AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Video: ಐಪಿಎಲ್​ಗೆ ಧೋನಿ ವಿದಾಯ? ಭಾವನಾತ್ಮಕ ವಿಡಿಯೋ ಹಂಚಿಕೊಂಡ ಸಿಎಸ್​​ಕೆ..!

MS Dhoni Video: ಸಿಎಸ್​ಕೆ ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಯ ಬಗ್ಗೆ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದು, ಧೋನಿ ಐಪಿಎಲ್​ಗೆ ನಿವೃತ್ತಿ ಹೇಳಿದರಾ ಎಂಬ ಅನುಮಾನ ಕಾಡಲಾರಂಭಿಸಿದೆ.

MS Dhoni Video: ಐಪಿಎಲ್​ಗೆ ಧೋನಿ ವಿದಾಯ? ಭಾವನಾತ್ಮಕ ವಿಡಿಯೋ ಹಂಚಿಕೊಂಡ ಸಿಎಸ್​​ಕೆ..!
ಎಂಎಸ್ ಧೋನಿ
ಪೃಥ್ವಿಶಂಕರ
|

Updated on:Jun 14, 2023 | 8:43 AM

Share

16ನೇ ಆವೃತ್ತಿಯ ಐಪಿಎಲ್ (IPL 2023) ಮುಗಿದು ಎರಡು ವಾರಗಳಿಗಿಂತ ಹೆಚ್ಚು ಸಮಯ ಕಳೆದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (chennai super kings) ಐದನೇ ಬಾರಿಗೆ ಪ್ರಶಸ್ತಿ ಗೆಲ್ಲುವುದರೊಂದಿಗೆ ಮಿಲಿಯನ್ ಡಾಲರ್ ಟೂರ್ನಿಗೆ ತೆರೆ ಬಿದ್ದಿತ್ತು. ಅಲ್ಲದೆ ಈ ಆವೃತ್ತಿ ಎಂಎಸ್ ಧೋನಿ (MS Dhoni) ಅವರ ಕೊನೆಯ ಆವೃತ್ತಿ ಎಂಬ ಮಾತು ಟೂರ್ನಿ ಆರಂಭಕ್ಕೂ ಮುನ್ನವೇ ಕೇಳಿಬರಲಾರಂಭಿಸಿತ್ತು. ಆದರೆ ಈ ಊಹಪೋಹಗಳಿಗೆ ಲೀಗ್​ನ ಕೊನೆಯಲ್ಲಿ ಉತ್ತರಿಸಿದ್ದ ಧೋನಿ, ಅದರ ಬಗ್ಗೆ ಚಿಂತಿಸಲು ನನಗೆ ಇನ್ನೂ 7 ರಿಂದ 8 ತಿಂಗಳ ಕಾಲಾವಕಾಶವಿದೆ ಎಂದಿದ್ದರು. ಆ ಬಳಿಕ ಧೋನಿಯ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಸಿಎಸ್​ಕೆ (CSK) ಸಿಇಒ ಕೂಡ ಧೋನಿ ತಂಡದಲ್ಲಿ ಆಡುವುದಾದರೆ ಅದಕ್ಕೆ ನಮ್ಮ ಸ್ವಾಗತಿವಿದೆ ಎಂದಿದ್ದರು. ಈ ಮೂಲಕ ಧೋನಿ ಸದ್ಯಕ್ಕೆ ನಿವೃತ್ತಿ ನೀಡುವುದಿಲ್ಲ, ಮುಂದಿನ ಆವೃತ್ತಿಯಲ್ಲೂ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದರು. ಆದರೆ ಇದೀಗ ಸಿಎಸ್​ಕೆ ಫ್ರಾಂಚೈಸಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಯ ಬಗ್ಗೆ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದು, ಧೋನಿ ಐಪಿಎಲ್​ಗೆ ನಿವೃತ್ತಿ ಹೇಳಿದರಾ ಎಂಬ ಅನುಮಾನ ಕಾಡಲಾರಂಭಿಸಿದೆ.

ಮೂರು ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ಧ ಧೋನಿ ಐಪಿಎಲ್‌ನಲ್ಲಿ ವೈರಾಗ್ಯ ಭಾವದಲ್ಲಿ ಕಾಣಿಸಿಕೊಳ್ಳಲಾರಂಭಿಸಿದ್ದರು. ಮೈದಾನದಲ್ಲಿ ಧೋನಿಯ ಆ ಉತ್ಸಾಹ ಕಳೆಗುಂದಲಾರಂಭಿಸಿತ್ತು. ಇದಕ್ಕೆ ಪೂರಕವಾಗಿ ಧೋನಿ ಕೂಡ ಕೊನೆಯ ಹಂತದಲ್ಲಿ ಬ್ಯಾಟಿಂಗ್​​ ಬರಲಾರಂಭಿಸಿದ್ದರು. ಹೀಗಾಗಿ ಧೋನಿಗೆ 2023ರ ಐಪಿಎಲ್ ಕೊನೆಯ ಐಪಿಎಲ್ ಆಗಿರಬಹುದು ಎಂಬುದು ಕ್ರಿಕೆಟ್ ಪಂಡಿತರ ಅಭಿಪ್ರಾಯವಾಗಿತ್ತು. ಆದರೆ ಅಂತಿಮವಾಗಿ ಧೋನಿ ಐಪಿಎಲ್​ನ ಕೊನೆಯಲ್ಲಿ ಇದಕ್ಕೆಲ್ಲ ಉತ್ತರಿಸಿದ್ದರು.

ಆದರೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್‌ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಹರಿದಾಡಲಾರಂಭಿಸಿವೆ. ಅದರಲ್ಲೂ ಇತ್ತೀಚೆಗೆ ಸಿಎಸ್​ಕೆ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಧೋನಿಗೆ ಸಂಬಂಧಿಸಿದ 33 ಸೆಕೆಂಡ್​ಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಇದು ಅಭಿಮಾನಿಗಳನ್ನು ಮತ್ತೆ ಭಾವುಕರನ್ನಾಗಿ ಮಾಡಿದೆ.

ನಿವೃತ್ತಿ ಬಗ್ಗೆ ಧೋನಿ ಹೇಳಿದ್ದೇನು?

ಮೇ 29 ರಂದು ನಡೆದ ರೋಚಕ ಫೈನಲ್‌ನಲ್ಲಿ ಗೆದ್ದ ನಂತರ ನಿವೃತ್ತಿ ಬಗ್ಗೆ ಮಾತನಾಡಿದ್ದ ಧೋನಿ, ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ ನಿವೃತ್ತಿ ಘೋಷಿಸಲು ಇದು ನನಗೆ ಸರಿಯಾದ ಸಮಯ. ಆದರೆ, ಈ ವರ್ಷ ನಾನು ಎಲ್ಲೇ ಹೋಗಿದ್ದರು ನನ್ನ ಮೇಲೆ ಪ್ರೀತಿ ಮತ್ತು ವಾತ್ಸಲ್ಯ ತೋರಿಸಿದರು. ಎಲ್ಲರಿಗೂ ತುಂಬಾ ಧನ್ಯವಾದಗಳು ಎಂದು ಹೇಳುವುದು ಸುಲಭದ ವಿಷಯ, ಆದರೆ ಕಠಿಣ ವಿಷಯವೆಂದರೆ ಇನ್ನೂ 9 ತಿಂಗಳು ಕಷ್ಟಪಟ್ಟು ಮುಂದಿನ ಐಪಿಎಲ್ ಆಡುವುದು. ಇದು ನನ್ನ ದೇಹಕ್ಕೆ ಸುಲಭವಾಗುವುದಿಲ್ಲ. ಆದರೆ, ಅಭಿಮಾನಿಗಳಿಗೆ ನನ್ನಿಂದ ಉಡುಗೊರೆಯಾಗಲಿದೆ ಎಂದು ಹೇಳಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:41 am, Wed, 14 June 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ