ರೇಕ್ಷಕರ ಸಂಖ್ಯೆ ನಿರಾಶಾದಾಯಕವಾಗಿದೆ.

Champions Trophy 2025: ಪ್ರೇಕ್ಷಕರೇ ಇಲ್ಲ, ಗ್ಯಾಲರಿಗಳೆಲ್ಲ ಖಾಲಿ ಖಾಲಿ; ಮುಜುಗರಕ್ಕೀಡಾದ ಪಾಕಿಸ್ತಾನ
ಚಾಂಪಿಯನ್ಸ್ ಟ್ರೋಫಿ
ಪೃಥ್ವಿಶಂಕರ
|

Updated on:Feb 19, 2025 | 7:22 PM

Share

2025 ರ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ಆರಂಭವಾಗಿದೆ. ಈ ಐಸಿಸಿ ಟೂರ್ನಮೆಂಟ್‌ನ ಮೊದಲ ಪಂದ್ಯ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ಕರಾಚಿಯ ನ್ಯಾಷನಲ್ ಬ್ಯಾಂಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಮತ್ತು ಕ್ರಿಕೆಟ್ ದಂತಕಥೆಗಳು ಚಾಂಪಿಯನ್ಸ್ ಟ್ರೋಫಿಯ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ, ಮೊದಲ ಪಂದ್ಯದಿಂದಲೇ ಪಾಕಿಸ್ತಾನ ಮುಜುಗರಕ್ಕೀಡಾಗಿದೆ. ಇದಕ್ಕೆ ಕಾರಣ ಈ ಐಸಿಸಿ ಟೂರ್ನಿಯಲ್ಲೂ ಇಡೀ ಕ್ರೀಡಾಂಗಣ ಖಾಲಿ ಖಾಲಿ ಹೊಡೆಯುತ್ತಿರುವುದು. ಆತಿಥೇಯ ಪಾಕಿಸ್ತಾನ ತಂಡ ತನ್ನ ತವರು ಮೈದಾನದಲ್ಲಿ ಮೊದಲ ಪಂದ್ಯವನ್ನಾಡುತ್ತಿದ್ದರೂ ಪಂದ್ಯವನ್ನು ವೀಕ್ಷಿಸಲು ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬಂದಿಲ್ಲ. ಇದನ್ನು ಗಮನಿಸಿದ ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕೆಲ್ ವಾನ್ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡು ಪಾಕಿಸ್ತಾನದ ಕಾಲೆಳೆದಿದ್ದಾರೆ.

ಜನಸಂದಣಿ ಎಲ್ಲಿ?- ಮೈಕೆಲ್ ವಾನ್

ವಾಸ್ತವವಾಗಿ ಈ ಹಿಂದೆ 1996 ರಲ್ಲಿ ಪಾಕಿಸ್ತಾನದಲ್ಲಿ ಏಕದಿನ ವಿಶ್ವಕಪ್ ಆಯೋಜಿಸಲಾಗಿತ್ತು. ಆ ನಂತರ ಒಂದೇ ಒಂದು ಐಸಿಸಿ ಟೂರ್ನಿ ಪಾಕಿಸ್ತಾನದಲ್ಲಿ ನಡೆದಿರಲಿಲ್ಲ. ಇದೀಗ 29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಐಸಿಸಿ ಟೂರ್ನಮೆಂಟ್ ನಡೆಯುತ್ತಿದೆ. ಇದಕ್ಕೆ ಸಂತೋಷ ವ್ಯಕ್ತಪಡಿಸಿದ ಮೈಕಲ್ ವಾನ್, ಅಭಿಮಾನಿಗಳ ಕೊರತೆಯನ್ನು ಉಲ್ಲೇಖಿಸಿ ಪಾಕಿಸ್ತಾನವನ್ನು ಗೇಲಿ ಮಾಡಿದ್ದಾರೆ. ‘ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯುತ್ತಿರುವುದು ನೋಡಲು ತುಂಬಾ ಸಂತೋಷವಾಗಿದೆ.. 1996 ರ ನಂತರದ ಮೊದಲ ಪ್ರಮುಖ ಟೂರ್ನಿ ಇಲ್ಲಿ ನಡೆಯುತ್ತಿದೆ.. ಆದರೆ ಸ್ಥಳೀಯರಿಗೆ ಈ ಈವೆಂಟ್​ ಬಗ್ಗೆ ತಿಳಿಸುವಲ್ಲಿ ಪಿಸಿಬಿ ಮರೆತಿದ್ದಾರೆಯೇ?’. ಜನಸಂದಣಿ ಎಲ್ಲಿದೆ? ಎಂದು ವಾನ್ ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರೇಕ್ಷಕರೇ ಇಲ್ಲ

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಉದ್ಘಾಟನಾ ಪಂದ್ಯ ಮಧ್ಯಾಹ್ನ 2.30 ಕ್ಕೆ ಪ್ರಾರಂಭವಾಯಿತು. ಮೊದಲ ಪಂದ್ಯಕ್ಕೆ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಅದರಲ್ಲೂ ಪಾಕಿಸ್ತಾನದಲ್ಲಿ 29 ವರ್ಷಗಳ ನಂತರ ಐಸಿಸಿ ಈವೆಂಟ್ ನಡೆಯುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬರುವ ನಿರೀಕ್ಷೆಯಿತ್ತು. ಆದರೆ ಪಂದ್ಯಾವಳಿ ಪ್ರಾರಂಭವಾದಾಗ, ದೊಡ್ಡ ನಿರಾಶೆ ಕಾದಿತ್ತು. ನ್ಯಾಷನಲ್ ಬ್ಯಾಂಕ್ ಕ್ರೀಡಾಂಗಣದ ಅನೇಕ ಸ್ಟ್ಯಾಂಡ್‌ಗಳು ಖಾಲಿಯಿದ್ದವು.

ಕಿವೀಸ್ ಇನ್ನಿಂಗ್ಸ್‌ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಕ್ರಿಕೆಟ್ ತಂಡ 320 ರನ್‌ಗಳ ಗುರಿ ನೀಡಿದೆ. ನ್ಯೂಜಿಲೆಂಡ್ ಪರ ಇಬ್ಬರು ಬ್ಯಾಟ್ಸ್‌ಮನ್‌ಗಳು ಶತಕ ಗಳಿಸಿದರೆ, ಇತರರಿಗೆ ಯಾವುದೇ ವಿಶೇಷ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. ವಿಲ್ ಯಂಗ್ ಮತ್ತು ಟಾಮ್ ಲ್ಯಾಥಮ್ ಶತಕ ಬಾರಿಸಿದರೆ ಗ್ಲೆನ್ ಫಿಲಿಪ್ಸ್ ಅರ್ಧಶತಕದ ಇನ್ನಿಂಗ್ಸ್ ಆಡಿದರು ಇದರಿಂದಾಗಿ ನ್ಯೂಜಿಲೆಂಡ್ 300 ರನ್ ದಾಟಲು ಸಾಧ್ಯವಾಯಿತು. ಅಂತಿಮವಾಗಿ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 320 ರನ್ ಕಲೆಹಾಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Wed, 19 February 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!