AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ, ಗಿಲ್, ಸೂರ್ಯ​…ರೋಹಿತ್ ಶರ್ಮಾಗೆ ಯಾರಲ್ಲಿ ಏನು ಇಷ್ಟ? ಇಲ್ಲಿದೆ ಉತ್ತರ

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಕೊಹ್ಲಿ, ಗಿಲ್, ಸೂರ್ಯ​...ರೋಹಿತ್ ಶರ್ಮಾಗೆ ಯಾರಲ್ಲಿ ಏನು ಇಷ್ಟ? ಇಲ್ಲಿದೆ ಉತ್ತರ
Rohit Sharma
TV9 Web
| Edited By: |

Updated on: Oct 01, 2023 | 3:40 PM

Share

ಒಂದೆಡೆ ಏಕದಿನ ವಿಶ್ವಕಪ್​ ಕಾವೇರುತ್ತಿದ್ದರೆ, ಮತ್ತೊಂದೆಡೆ ಟೀಮ್ ಇಂಡಿಯಾ ಮೇಲಿನ ನಿರೀಕ್ಷೆಗಳು ಮುಗಿಲೆತ್ತರಕ್ಕೇರುತ್ತಿದೆ. ಇದಕ್ಕೆ ಮುಖ್ಯ ಕಾರಣ ಈ ಬಾರಿ ಭಾರತದಲ್ಲಿ ವಿಶ್ವಕಪ್ ನಡೆಯುತ್ತಿರುವುದು. ಅದರ ಜೊತೆಗೆ ಯಶಸ್ವಿ ನಾಯಕ ಎನಿಸಿಕೊಂಡಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವುದು.

ಈ ನಿರೀಕ್ಷೆಗಳನ್ನು ದುಪಟ್ಟುಗೊಳಿಸುವಂತೆ ಬಲಿಷ್ಠ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಅತಿರಥ ಮಹಾರಥರಂತಹ ಬ್ಯಾಟರ್​ಗಳು ಇರುವುದು ರೋಹಿತ್ ಶರ್ಮಾ ಅವರ ವಿಶ್ವಾಸವನ್ನು ಹೆಚ್ಚಿಸಿದೆ.

ಈ ಬ್ಯಾಟರ್​ಗಳಲ್ಲಿ ಯಾರು ಬೆಸ್ಟ್ ಪ್ರಶ್ನೆಗೆ ರೋಹಿತ್ ಶರ್ಮಾ ವಿಭಿನ್ನ ಉತ್ತರಗಳನ್ನು ನೀಡಿದ್ದಾರೆ. ಅದರಲ್ಲೂ ಒಬ್ಬೊಬ್ಬರಲ್ಲಿ ಒಂದೊಂದು ಹೊಡೆತಗಳನ್ನು ಇಷ್ಟಪಡುತ್ತೇನೆ ಎಂದಿದ್ದಾರೆ ಹಿಟ್​ಮ್ಯಾನ್. ಹಾಗೆಯೇ ಕ್ರಿಕೆಟ್​ ಅಂಗಳದಲ್ಲಿ ತಾನು ಎದುರಿಸಿದ ಕಠಿಣ ಬೌಲರ್ ಯಾರು ಎಂಬುದನ್ನೂ ಕೂಡ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ.

ಅದರಂತೆ ರೋಹಿತ್ ಶರ್ಮಾರನ್ನು ಕಾಡಿದ ಬೌಲರ್​ ಯಾರು? ಯಾವ ಬ್ಯಾಟರ್​ನ ಯಾವ ಶಾಟ್ ಇಷ್ಟ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ…

  1. ವಿರಾಟ್ ಕೊಹ್ಲಿ: ಅತ್ಯುತ್ತಮ ಕವರ್ ಡ್ರೈವ್
  2. ಸಚಿನ್ ತೆಂಡೂಲ್ಕರ್: ಅತ್ಯುತ್ತಮ ಸ್ಟ್ರೈಟ್ ಡ್ರೈವ್
  3. ಶುಭ್​ಮನ್ ಗಿಲ್: ಅದ್ಭುತ ಪ್ರತಿಭೆ
  4. ರಿಕಿ ಪಾಂಟಿಂಗ್: ಅತ್ಯುತ್ತಮ ಪುಲ್ ಶಾಟ್
  5. ಸೂರ್ಯಕುಮಾರ್ ಯಾದವ್: ಅತ್ಯುತ್ತಮ ಸ್ಕೂಪ್
  6. ಡೇಲ್ ಸ್ಟೈನ್: ಎದುರಿಸಿದ ಕಠಿಣ ಬೌಲರ್.

ಏಕದಿನ ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಆರ್​. ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಏಕದಿನ ವಿಶ್ವಕಪ್​ನ ಅತ್ಯಂತ ಯಶಸ್ವಿ ನಾಯಕ ಯಾರು ಗೊತ್ತಾ?

ವಿಶ್ವಕಪ್​ಗೆ ದಿನಗಣನೆ:

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!