AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ ವೀಕ್ಷಿಸಲು ಬಂದರೆ ಉಚಿತ ಊಟ ಕೊಡ್ತೀವಿ: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಫರ್

SA vs NZ: ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಈ ಮ್ಯಾಚ್​ನಲ್ಲಿ ಗೆದ್ದ ತಂಡ ಮಾರ್ಚ್ 9 ರಂದು ನಡೆಯಲಿರುವ ಫೈನಲ್​ನಲ್ಲಿ ಭಾರತ ತಂಡವನ್ನು ಎದುರಿಸಲಿದೆ.

ಸೆಮಿಫೈನಲ್​ ವೀಕ್ಷಿಸಲು ಬಂದರೆ ಉಚಿತ ಊಟ ಕೊಡ್ತೀವಿ: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಫರ್
Pakistan Fans
ಝಾಹಿರ್ ಯೂಸುಫ್
|

Updated on: Mar 05, 2025 | 9:53 AM

Share

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದೆ. ಇನ್ನು ದ್ವಿತೀಯ ಸೆಮಿಫೈನಲ್ ಪಂದ್ಯವು ಇಂದು (ಮಾ.5) ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಪ್ರೇಕ್ಷಕ ಕೊರತೆ ಕಂಡು ಬರುವುದು ಖಚಿತ.  ಏಕೆಂದರೆ ಪಾಕಿಸ್ತಾನ್ ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ಸೌತ್ ಆಫ್ರಿಕಾ-ನ್ಯೂಝಿಲೆಂಡ್ ನಡುವಣ ಪಂದ್ಯದತ್ತ ಪಾಕ್ ಅಭಿಮಾನಿಗಳು ಮುಖ ಮಾಡುವ ಸಾಧ್ಯತೆಯಿಲ್ಲ.

ಅದರಲ್ಲೂ ಮುಸ್ಲಿಮರ ಪವಿತ್ರ ರಂಜಾನ್ ತಿಂಗಳು ನಡೆಯುತ್ತಿದೆ. ಹೀಗಾಗಿ ಬಹುತೇಕರು ಉಪವಾಸದಲ್ಲಿರುವ ಕಾರಣ ಪಂದ್ಯ ವೀಕ್ಷಿಸಲು ಪ್ರೇಕ್ಷಕರು ಸ್ಟೇಡಿಯಂಗೆ ಬರುವ ಸಾಧ್ಯತೆಯಿಲ್ಲ ಎಂಬುದನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮನಗಂಡಿದೆ.

ಇಫ್ತಾರ್ ಘೋಷಣೆ:

ಇಂಗ್ಲೆಂಡ್ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯದ ವೇಳೆಯೇ ಸ್ಟೇಡಿಯಂ ಖಾಲಿ ಹೊಡೆಯುತ್ತಿತ್ತು. ಇದೀಗ ರಂಜಾನ್ ಆಗಿರುವ ಕಾರಣ 2ನೇ ಸೆಮಿಫೈನಲ್ ಪಂದ್ಯದ ವೇಳೆಯೂ ಅಭಿಮಾನಿಗಳ ಅನುಪಸ್ಥಿತಿ ಎದ್ದು ಕಾಣುವ ಸಾಧ್ಯತೆಯಿದೆ. ಹೀಗಾಗಿ ಸೆಮಿಫೈನಲ್ ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಉಚಿತ ಇಫ್ತಾರ್ ನೀಡುವುದಾಗಿ ಘೋಷಿಸಿದೆ.

ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಉಚಿತ ಇಫ್ತಾರ್ ಬಾಕ್ಸ್ ನೀಡಲಿದ್ದು, ಇದರಲ್ಲಿ ಇದರಲ್ಲಿ ಖರ್ಜೂರ, ಜ್ಯೂಸ್ ಮತ್ತು ಮಿನಿ ಪಿಜ್ಜಾ ಇರಲಿದೆ ಎಂದು ಪಿಸಿಬಿ ತಿಳಿಸಿದೆ.

ಅಲ್ಲದೆ ಸ್ಟೇಡಿಯಂನಲ್ಲಿನ ಆಹಾರ ಮಳಿಗೆಗಳಲ್ಲಿ ಇತರ ಬಗೆಯ ಖಾದ್ಯ ಭಕ್ಷ್ಯ ಸಹ ಲಭ್ಯವಿರುತ್ತವೆ. ಇನ್ನು ಊಟ ಬೇಕಿದ್ದವರಿಗೆ ಇಲ್ಲಿ ಊಟದ ವ್ಯವಸ್ಥೆಯನ್ನೂ ಸಹ ಮಾಡಲಾಗಿರುತ್ತದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಈ ಮೂಲಕ ಉಪವಾಸ ಹೊಂದಿರುವ ಪಾಕಿಸ್ತಾನ್ ಜನರನ್ನು ಸ್ಟೇಡಿಯಂಗೆ ಬರುವಂತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮನವಿ ಮಾಡಿದೆ. ಇದಾಗ್ಯೂ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯದ ವೇಳೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುವ ಸಾಧ್ಯತೆಯಿದ್ದು, ಇನ್ನು ಊಟದ ವ್ಯವಸ್ಥೆಯ ಕಾರಣ ಅಭಿಮಾನಿಗಳು ಸ್ಟೇಡಿಯಂನತ್ತ ಮುಖ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಪಾಕಿಸ್ತಾನ್ ಕೈ ತಪ್ಪಿದ ಫೈನಲ್ ಮ್ಯಾಚ್:

ಮೊದಲ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯವು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದರೊಂದಿಗೆ 29 ವರ್ಷಗಳ ಬಳಿಕ ಐಸಿಸಿ ಟೂರ್ನಿಯ ಮಹತ್ವದ ಪಂದ್ಯವನ್ನು ಆಯೋಜಿಸುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕನಸು ಕೂಡ ಕಮರಿದೆ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ