AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ಗೆ ಬಿಗ್ ಶಾಕ್; ಗಾಯದಿಂದ ಐದನೇ ಟೆಸ್ಟ್​ನಿಂದ ಹೊರ ಹೋದ ಖ್ಯಾತ ಬೌಲರ್

ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲಿ ಕ್ರಿಸ್ ವೋಕ್ಸ್ ಗಂಭೀರ ಗಾಯಗೊಂಡಿದ್ದಾರೆ. ಬೌಂಡರಿ ತಡೆಯುವಾಗ ಗಾಯಗೊಂಡ ಅವರು ಪಂದ್ಯದಿಂದ ಹೊರಗುಳಿದಿದ್ದಾರೆ. ಇದರಿಂದ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಬೆನ್ ಸ್ಟೋಕ್ಸ್ ಮತ್ತು ಜೋಫ್ರಾ ಆರ್ಚರ್ ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ತಂಡ ಈಗ ಸಂಕಷ್ಟದಲ್ಲಿದೆ.

ಇಂಗ್ಲೆಂಡ್​ಗೆ ಬಿಗ್ ಶಾಕ್; ಗಾಯದಿಂದ ಐದನೇ ಟೆಸ್ಟ್​ನಿಂದ ಹೊರ ಹೋದ ಖ್ಯಾತ ಬೌಲರ್
ಕ್ರಿಸ್ ವೋಕ್ಸ್
ರಾಜೇಶ್ ದುಗ್ಗುಮನೆ
|

Updated on: Aug 01, 2025 | 12:42 PM

Share

ಇಂಗ್ಲೆಂಡ್ ಹಾಗೂ ಭಾರತದ ನಡುವಿನ ಐದನೇ ಟೆಸ್ಟ್ ಪಂದ್ಯದ ಒಂದು ದಿನ ಪೂರ್ಣಗೊಂಡಿದೆ. ಆಗಲೇ ಇಂಗ್ಲೆಂಡ್​ಗೆ ಒಂದು ದೊಡ್ಡ ಶಾಕ್ ಎದುರಾಗಿದೆ. ಪರಿಣಾಮಕಾರಿ ಬೌಲರ್ ಎನಿಸಿಕೊಂಡಿದ್ದ ಕ್ರಿಸ್ ವೋಕ್ಸ್ (Chris Woakes) ಅವರು ಗಾಯದ ಕಾರಣದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ. ಮೊದಲ ದಿನದ ಮ್ಯಾಚ್​ನಲ್ಲಿ ಕೆಎಲ್ ರಾಹುಲ್ ಅವರ ವಿಕೆಟ್ ಕಿತ್ತು ತಂಡಕ್ಕೆ ಆಸರೆ ಆಗಿದ್ದರು.

ಗುರುವಾರ ನಡೆದ ಪಂದ್ಯದಲ್ಲಿ ಬೌಂಡರಿಗೆ ಹೋಗುತ್ತಿದ್ದ ಬಾಲ್​ನ ತಡೆಯಲು ಕ್ರಿಸ್ ವೋಕ್ಸ್ ಹೋಗಿದ್ದಾರೆ. ಆದರೆ, ಈ ವೇಳೆ ಅವರ ಕೈಗೆ ಗಾಯ ಆಗಿದೆ. ಈ ಗಾಯ ತುಂಬಾನೇ ಗಂಭೀರ ಸ್ವರೂಪ ಪಡೆದಿದ್ದು, ಅವರು ಈ ಪಂದ್ಯದಿಂದಲೇ ಹೊರಗೆ ಇರಬೇಕಾದ ಪರಿಸ್ಥಿತಿ ಬಂದಿದೆ.

ಕ್ರಿಸ್ ವೋಕ್ಸ್ ಗಾಯಗೊಂಡ ಸಂದರ್ಭದಲ್ಲಿ ತಕ್ಷಣ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಆದರೆ, ನೋವು ಅತಿಯಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈಗ ಇಂಗ್ಲೆಂಡ್ ತಂಡ ಅವರಿಂದ ಬೌಲ್ ಮಾಡಿಸಲು ಸಾಧ್ಯವಿಲ್ಲ ಎಂದು ನಿರ್ಧರಿಸಿದೆ ಎಂದು ವರದಿ ಆಗಿದೆ.

ಕ್ರಿಸ್ ವೋಕ್ಸ್ ಅವರು ಮೊದಲ ದಿನ 14 ಓವರ್​ಗಳನ್ನು ಹಾಕಿದ್ದಾರೆ. ಅವರ ಓವರ್ ಪರಿಣಾಮಕಾರಿ ಆಗಿತ್ತು. ಒಂದು ಮೇಡನ್, ಒಂದು ವಿಕೆಟ್ ಪಡೆದಿದ್ದು ಅಲ್ಲದೆ, 3.3 ಎಕಾನಮಿಯಲ್ಲಿ ಅವರು ಬೌಲಿಂಗ್ ಮಾಡಿದ್ದರು. ಈಗ ಅವರು ಟೆಸ್ಟ್​ನಿಂದ ಹೊರಗಿಳಿದರೆ ತಂಡಕ್ಕೆ ದೊಡ್ಡ ಸಮಸ್ಯೆ ಆಗಲಿದೆ.

ಸದ್ಯ ಟೀಂ ಇಂಡಿಯಾ 204ರನ್​​ಗೆ 6 ವಿಕೆಟ್​ಗನ್ನು ಕಳೆದುಕೊಂಡಿದೆ. ಕನ್ನಡಿಗ ಕರುಣ್ ನಾಯರ್ ಅವರು (52 ರನ್) ಹಾಗೂ ವಾಷಿಂಗ್ಟನ್ (19) ಆಡುತ್ತಿದ್ದಾರೆ. ಟೀಂ ಇಂಡಿಯಾ ಸದ್ಯ ಸಂಕಷ್ಟದಲ್ಲಿ ಇದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಯಾವ ರೀತಿಯಲ್ಲಿ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇಂಗ್ಲೆಂಡ್​ಗೆ ಸಂಕಷ್ಟ

ಈಗಾಗಲೇ ಕ್ಯಾಪ್ಟನ್ ಹಾಗೂ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ಅವರು ಇಂಜೂರಿ ಕಾರಣದಿಂದ ಪಂದ್ಯದಿಂದ ಹೊರ ಉಳಿದಿದ್ದಾರೆ. ಅವರಿಗೆ ಭುಜದ ಇಂಜೂರಿ ಆಗಿದೆ. ಇನ್ನು, ಬೌಲರ್ ಜೋಫ್ರಾ ಆರ್ಚರ್​ಗೆ ವಿಶ್ರಾಂತಿ ನೀಡಲಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ