Champions Trophy 2025: ಎಲ್ಲಾ ಅರ್ಧಂಬರ್ಧ; ಪಾಕಿಸ್ತಾನದಿಂದ ಚಾಂಪಿಯನ್ಸ್​ ಟ್ರೋಫಿ ಎತ್ತಂಗಡಿ ಸಾಧ್ಯತೆ

Champions Trophy 2025: ವರ್ಷಗಳ ಬಳಿಕ ಐಸಿಸಿ ಟೂರ್ನಿಗೆ ಆತಿಥ್ಯ ನೀಡಲು ಸಾಕಷ್ಟು ಕಸರತ್ತು ನಡೆಸುತ್ತಿರುವ ಪಾಕಿಸ್ತಾನಕ್ಕೆ ಆಘಾತ ಎದುರಾಗಿದೆ . ಫೆಬ್ರುವರಿಯಲ್ಲಿ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನದ ಕ್ರೀಡಾಂಗಣಗಳು ಸಿದ್ಧವಾಗಿಲ್ಲ. ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್‌ನ ಕ್ರೀಡಾಂಗಣಗಳ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದೆ. ಐಸಿಸಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದು, ಸಿದ್ಧತೆಗಳ ಕೊರತೆಯಿಂದ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸುವ ಸಾಧ್ಯತೆ ಇದೆ.

Champions Trophy 2025: ಎಲ್ಲಾ ಅರ್ಧಂಬರ್ಧ; ಪಾಕಿಸ್ತಾನದಿಂದ ಚಾಂಪಿಯನ್ಸ್​ ಟ್ರೋಫಿ ಎತ್ತಂಗಡಿ ಸಾಧ್ಯತೆ
ಚಾಂಪಿಯನ್ಸ್ ಟ್ರೋಫಿ
Follow us
ಪೃಥ್ವಿಶಂಕರ
|

Updated on:Jan 08, 2025 | 3:37 PM

ಏಕಾಂಗಿಯಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುವ ಆಸೆಯಲ್ಲಿದ್ದ ಪಾಕಿಸ್ತಾನಕ್ಕೆ ಭಾರತ ಹೈಬ್ರಿಡ್ ಮಾದರಿಯನ್ನು ಮುಂದಿಟ್ಟು ಬಿಗ್ ಶಾಕ್ ನೀಡಿತ್ತು. ಸಾಕಷ್ಟು ಹೋರಾಟದ ಬಳಿಕ ಹೈಬ್ರಿಡ್ ಮಾದರಿಗೆ ಪಾಕಿಸ್ತಾನ ಒಪ್ಪಿಕೊಳ್ಳಲೇಬೇಕಾಯಿತು. ಅದರಂತೆ ಇದೀಗ ಫೆಬ್ರವರಿಯಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಹಾಗೂ ಯುಎಇ ಆತಿಥ್ಯವಹಿಸುತ್ತಿವೆ. ಅಂದರೆ ಭಾರತದ ಪಂದ್ಯಗಳು ಯುಎಇಯಲ್ಲಿ ನಡೆಯಲ್ಲಿವೆ. ಉಳಿದ ಪಂದ್ಯಗಳಿಗೆ ಪಾಕಿಸ್ತಾನ ಆತಿಥ್ಯ ನೀಡಲಿದೆ. ಆದರೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಇಡೀ ಪಂದ್ಯಾವಳಿ ಪಾಕಿಸ್ತಾನದಿಂದ ಬೇರೆಡೆಗೆ ಸ್ಥಳಾಂತರವಾಗಬಹುದು ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣವೂ ಇದ್ದು, ಚಾಂಪಿಯನ್ಸ್ ಟ್ರೋಫಿಯನ್ನು ನಡೆಸಲು ನಿಗದಿಪಡಿಸಿರುವ ಮೂರು ಕ್ರೀಡಾಂಗಣಗಳು ಈ ಟೂರ್ನಿಯನ್ನು ಆಯೋಜಿಸಲು ಇನ್ನು ಸಿದ್ಧವಾಗಿಲ್ಲ. ಹೀಗಾಗಿ ಇಡೀ ಪಂದ್ಯಾವಳಿಯನ್ನು ಯುಎಇಗೆ ಸ್ಥಳಾಂತರಿಸಬಹುದು ಎನ್ನಲಾಗುತ್ತಿದೆ.

ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದೆ

ಏಕದಿನ ಮಾದರಿಯಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಪಾಕಿಸ್ತಾನದ ಲಾಹೋರ್, ರಾವಲ್ಪಿಂಡಿ ಮತ್ತು ಕರಾಚಿಯ 3 ಕ್ರೀಡಾಂಗಣಗಳಲ್ಲಿ ನಡೆಯಲಿವೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೂರು ಕ್ರೀಡಾಂಗಣಗಳು ಇನ್ನೂ ಸಿದ್ಧವಾಗಿಲ್ಲ. ಇದೀಗ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ 40 ದಿನಗಳು ಮಾತ್ರ ಬಾಕಿ ಉಳಿದಿದ್ದು, ಪಾಕಿಸ್ತಾನದ ಎಲ್ಲಾ ಮೂರು ಕ್ರೀಡಾಂಗಣಗಳಲ್ಲಿ ನಿರ್ಮಾಣ ಕಾರ್ಯ ಇನ್ನೂ ನಡೆಯುತ್ತಿದೆ.

ಮುಂದಿನ ವಾರ ಐಸಿಸಿ ಅಧಿಕಾರಿಗಳು ಪಾಕಿಸ್ತಾನಕ್ಕೆ ತೆರಳಿ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ ಸ್ಟೇಡಿಯಂಗಳನ್ನು ಪರಿಶೀಲಿಸಲಿದ್ದಾರೆ ಎಂಬ ವರದಿಗಳಿವೆ. ಸರಿಯಾದ ಸಮಯಕ್ಕೆ ಕ್ರೀಡಾಂಗಣವನ್ನು ಸಿದ್ಧಪಡಿಸಲು ಪಿಸಿಬಿಗೆ ಗಡುವು ನೀಡಲಾಗಿದೆ. ಪಿಸಿಬಿ ಈ ಗಡುವಿನೊಳಗೆ ಕ್ರೀಡಾಂಗಣಗಳನ್ನು ಸಿದ್ಧಪಡಿಸದಿದ್ದರೆ, ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಬಹುದು. ಹೀಗಾದಲ್ಲಿ ಸಂಪೂರ್ಣ ಚಾಂಪಿಯನ್ಸ್ ಟ್ರೋಫಿ ಯುಎಇಯಲ್ಲಿ ಆಯೋಜನೆಯಾಗಲಿದೆ.

ಪಾಕಿಸ್ತಾನಕ್ಕೆ ವಿಶ್ವ ಮಟ್ಟದಲ್ಲಿ ಮುಜುಗರ

ಪಾಕಿಸ್ತಾನದ ಸ್ಟೇಡಿಯಂಗಳ ಬಗ್ಗೆ ಹೇಳುವುದಾದರೆ ಗಡಾಫಿ ಸ್ಟೇಡಿಯಂ ಇನ್ನೂ ಸಿದ್ಧವಾಗಿಲ್ಲ. ಅಲ್ಲಿ ಯಾವುದೇ ಶೆಡ್‌ಗಳನ್ನು ಅಳವಡಿಸಲಾಗಿಲ್ಲ, ಯಾವುದೇ ಫ್ಲಡ್ ಲೈಟ್‌ಗಳನ್ನು ಅಳವಡಿಸಲಾಗಿಲ್ಲ. ಅಷ್ಟೇ ಅಲ್ಲ ಫ್ಯಾನ್​ಗಳಿಗೆ ಕುರ್ಚಿಗಳನ್ನೂ ಅಳವಡಿಸಿಲ್ಲ. ಕ್ರೀಡಾಂಗಣದ ಸಂಪೂರ್ಣ ಸಿದ್ಧತೆಗೆ ಜನವರಿ 25 ಗಡುವು ನೀಡಲಾಗಿದ್ದು, ಈ ದಿನಾಂಕದೊಳಗೆ ಸಂಪೂರ್ಣ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಇದು ನಿಜವಾದರೆ ಪಾಕಿಸ್ತಾನದ ಪ್ರತಿಷ್ಠೆಗೆ ಧಕ್ಕೆಯಾಗುವುದು ಖಂಡಿತ. ಏಕೆಂದರೆ ಇಡೀ ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ಪಿಸಿಬಿ, ಐಸಿಸಿ ಮುಂದೆ ಹಟ ಹಿಡಿದು ಕುಳಿತಿತ್ತು. ಇದಲ್ಲದೆ ಬಿಸಿಸಿಐ ವಿರುದ್ಧವೂ ಬೆಂಕಿ ಉಗುಳಿತ್ತು. ಹೀಗಿರುವಾಗ ಕ್ರೀಡಾಂಗಣಗಳನ್ನು ಟೂರ್ನಿಗೆ ಸಿದ್ಧಪಡಿಸುವಲ್ಲಿ ಪಿಸಿಬಿ ಯಶಸ್ವಿಯಾಗದಿದ್ದರೆ, ವಿಶ್ವ ಕ್ರಿಕೆಟ್ ಮುಂದೆ ತಲೆಭಾಗಬೇಕಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Wed, 8 January 25

ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್
ನಿನ್ನೆ ಜೋಡಿ, ಇಂದು ವೈರಿ: ಕಿತ್ತಾಡಿದ ಭವ್ಯಾ-ತ್ರಿವಿಕ್ರಮ್