AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ, ಗಿಲ್, ಸೂರ್ಯ​…ರೋಹಿತ್ ಶರ್ಮಾಗೆ ಯಾರಲ್ಲಿ ಏನು ಇಷ್ಟ? ಇಲ್ಲಿದೆ ಉತ್ತರ

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಕೊಹ್ಲಿ, ಗಿಲ್, ಸೂರ್ಯ​...ರೋಹಿತ್ ಶರ್ಮಾಗೆ ಯಾರಲ್ಲಿ ಏನು ಇಷ್ಟ? ಇಲ್ಲಿದೆ ಉತ್ತರ
Rohit Sharma
TV9 Web
| Edited By: |

Updated on: Oct 01, 2023 | 3:40 PM

Share

ಒಂದೆಡೆ ಏಕದಿನ ವಿಶ್ವಕಪ್​ ಕಾವೇರುತ್ತಿದ್ದರೆ, ಮತ್ತೊಂದೆಡೆ ಟೀಮ್ ಇಂಡಿಯಾ ಮೇಲಿನ ನಿರೀಕ್ಷೆಗಳು ಮುಗಿಲೆತ್ತರಕ್ಕೇರುತ್ತಿದೆ. ಇದಕ್ಕೆ ಮುಖ್ಯ ಕಾರಣ ಈ ಬಾರಿ ಭಾರತದಲ್ಲಿ ವಿಶ್ವಕಪ್ ನಡೆಯುತ್ತಿರುವುದು. ಅದರ ಜೊತೆಗೆ ಯಶಸ್ವಿ ನಾಯಕ ಎನಿಸಿಕೊಂಡಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವುದು.

ಈ ನಿರೀಕ್ಷೆಗಳನ್ನು ದುಪಟ್ಟುಗೊಳಿಸುವಂತೆ ಬಲಿಷ್ಠ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಅತಿರಥ ಮಹಾರಥರಂತಹ ಬ್ಯಾಟರ್​ಗಳು ಇರುವುದು ರೋಹಿತ್ ಶರ್ಮಾ ಅವರ ವಿಶ್ವಾಸವನ್ನು ಹೆಚ್ಚಿಸಿದೆ.

ಈ ಬ್ಯಾಟರ್​ಗಳಲ್ಲಿ ಯಾರು ಬೆಸ್ಟ್ ಪ್ರಶ್ನೆಗೆ ರೋಹಿತ್ ಶರ್ಮಾ ವಿಭಿನ್ನ ಉತ್ತರಗಳನ್ನು ನೀಡಿದ್ದಾರೆ. ಅದರಲ್ಲೂ ಒಬ್ಬೊಬ್ಬರಲ್ಲಿ ಒಂದೊಂದು ಹೊಡೆತಗಳನ್ನು ಇಷ್ಟಪಡುತ್ತೇನೆ ಎಂದಿದ್ದಾರೆ ಹಿಟ್​ಮ್ಯಾನ್. ಹಾಗೆಯೇ ಕ್ರಿಕೆಟ್​ ಅಂಗಳದಲ್ಲಿ ತಾನು ಎದುರಿಸಿದ ಕಠಿಣ ಬೌಲರ್ ಯಾರು ಎಂಬುದನ್ನೂ ಕೂಡ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ.

ಅದರಂತೆ ರೋಹಿತ್ ಶರ್ಮಾರನ್ನು ಕಾಡಿದ ಬೌಲರ್​ ಯಾರು? ಯಾವ ಬ್ಯಾಟರ್​ನ ಯಾವ ಶಾಟ್ ಇಷ್ಟ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ…

  1. ವಿರಾಟ್ ಕೊಹ್ಲಿ: ಅತ್ಯುತ್ತಮ ಕವರ್ ಡ್ರೈವ್
  2. ಸಚಿನ್ ತೆಂಡೂಲ್ಕರ್: ಅತ್ಯುತ್ತಮ ಸ್ಟ್ರೈಟ್ ಡ್ರೈವ್
  3. ಶುಭ್​ಮನ್ ಗಿಲ್: ಅದ್ಭುತ ಪ್ರತಿಭೆ
  4. ರಿಕಿ ಪಾಂಟಿಂಗ್: ಅತ್ಯುತ್ತಮ ಪುಲ್ ಶಾಟ್
  5. ಸೂರ್ಯಕುಮಾರ್ ಯಾದವ್: ಅತ್ಯುತ್ತಮ ಸ್ಕೂಪ್
  6. ಡೇಲ್ ಸ್ಟೈನ್: ಎದುರಿಸಿದ ಕಠಿಣ ಬೌಲರ್.

ಏಕದಿನ ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಆರ್​. ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಏಕದಿನ ವಿಶ್ವಕಪ್​ನ ಅತ್ಯಂತ ಯಶಸ್ವಿ ನಾಯಕ ಯಾರು ಗೊತ್ತಾ?

ವಿಶ್ವಕಪ್​ಗೆ ದಿನಗಣನೆ:

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ