ಚಾಂಪಿಯನ್ಸ್​ ಟ್ರೋಫಿ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಡಬಲ್ ಶಾಕ್

Champions Trophy 2025: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಆಸ್ಟ್ರೇಲಿಯಾ ತಂಡದ ಇಬ್ಬರು ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ.

ಚಾಂಪಿಯನ್ಸ್​ ಟ್ರೋಫಿ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಡಬಲ್ ಶಾಕ್
Australia
Follow us
ಝಾಹಿರ್ ಯೂಸುಫ್
|

Updated on: Feb 05, 2025 | 10:57 AM

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ಆಸೀಸ್ ಪಡೆಯ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಇದರ ಜೊತೆಗೆ ಜೋಶ್ ಹ್ಯಾಝಲ್​ವುಡ್ ಕೂಡ ಈ ಟೂರ್ನಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯಾ ಮಾಧ್ಯಮ ವರದಿ ಮಾಡಿದೆ.

ಕೋಡ್ ಸ್ಪೋರ್ಟ್ಸ್ ವರದಿ ಪ್ರಕಾರ, ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ಯಾಟ್ ಕಮಿನ್ಸ್ ಹಾಗೂ ಜೋಶ್ ಹ್ಯಾಝಲ್​ವುಡ್ ಕಾಣಿಸಿಕೊಳ್ಳುವುದಿಲ್ಲ. ಪಾದದ ನೋವಿನಿಂದ ಬಳಲುತ್ತಿರುವ ಕಮಿನ್ಸ್ ಐಸಿಸಿ ಟೂರ್ನಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ದೃಢಪಡಿಸಿದ್ದಾರೆ.

ಇನ್ನು ಕಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹ್ಯಾಝಲ್​ವುಡ್ ಕೂಡ ಸಂಪೂರ್ಣ ಫಿಟ್​ನೆಸ್ ಸಾಧಿಸಿಲ್ಲ. ಅಲ್ಲದೆ ಅವರು ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಕೋಡ್ ಸ್ಪೋರ್ಟ್ಸ್ ವರದಿ ಮಾಡಿದೆ.

ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡದ ಇಬ್ಬರು ವೇಗಿಗಳು ಕಣಕ್ಕಿಳಿಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಅದರಲ್ಲೂ ನಾಯಕ ಪ್ಯಾಟ್ ಕಮಿನ್ಸ್ ಹೊರಗುಳಿದರೆ ಆಸ್ಟ್ರೇಲಿಯಾ ಬದಲಿ ಆಟಗಾರನೊಂದಿಗೆ ಹೊಸ ಕ್ಯಾಪ್ಟನ್​ ಅನ್ನು ಆಯ್ಕೆ ಮಾಡಬೇಕಾಗುತ್ತದೆ. ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೊಸ ನಾಯಕ ಮುನ್ನಡೆಸುವುದನ್ನು ಎದುರು ನೋಡಬಹುದು.

ಆಸ್ಟ್ರೇಲಿಯಾಗೆ ಹಿನ್ನಡೆ:

ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡವು ಎಲ್ಲಾ ಟೂರ್ನಿಗಳಲ್ಲೂ ಯಶಸ್ಸು ಸಾಧಿಸಿದೆ. ಅದು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಆಗಿರಬಹುದು ಅಥವಾ ಏಕದಿನ ವಿಶ್ವಕಪ್ ಆಗಿರಬಹುದು. ಇದಲ್ಲದೆ ಇತ್ತೀಚೆಗೆ ಮುಗಿದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಗಿರಬಹುದು.

ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ಇದೀಗ ಚಾಂಪಿಯನ್ಸ್ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಅಲಭ್ಯರಾಗುತ್ತಿರುವುದು ಆಸ್ಟ್ರೇಲಿಯಾ ಪಾಲಿಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಲಿದೆ.

ಇದನ್ನೂ ಓದಿ: ಬ್ರಾವೊ ವಿಶ್ವ ದಾಖಲೆ ಬೌಲ್ಡ್: ಹೊಸ ಇತಿಹಾಸ ನಿರ್ಮಿಸಿದ ರಶೀದ್ ಖಾನ್

ಚಾಂಪಿಯನ್ಸ್ ಟ್ರೋಫಿಗೆ ಆಸ್ಟ್ರೇಲಿಯಾ ತಂಡ: ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರೋನ್ ಹಾರ್ಡಿ, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ.   ಪ್ಯಾಟ್ ಕಮ್ಮಿನ್ಸ್ (ಗಾಯಾಳು), ಜೋಶ್ ಹ್ಯಾಝಲ್‌ವುಡ್ (ಗಾಯಾಳು).

 ಚಾಂಪಿಯನ್ಸ್ ಟ್ರೋಫಿ 2025 ಆಸ್ಟ್ರೇಲಿಯಾ ವೇಳಾಪಟ್ಟಿ
ದಿನಾಂಕ ಪಂದ್ಯಗಳು ಕ್ರೀಡಾಂಗಣ ಸಮಯಗಳು
22 ಫೆಬ್ರವರಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಗಡಾಫಿ ಕ್ರೀಡಾಂಗಣ, ಲಾಹೋರ್ IST ಮಧ್ಯಾಹ್ನ 2:30
25 ಫೆಬ್ರವರಿ ಆಸ್ಟ್ರೇಲಿಯಾ v ಸೌತ್ ಆಫ್ರಿಕಾ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ, ರಾವಲ್ಪಿಂಡಿ IST ಮಧ್ಯಾಹ್ನ 2:30
28 ಫೆಬ್ರವರಿ ಅಫ್ಘಾನಿಸ್ತಾನ್ v ಆಸ್ಟ್ರೇಲಿಯಾ ಗಡಾಫಿ ಕ್ರೀಡಾಂಗಣ, ಲಾಹೋರ್ IST ಮಧ್ಯಾಹ್ನ 2:30
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ