AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheteshwar Pujara: 20 ಫೋರ್, 2 ಸಿಕ್ಸ್: ತೂಫಾನ್ ಶತಕ ಸಿಡಿಸಿದ ಚೇತೇಶ್ವರ ಪೂಜಾರ..!

Cheteshwar Pujara: ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಚೇತೇಶ್ವರ ಪೂಜಾರ ಸಸೆಕ್ಸ್ ತಂಡದ ಹಂಗಾಮಿ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ನಾಯಕನಾಗುತ್ತಿದ್ದಂತೆ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಪೂಜಾರ ಇದೀಗ ಸಸೆಕ್ಸ್ ತಂಡದ ಬೆನ್ನೆಲುಬಾಗಿ ನಿಂತಿದ್ದಾರೆ.

Cheteshwar Pujara: 20 ಫೋರ್, 2 ಸಿಕ್ಸ್: ತೂಫಾನ್ ಶತಕ ಸಿಡಿಸಿದ ಚೇತೇಶ್ವರ ಪೂಜಾರ..!
Cheteshwar Pujara
TV9 Web
| Edited By: |

Updated on: Aug 24, 2022 | 12:25 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ರಾಯಲ್ ಲಂಡನ್ ಕಪ್ (Royal London Cup) ಏಕದಿನ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರಾ (Cheteshwar Pujara) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಸೆಕ್ಸ್ ತಂಡದ ಪರ ನಾಯಕ ಪೂಜಾರ ಹಾಗೂ ಆರಂಭಿಕ ಆಟಗಾರ ಟಾಮ್ ಅಲ್ಸೋಪ್ ಸೆಂಚುರಿಸಿ ಸಿಡಿಸಿ ಮಿಂಚಿದ್ದರು. ಆರಂಭಿಕನಾಗಿ ಕಣಕ್ಕಿಳಿದ ಅಲ್ಸೋಪ್ 155 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 19 ಫೋರ್​ನೊಂದಿಗೆ 189 ರನ್ ಬಾರಿಸಿದರು. ಇನ್ನು ಚೇತೇಶ್ವರ ಪೂಜಾರ ಕೇವಲ 75 ಎಸೆತಗಳಲ್ಲಿ ಶತಕ ಬಾರಿಸಿ ಅಬ್ಬರಿಸಿದರು.

ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪೂಜಾರ 90 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 20 ಫೋರ್​ನೊಂದಿಗೆ 132 ರನ್​ ಚಚ್ಚಿದರು. ವಿಶೇಷ ಎಂದರೆ ಅಲ್ಸೋಪ್ ಹಾಗೂ ಪೂಜಾರಾ ಅವರ ಈ ಭರ್ಜರಿ ಶತಕಗಳ ನೆರವಿನಿಂದ ಸಸೆಕ್ಸ್ ತಂಡವು ನಿಗದಿತ 50 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 400 ರನ್​ ಕಲೆಹಾಕಿತು.

ಈ ಬೃಹತ್ ಮೊತ್ತವನ್ನು ಚೇಸ್ ಮಾಡಿದ ಮಿಡ್ಲ್​ಸೆಕ್ಸ್ ತಂಡದ ಪರ ಜೋ ಕ್ರಾಕ್ನೆಲ್ 71 ರನ್​ ಬಾರಿಸಿದರು. ಆದರೆ ಉಳಿದ ಬ್ಯಾಟ್ಸ್​ಮನ್​ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ವಿಫಲರಾಗಿದ್ದಾರೆ. ಪರಿಣಾಮ 243 ರನ್​ಗಳಿಗೆ ಮಿಡ್ಲ್​ಸೆಕ್ಸ್ ತಂಡವು ಸರ್ವಪತನ ಕಂಡಿತು. ಇದರೊಂದಿಗೆ 157 ರನ್​ಗಳ ಭರ್ಜರಿ ಜಯ ಸಾಧಿಸಿ ಸಸೆಕ್ಸ್ ತಂಡವು ರಾಯಲ್ ಲಂಡನ್​ ಕಪ್​ನಲ್ಲಿ ಸೆಮಿಫೈನಲ್​ಗೇರಿದೆ.

ಪೂಜಾರ ನಾಯಕನಾಟ:

ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಚೇತೇಶ್ವರ ಪೂಜಾರ ಸಸೆಕ್ಸ್ ತಂಡದ ಹಂಗಾಮಿ ನಾಯಕರಾಗಿ ಆಯ್ಕೆಯಾಗಿದ್ದರು. ಆದರೆ ನಾಯಕನಾಗುತ್ತಿದ್ದಂತೆ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಪೂಜಾರ ಇದೀಗ ಸಸೆಕ್ಸ್ ತಂಡದ ಬೆನ್ನೆಲುಬಾಗಿ ನಿಂತಿದ್ದಾರೆ. ಏಕೆಂದರೆ ಈ ಬಾರಿಯ ರಾಯಲ್ ಲಂಡನ್​ ಕಪ್​ನಲ್ಲಿ ಸಸೆಕ್ಸ್ ಪರ ಕೇವಲ 8 ಇನಿಂಗ್ಸ್​​ಗಳಿಂದ ಪೂಜಾರ ಒಟ್ಟು 614 ರನ್​ ಕಲೆಹಾಕಿದ್ದಾರೆ. ಈ ವೇಳೆ 3 ಸ್ಪೋಟಕ ಶತಕ ಬಾರಿಸಿರುವುದು ವಿಶೇಷ. ಅಂದರೆ ಸಸೆಕ್ಸ್ ತಂಡದ ಗೆಲುವಿನಲ್ಲಿ ಟೀಮ್ ಇಂಡಿಯಾ ಆಟಗಾರ ಪ್ರಮುಖ ಪಾತ್ರವಹಿಸುತ್ತಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!