Sign In

By signing in or creating an account, you agree with Associated Broadcasting Company's Terms & Conditions and Privacy Policy.

Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

India vs England 2nd Test: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ.

Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?
Kl Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2021 | 3:13 PM

ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ (India vs England 2nd Test) ನಡುವಣ 2ನೇ ಟೆಸ್ಟ್ ಪಂದ್ಯವು ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೊದಲ ಇನಿಂಗ್ಸ್​ನಲ್ಲಿ ಭಾರತ ಕೆಎಲ್ ರಾಹುಲ್ (KL Rahul) ಅವರ ಆಕರ್ಷಕ ಶತಕದ ನೆರವಿನಿಂದ 364 ರನ್ ಕಲೆಹಾಕಿತ್ತು. ಒಂದು ಹಂತದಲ್ಲಿ 400ರ ಗಡಿದಾಟುವ ವಿಶ್ವಾಸದಲ್ಲಿದ್ದ ಟೀಮ್ ಇಂಡಿಯಾಗೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಕೈ ಕೊಟ್ಟರು. ಅದರಲ್ಲೂ ಟೆಸ್ಟ್ ಸ್ಪೆಷಲಿಸ್ಟ್ ಎನಿಸಿಕೊಂಡಿರುವ ಚೇತೇಶ್ವರ ಪೂಜಾರ (9) ಹಾಗೂ ಅಜಿಂಕ್ಯ ರಹಾನೆ (1) ವಿಫಲರಾಗಿದ್ದು ಭಾರತಕ್ಕೆ ಮುಳುವಾಯಿತು. ಇದರ ಬೆನ್ನಲ್ಲೇ ಪೂಜಾರ ಹಾಗೂ ರಹಾನೆ ಅವರ ಕಳಪೆ ಫಾರ್ಮ್​ ಬಗ್ಗೆ ಟೀಕೆಗಳು ಕೇಳಿ ಬಂದವು. ಏಕೆಂದರೆ ಪ್ರಸ್ತುತ ಸರಣಿಯಲ್ಲಿ ಪೂಜಾರ 3 ಇನ್ನಿಂಗ್ಸ್‌ಗಳಲ್ಲಿ 4, 12 ಮತ್ತು 9 ರನ್​ಗಳಿಸಿ ಔಟಾಗಿದ್ದಾರೆ. ಇನ್ನೊಂದೆಡೆ ರಹಾನೆ ಎರಡು ಇನ್ನಿಂಗ್ಸ್‌ಗಳಲ್ಲಿ 5 ಮತ್ತು ಒಂದು ರನ್ ಕೊಡುಗೆಯನ್ನು ನೀಡಿದ್ದಾರೆ. ಹೀಗಾಗಿ ಈ ಇಬ್ಬರನ್ನು ಕೈಬಿಟ್ಟು ಬೆಂಚ್ ಕಾಯುತ್ತಿರುವ ಆಟಗಾರರಿಗೆ ಸ್ಥಾನ ನೀಡಬೇಕು ಎಂಬ ಕೂಗುಗಳು ಕೇಳಿಬಂದಿದ್ದವು. ಇದೇ ವಿಷಯ ಟೀಮ್ ಇಂಡಿಯಾ ಪತ್ರಿಕಾಗೋಷ್ಠಿಯಲ್ಲೂ ಪಸ್ತಾಪವಾಗಿತ್ತು. 2ನೇ ದಿನದಾಟ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್​ಗೆ ಪೂಜಾರ ಹಾಗೂ ರಹಾನೆ ಫಾರ್ಮ್​ ಬಗ್ಗೆ ಕೇಳಲಾಯಿತು.

ಈ ಬಗ್ಗೆ ಮಾತನಾಡಿದ ಕೆಎಲ್​ಆರ್​, ಚೇತಶ್ವರ ಪೂಜಾರ ಹಾಗೂ ಅಜಿಂಕ್ಯ ರಹಾನೆ ಭಾರತಕ್ಕಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರು. ಅವರು ವಿಶ್ವ ದರ್ಜೆಯ ಮತ್ತು ಅನುಭವಿ ಆಟಗಾರರಾಗಿರುವುದರಿಂದ ಕಳಪೆ ಫಾರ್ಮ್​ನಿಂದ ಚೇತರಿಸಿಕೊಳ್ಳುವುದು ಹೇಗೆ ಎಂಬುದು ಅವರಿಗೆ ತಿಳಿದಿದೆ. ಹೀಗಾಗಿ ಶೀಘ್ರದಲ್ಲೇ ಅವರು ಕಂಬ್ಯಾಕ್ ಮಾಡಲಿದ್ದಾರೆ ಎಂದು ರಾಹುಲ್ ತಿಳಿಸಿದರು.

ಅಷ್ಟೇ ಅಲ್ಲದೆ ಟೀಕೆ ಮಾಡುವ ಮುನ್ನ ಪೂಜಾರ ಹಾಗೂ ರಹಾನೆ ಕಷ್ಟದ ಪರಿಸ್ಥಿತಿಯಲ್ಲಿ ಆಡುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಇಂಗ್ಲೆಂಡ್ ಪರಿಸ್ಥಿತಿಗಳಲ್ಲಿ ಬ್ಯಾಟಿಂಗ್ ಯಾವಾಗಲೂ ಸವಾಲಿನದ್ದಾಗಿದೆ. ನೀವು ಉತ್ತಮ ಎಸೆತಗಳನ್ನು ಎದುರಿಸಬೇಕಾಗುತ್ತದೆ. ಇಲ್ಲಿ ಪ್ರತಿ ಇನ್ನಿಂಗ್ಸ್‌ನಲ್ಲಿ ರನ್ ಗಳಿಸಲು ಸಾಧ್ಯವಿಲ್ಲ. ಆದರೆ ನೀವು ಉತ್ತಮ ಆರಂಭವನ್ನು ಪಡೆದರೆ, ನೀವು ಅದರ ಲಾಭವನ್ನು ಪಡೆದುಕೊಳ್ಳಬಹುದು ಎಂದು ರಾಹುಲ್ ಅಭಿಪ್ರಾಯಪಟ್ಟರು.

ಇನ್ನು ಲಾರ್ಡ್ಸ್​ ಮೈದಾನದಲ್ಲಿ ಚೊಚ್ಚಲ ಶತಕ ಬಾರಿಸಿದ ರಾಹುಲ್ ತಮ್ಮ 129 ರನ್​ಗಳ ಕೊಡುಗೆಯ ಹೊರತಾಗಿಯೂ ತಂಡವನ್ನು ಮೊತ್ತವನ್ನು ಬೃಹತ್ ಮೊತ್ತವನ್ನಾಗಿಸುವಲ್ಲಿ ವಿಫಲರಾಗಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ಸದ್ಯ ಮೂರನೇ ದಿನಕ್ಕೆ ಕಾಲಿಟ್ಟಿರುವ ಇಂಗ್ಲೆಂಡ್-ಭಾರತ 2ನೇ ಟೆಸ್ಟ್​ ಪಂದ್ಯದಲ್ಲಿ ಆಂಗ್ಲರು ಸೆಕೆಂಡ್ ಇನಿಂಗ್ಸ್ ಆಡುತ್ತಿದ್ದಾರೆ. ಸದ್ಯದ ಮಾಹಿತಿಯಂತೆ ಇಂಗ್ಲೆಂಡ್​ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಳೆದುಕೊಂಡು 119 ರನ್​ಗಳಿಸಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ- ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ – ರೋರಿ ಬರ್ನ್ಸ್, ಡೊಮ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್, ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್, ಮೊಯೀನ್ ಅಲಿ, ಸ್ಯಾಮ್ ಕರನ್, ಓಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಅಂಡರ್ಸನ್

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್