AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇತೇಶ್ವರ ಪೂಜಾರ ಅವರ ಭಾವ ಆತ್ಮಹತ್ಯೆ

Jeet Pabari - Cheteshwar Pujara: ಚೇತೇಶ್ವರ ಪೂಜಾರ ಅವರ ಭಾವ ಜೀತ್ ಪಬಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಈ ಆರೋಪ ಕೇಳಿ ಬಂದ ಒಂದು ವರ್ಷದ ಬಳಿಕ ಜೀತ್ ಪಬಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ರಾಜ್​ಕೋಟ್ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಚೇತೇಶ್ವರ ಪೂಜಾರ ಅವರ ಭಾವ ಆತ್ಮಹತ್ಯೆ
Jeet Pabari - Cheteshwar Pujara
ಝಾಹಿರ್ ಯೂಸುಫ್
|

Updated on: Nov 27, 2025 | 11:01 AM

Share

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಅವರ ಭಾವ ಜೀತ್ ಪಬಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ನವೆಂಬರ್ 26 ರಂದು ಪಬಾರಿ ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿತ್ತು. ಇದೀಗ ನಿಖರವಾಗಿ ಒಂದು ವರ್ಷದ ನಂತರ ಜೀತ್ ಪಬಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೀತ್ ಪಬಾರಿ ಬುಧವಾರ ರಾಜ್​ಕೋಟ್​ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡುವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಇದೀಗ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್ರೆ ಮಾಡುತ್ತಿದ್ದ ಪೂಜಾರ:

ಜೀತ್ ಪಬಾರಿ ಆತ್ಮಹತ್ಯೆ ಮಾಡಿಕೊಂಡ ಸಮಯದಲ್ಲಿ ಚೇತೇಶ್ವರ ಪೂಜಾರ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯದ ಕಾಮೆಂಟ್ರಿ ಮಾಡುತ್ತಿದ್ದರು. ಅಲ್ಲದೆ ಭಾವ ನಿಧನರಾಗಿರುವ ಸುದ್ದಿ ಬಂದ ಬೆನ್ನಲ್ಲೇ ರಾಜ್​ಕೋಟ್​ಗೆ ತೆರಳಿದ್ದರು.

ಜೀತ್​ ಮೇಲಿತ್ತು ಅತ್ಯಾಚಾರದ ಆರೋಪ:

ನವೆಂಬರ್ 2024 ರಲ್ಲಿ ಜೀತ್ ಪಬಾರಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಲಾಗಿತ್ತು. ಹೀಗೆ ದೂರು ದಾಖಲಿಸಿದ್ದು ಅವರು ಮೊದಲು ನಿಶ್ಚಿತಾರ್ಥ ಮಾಡಿಕೊಂಡಿದ್ದ ಮಹಿಳೆ. ರಾಜ್​ಕೋಟ್​ನ ನಿವಾಸಿಯಾಗಿರುವ ಈ ಮಹಿಳೆಯು ಜೀತ್ ಪಬಾರಿ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸೆಗಿದ್ದಾರೆ ಎಂದು ಆರೋಪಿಸಿದ್ದರು.

ನಮ್ಮ ನಿಶ್ಚಿತಾರ್ಥ ಆದ ಬಳಿಕ ಜೀತ್ ಹಲವಾರು ಬಾರಿ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು. ಆನಂತರ ಅವರು ಯಾವುದೇ ಕಾರಣವಿಲ್ಲದೆ ನಿಶ್ಚಿತಾರ್ಥವನ್ನು ಮುರಿದು ಬೇರೆ ಮದುವೆಯಾಗಿದ್ದಾರೆ. ಹೀಗಾಗಿ ನನಗೆ ನ್ಯಾಯ ಬೇಕೆಂದು ಮಹಿಳೆಯು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಇದನ್ನೂ ಓದಿ: WTC ಅಂಕ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಕೆಳಗಿಳಿದ ಟೀಮ್ ಇಂಡಿಯಾ

ಈ ಪ್ರಕರಣ ದಾಖಲಾದ ಬಳಿಕ ಜೀತ್ ಪಬಾರಿ ಖಿನ್ನತೆಗೆ ಒಳಗಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದೀಗ ಇದೇ ಕಾರಣದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!