AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಹಿಡಿದ ಧೋನಿ…3 ಶತಕಗಳೊಂದಿಗೆ 624 ಬಾರಿಸಿ ಮಿಂಚಿದ ಪೂಜಾರ..!

Cheteshwar Pujara: ವಿಶೇಷ ಎಂದರೆ 2014 ರ ಬಳಿಕ ಐಪಿಎಲ್​ನಲ್ಲಿ ಅವಕಾಶ ಪಡೆಯದಿದ್ದ ಚೇತೇಶ್ವರ ಪೂಜಾರ ಅವರನ್ನು ಐಪಿಎಲ್ 2021 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್​ಕೆ ತಂಡ ಖರೀದಿಸಿತ್ತು.

ಕೈ ಹಿಡಿದ ಧೋನಿ...3 ಶತಕಗಳೊಂದಿಗೆ 624 ಬಾರಿಸಿ ಮಿಂಚಿದ ಪೂಜಾರ..!
Cheteshwar Pujara-CSK
TV9 Web
| Edited By: |

Updated on: Sep 18, 2022 | 10:55 AM

Share

ಟೀಮ್ ಇಂಡಿಯಾದ (Team India) ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ (Cheteshwar Pujara) ಸೀಮಿತ ಓವರ್​ಗಳ ಪಂದ್ಯಗಳಲ್ಲಿ ಈ ಪಾಟಿ ಬ್ಯಾಟ್ ಬೀಸುತ್ತಾರೆ ಎಂಬುದು ಬಹುಶಃ ಕೌಂಟಿ ಕ್ರಿಕೆಟ್​ನಲ್ಲಿ ಕಾಣಿಸಿಕೊಳ್ಳುವ ತನಕ ಯಾರಿಗೂ ಕೂಡ ಗೊತ್ತಿರಲಿಲ್ಲ. ಏಕೆಂದರೆ ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಪೂಜಾರ ಕೌಂಟಿ ಚಾಂಪಿಯನ್​ಶಿಪ್​ನತ್ತ ಮುಖ ಮಾಡಿದ್ದರು. ಅದರಂತೆ ಸಸೆಕ್ಸ್ ತಂಡದ ಪರ ರಾಯಲ್ ಲಂಡನ್ ಒನ್​ ಡೇ ಕಪ್​ನಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ ತಮ್ಮ ಬ್ಯಾಟಿಂಗ್ ಶೈಲಿಯನ್ನೇ ಬದಲಿಸಿದ್ದರು. ಇಡೀ ಟೂರ್ನಿಯುದ್ದಕ್ಕೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಪೂಜಾರ ಸಸೆಕ್ಸ್‌ ಪರ 9 ಪಂದ್ಯಗಳಿಂದ ಕಲೆಹಾಕಿದ್ದು ಬರೋಬ್ಬರಿ 624 ರನ್​ಗಳು. ಇದರಲ್ಲಿ 3 ಅದ್ಭುತ ಶತಕಗಳು ಕೂಡ ಸೇರಿವೆ.

ಟೀಮ್ ಇಂಡಿಯಾ ಆಟಗಾರನ ಈ ಅಮೋಘ ಫಾರ್ಮ್ ಎಲ್ಲರನ್ನೂ ಅಚ್ಚರಿಗೊಳಿಸಿತು. ಏಕೆಂದರೆ ಟೆಸ್ಟ್ ಸ್ಪೆಷಲಿಸ್ಟ್ ಆಗಿದ್ದ ಪೂಜಾರ ಇಂಗ್ಲೆಂಡ್​ನಲ್ಲಿ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ್ದರು. ಬ್ಯಾಟಿಂಗ್ ಶೈಲಿಯಲ್ಲಿ ಇಂತಹದೊಂದು ಬದಲಾವಣೆಗೆ ಮುಖ್ಯ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಎಂಬ ವಿಚಾರವನ್ನು ಚೇತೇಶ್ವರ ಪೂಜಾರ ಬಹಿರಂಗಪಡಿಸಿದ್ದಾರೆ.

ಪಾಡ್‌ಕ್ಯಾಸ್ಟ್‌ ಒಂದರಲ್ಲಿ ಮಾತನಾಡಿದ ಚೇತೇಶ್ವರ ಪೂಜಾರ, ಖಂಡಿತವಾಗಿಯೂ ನನ್ನ ಬ್ಯಾಟಿಂಗ್ ಶೈಲಿ ಬದಲಾಗಿದೆ ಎಂಬುದರಲ್ಲಿ ಯಾವುದೇ ಅನುಮಾನಗಳಿಲ್ಲ. ಇಂಗ್ಲೆಂಡ್​ನ ಪಿಚ್ ಚೆನ್ನಾಗಿತ್ತು. ಸ್ವಲ್ಪ ಸಮತಟ್ಟಾಗಿದ್ದರಿಂದ ಅಂತಹ ಪಿಚ್‌ಗಳಲ್ಲಿ ಹೆಚ್ಚಿನ ಸ್ಟ್ರೈಕ್ ರೇಟ್‌ನೊಂದಿಗೆ ಸ್ಕೋರ್ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ನಾನು ಸದಾ ಶ್ರಮಿಸಿದ್ದೇನೆ ಎಂದು ಪೂಜಾರ ತಿಳಿಸಿದರು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಆಕ್ರಮಣಕಾರಿ ಬ್ಯಾಟಿಂಗ್ ಶೈಲಿ ಹೊಂದಲು ಮುಖ್ಯ ಕಾರಣ ಐಪಿಎಲ್​. ಏಕೆಂದರೆ ನಾನು 2021 ರಲ್ಲಿ ಐಪಿಎಲ್ ಪ್ರಶಸ್ತಿ ಗೆದ್ದಿದ್ದ ಸಿಎಸ್​ಕೆ ತಂಡದ ಭಾಗವಾಗಿದ್ದೆ. ನಾನು ಯಾವುದೇ ಪಂದ್ಯದಲ್ಲಿ ಆಡದಿದ್ದರೂ, ಅಭ್ಯಾಸದ ವೇಳೆ ಸಹ ಆಟಗಾರರ ತಯಾರಿಯನ್ನು ಗಮನಿಸುತ್ತಿದ್ದೆ. ಅಲ್ಲದೆ ಶಾರ್ಟ್ ಫಾರ್ಮಾಟ್​ನಲ್ಲಿ ಆಡಬೇಕಾದರೆ ಯಾವ ರೀತಿ ಬ್ಯಾಟ್ ಬೀಸಬೇಕು, ದೊಡ್ಡ ಮೊತ್ತಗಳಿಸಬೇಕು ಎಂಬುದನ್ನು ಈ ವೇಳೆ ಅರಿತುಕೊಂಡೆ. ಇದರಿಂದ ನನ್ನ ಬ್ಯಾಟಿಂಗ್ ಶೈಲಿಯನ್ನು ಬದಲಿಸಲು ಅನುಕೂಲವಾಯಿತು ಎಂದರು.

ಹಾಗೆಯೇ ರಾಯಲ್ ಲಂಡನ್ ಕಪ್ ವೇಳೆ ಕೋಚ್ ಗ್ರಾಂಟ್ ಫ್ಲವರ್ ನನಗೆ ಶಾಟ್​ಗಳ ಆಯ್ಕೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ಅವರ ಬಳಿಕ ಕೆಲವು ಶಾಟ್​ಗಳ ಬಗ್ಗೆ ಕೇಳಿಕೊಂಡಿದ್ದೆ. ಅವರು ನೀಡಿದ ಮಾರ್ಗದರ್ಶನದಂತೆ ನಾನು ಆಡುತ್ತಿದ್ದೆ. ಇದನ್ನು ನೋಡಿ ಕೋಚ್ ಬಂದು ನಾನು ಸೂಚಿಸಿದ್ದಂತೆ ಆಡುತ್ತಿದ್ದೀಯಾ ಎಂದು ತಿಳಿಸುತ್ತಿದ್ದರು. ಕೋಚ್​ನ ಈ ಮಾತಿನಿಂದ ಕೂಡ ನನ್ನ ಆತ್ಮವಿಶ್ವಾಸ ಹೆಚ್ಚಿತು ಎಂದು ಚೇತೇಶ್ವರ ಪೂಜಾರ ಹೇಳಿದರು.

ವಿಶೇಷ ಎಂದರೆ 2014 ರ ಬಳಿಕ ಐಪಿಎಲ್​ನಲ್ಲಿ ಅವಕಾಶ ಪಡೆಯದಿದ್ದ ಚೇತೇಶ್ವರ ಪೂಜಾರ ಅವರನ್ನು ಐಪಿಎಲ್ 2021 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್​ಕೆ ತಂಡ ಖರೀದಿಸಿತ್ತು. 50 ಲಕ್ಷಕ್ಕೆ ಸಿಎಸ್​ಕೆ ತಂಡದ ಪಾಲಾಗಿದ್ದ ಪೂಜಾರ ಆಯ್ಕೆ ಎಲ್ಲರಿಗೂ ಅಚ್ಚರಿಯಾಗಿತ್ತು. ಇದಾಗ್ಯೂ ಸಿಎಸ್​ಕೆ ಪರ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೀಗ ರಾಯಲ್ ಲಂಡನ್​ ಕಪ್​ನಲ್ಲಿ ಅಬ್ಬರಿಸುವ ಮೂಲಕ ಚೇತೇಶ್ವರ ಪೂಜಾರ ಸೀಮಿತ ಓವರ್​ ಕ್ರಿಕೆಟ್​ನಲ್ಲಿ ತಾನು ಕೂಡ ಬಿರುಸಿನ ಬ್ಯಾಟಿಂಗ್ ಮಾಡಬಲ್ಲೆ ಎಂಬುದನ್ನು ನಿರೂಪಿಸಿದ್ದಾರೆ.

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ