AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tilak Varma: ತಿಲಕ್ ವರ್ಮಾ ಸಿಡಿಸಿದ ಹೆಲಿಕಾಫ್ಟರ್ ಶಾಟ್​ಗೆ ಸ್ತಬ್ಧವಾದ ಚಿನ್ನಸ್ವಾಮಿ ಸ್ಟೇಡಿಯಂ: ರೋಚಕ ವಿಡಿಯೋ ನೋಡಿ

RCB vs MI, IPL 2023: 16ನೇ ಓವರ್ ವರೆಗೂ ಆರ್​ಸಿಬಿ ಹಿಡಿತದಲ್ಲೇ ಇದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಅನ್ನು ಕಡಿಮ ಮೊತ್ತಕ್ಕೆ ಕಟ್ಟು ಹಾಕುವ ಪ್ಲಾನ್​ನಲ್ಲಿತ್ತು. ಆದರೆ, ಕೊನೆಯ ಮೂರು ಓವರ್​ಗಳಲ್ಲಿ ಆರ್​ಸಿಬಿ ಬೌಲರ್​ಗಳ ಬೆವರಿಳಿಸಿದ್ದು ತಿಲಕ್ ವರ್ಮಾ.

Tilak Varma: ತಿಲಕ್ ವರ್ಮಾ ಸಿಡಿಸಿದ ಹೆಲಿಕಾಫ್ಟರ್ ಶಾಟ್​ಗೆ ಸ್ತಬ್ಧವಾದ ಚಿನ್ನಸ್ವಾಮಿ ಸ್ಟೇಡಿಯಂ: ರೋಚಕ ವಿಡಿಯೋ ನೋಡಿ
Tilak Varma helicopter shot
Vinay Bhat
|

Updated on: Apr 03, 2023 | 9:30 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಮುಂಬೈ ಇಂಡಿಯನ್ಸ್ ತಂಡದ ಸೋಲಿನ ಆರಂಭ ಈ ಬಾರಿ ಕೂಡ ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಮುಂಬೈ (RCB vs MI) 8 ವಿಕೆಟ್​ಗಳ ಸೋಲು ಕಂಡಿತು. ಈ ಮೂಲಕ ಕಳೆದ 11 ಸೀಸನ್​ಗಳಲ್ಲಿ ತಾನು ಆಡಿದ ಎಲ್ಲ ಮೊದಲ ಪಂದ್ಯದಲ್ಲಿ ಸೋತ ಕೆಟ್ಟ ದಾಖಲೆ ಬರೆಯಿತು. 50 ರನ್​ಗು ಮೊದಲೇ ಪ್ರಮುಖ 4 ವಿಕೆಟ್ ಕಳೆದುಕೊಂಡ ರೋಹಿತ್ ಶರ್ಮಾ ಪಡೆಯ ಮೊತ್ತ 100 ದಾಟುವುದು ಕಷ್ಟವಾಗಿತ್ತು. ಆದರೆ, 20ನೇ ಓವರ್ ವರೆಗೂ ಟೊಂಕ ಕಟ್ಟಿ ಕ್ರೀಸ್​ನಲ್ಲಿ ನಿಂತ ಯುವ ಬ್ಯಾಟರ್ ತಿಲಕ್ ವರ್ಮಾ (Tilak Varma) 171 ರನ್​ಗಳ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. 46 ಎಸೆತಗಳಲ್ಲಿ 9 ಫೋರ್ ಹಾಗೂ 4 ಸಿಕ್ಸರ್​ನೊಂದಿಗೆ ಇವರು ಅಜೇಯ 84 ರನ್ ಸಿಡಿಸಿದರು.

16ನೇ ಓವರ್ ವರೆಗೂ ಆರ್​ಸಿಬಿ ಹಿಡಿತದಲ್ಲೇ ಇದ್ದ ಪಂದ್ಯದಲ್ಲಿ ಮುಂಬೈ ಅನ್ನು ಕಡಿಮ ಮೊತ್ತಕ್ಕೆ ಕಟ್ಟು ಹಾಕುವ ಪ್ಲಾನ್​ನಲ್ಲಿತ್ತು. ಆದರೆ, ಕೊನೆಯ ಮೂರು ಓವರ್​ಗಳಲ್ಲಿ ಆರ್​ಸಿಬಿ ಬೌಲರ್​ಗಳ ಬೆವರಿಳಿಸಿದ್ದು ತಿಲಕ್ ವರ್ಮಾ. ಮನಬಂದಂತೆ ಬ್ಯಾಟ್ ಬೀಸಿದ ಇವರು ಫೋರ್-ಸಿಕ್ಸರ್​ಗಳ ಮಳೆ ಸುರಿಸಿದರು. ಅದರಲ್ಲೂ ಕೊನೆಯ 20ನೇ ಓವರ್​ನ ಹರ್ಷಲ್ ಪಟೇಲ್ ಬೌಲಿಂಗ್ ಅನ್ನು ಧೂಳಿಪಟ ಮಾಡಿಬಿಟ್ಟರು.

ಇದನ್ನೂ ಓದಿ
Image
Virat Kohli RCB: ಮುಂಬೈ ಸೋತ ತಕ್ಷಣ ವಿರಾಟ್ ಕೊಹ್ಲಿ ಬಳಿ ಬಂದು ರೋಹಿತ್ ಶರ್ಮಾ ಮಾಡಿದ್ದೇನು ನೋಡಿ
Image
Faf Duplessis: ಪಂದ್ಯ ಮುಗಿದ ಬಳಿಕ ಆರ್​ಸಿಬಿ ಗೆಲುವಿನ ಬಗ್ಗೆ ನಾಯಕ ಡುಪ್ಲೆಸಿಸ್ ಏನು ಹೇಳಿದ್ರು ನೋಡಿ
Image
Virat Kohli Record: ಮೊದಲ ಪಂದ್ಯದಲ್ಲೇ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ
Image
IPL 2023: ಕ್ಯಾಚ್ ಹಿಡಿದು ವಿಶ್ವ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

IPL 2023: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸಂಜು ಸ್ಯಾಮ್ಸನ್

ಅಂತಿಮ ಓವರ್​ನಲ್ಲಿ ಮುಂಬೈ 21 ರನ್ ಕಲೆಹಾಕಿತು. ತಿಲಕ್ ಎರಡು ಸಿಕ್ಸರ್ ಹಾಗೂ ಒಂದು ಬೌಂಡರಿ ಚಚ್ಚಿದರು. ಅದರಲ್ಲೂ ಕಾಲಿನ ಬಳಿ ಬಿದ್ದ 6ನೇ ಎಸೆತವನ್ನು ಹೆಲಿಕಾಫ್ಟರ್ ಶಾಟ್ ಮೂಲಕ ಸಿಕ್ಸರ್ ಸಿಡಿಸಿದ್ದು ಅದ್ಭುತವಾಗಿತ್ತು. ಇವರ ಈ ಹೊಡೆತ ಕಂಡು ಒಂದು ಕ್ಷಣ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಶಾಕ್ ಆದರು. ಇಲ್ಲಿದೆ ನೋಡಿ ಆ ವಿಡಿಯೋ.

ತಿಲಕ್ ವರ್ಮಾ ಅವರ ಈ ಮನಮೋಹಕ ಆಟದ ನೆರವಿನಿಂದಲೇ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ತಿಲಕ್ ಅವರ ಆಟದ ಬಗ್ಗೆ ಆರ್​ಸಿಬಿ ನಾಯಕ ಫಾಪ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕೂಡ ಹಾಡಿಹೊಗಳಿದ್ದಾರೆ. ”ಕೊನೆಯ 2-3 ಓವರ್​ಗಳಲ್ಲಿ ನಾವು ಇನ್ನೂ ಚೆನ್ನಾಗಿ ಬೌಲಿಂಗ್ ಮಾಡಬಹುದಿತ್ತು. ತಿಲಕ್ ವರ್ಮಾ ಈ ಸಂದರ್ಭ ಚೆನ್ನಾಗಿ ಆಡಿದರು,” ಎಂದು ಫಾಫ್ ಹೇಳಿದ್ದಾರೆ. ಅಂತೆಯೆ ಕೊಹ್ಲಿ ಅವರು ಮಾತನಾಡುತ್ತಾ, ”ಮೊದಲು 17 ಓವರ್ ನಮ್ಮ ಬೌಲಿಂಗ್ ಅದ್ಭುತವಾಗಿತ್ತು. ಕೊನೆಯ 3 ಓವರ್​ನ ಕ್ರೆಡಿಟ್ ತಿಲಕ್ ವರ್ಮಾಗೆ ಸಲ್ಲಬೇಕು,” ಎಂದು ಹೇಳಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕೂಡ ತಿಲಕ್ ವರ್ಮಾ ಆಟದ ಬಗ್ಗೆ ಮಾತನಾಡಿದ್ದು, ”ಮೊದಲ ಆರು ಓವರ್​ಗಳಲ್ಲಿ ನಮ್ಮ ಆರಂಭ ಅದ್ಭುತ ಎಂಬಂತಿರಲಿಲ್ಲ. ಆದರೆ, ನಂತರದಲ್ಲಿ ತಿಲಕ್ ರ್ಮಾ ಮತ್ತು ಕೆಲ ಬ್ಯಾಟರ್​ಗಳು ಸಾಕಷ್ಟು ಪ್ರಯತ್ನ ಪಟ್ಟರು. ಬೌಲಿಂಗ್​ನಲ್ಲಿ ನಾವು ಅಂದುಕೊಂಡ ಯೋಜನೆಯಂತೆ ಸಾಗಲಿಲ್ಲ. ಈ ಪಿಚ್ ಬ್ಯಾಟರ್​ಗಳಿಗೆ ಹೆಚ್ಚು ಸಹಕಾರಿ ನೀಡಿತು. ತಿಲಕ್ ವರ್ಮಾ ಪಾಸಿಟಿವ್ ಪ್ಲೇಯರ್, ಪ್ರತಿಭಾವಂತ ಆಟಗಾರ. ಅವರು ಹೊಡೆದ ಕೆಲವು ಶಾಟ್ ಅದ್ಭುತವಾಗಿತ್ತು. ನಾವು ಸವಾಲಿನ ಮೊತ್ತ ಕಲೆಹಾಕಲು ನೆರವಾದ ತಿಲಕ್​ಗೆ ಹ್ಯಾಟ್ಸ್​ ಹಾಫ್,” ಎಂದು ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ