AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CK Nayudu Trophy: 27 ಫೋರ್, 1 ಸಿಕ್ಸ್: ತ್ರಿಶತಕ ಸಿಡಿಸಿ ಮಿಂಚಿದ ವಿ. ಜಡೇಜಾ

CK Nayudu Trophy: ವಿಶೇಷ ಎಂದರೆ ಇದು ವಿಶ್ವರಾಜ್‌ಸಿನ್ಹ ಜಡೇಜಾ ಅವರ ಕಂಬ್ಯಾಕ್ ಪಂದ್ಯ. ಅಂದರೆ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಯುಪಿ ವಿರುದ್ಧ ಕೊನೆಯ ಪಂದ್ಯವನ್ನು ಆಡಿದ್ದರು.

CK Nayudu Trophy: 27 ಫೋರ್, 1 ಸಿಕ್ಸ್: ತ್ರಿಶತಕ ಸಿಡಿಸಿ ಮಿಂಚಿದ ವಿ. ಜಡೇಜಾ
Vishvarajsinh Jadeja
TV9 Web
| Edited By: |

Updated on: Jan 23, 2023 | 6:30 PM

Share

CK Nayudu Trophy 2o23: ಸಿಕೆ ನಾಯ್ಡು ಟೂರ್ನಿಯಲ್ಲಿ ಸೌರಾಷ್ಟ್ರ ತಂಡದ ನಾಯಕ ವಿಶ್ವರಾಜ್‌ಸಿನ್ಹ ಜಡೇಜಾ ಭರ್ಜರಿ ತ್ರಿಶತಕ ಸಿಡಿಸಿ ಮಿಂಚಿದ್ದಾರೆ. 25 ವರ್ಷದೊಳಗಿನವರು ಈ ಪಂದ್ಯದಲ್ಲಿ ಸೌರಾಷ್ಟ್ರ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ಸೌರಾಷ್ಟ್ರ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 79 ರನ್​ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಸೌರಾಷ್ಟ್ರ ತಂಡಕ್ಕೆ ನಾಯಕ ಆಸರೆಯಾದರು. ಗಜ್ಜರ್ ಸಮರ್ ಜೊತೆಗೂಡಿ ಇನಿಂಗ್ಸ್​ ಕಟ್ಟಿದ್ದ ವಿಶ್ವರಾಜ್‌ಸಿನ್ಹ ಜಡೇಜಾ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಜಡೇಜಾ ತಮ್ಮ ಅದ್ಭುತ ಇನ್ನಿಂಗ್ಸ್‌ನಲ್ಲಿ 27 ಬೌಂಡರಿ ಮತ್ತು ಒಂದು ಸಿಕ್ಸರ್​ನೊಂದಿಗೆ ತ್ರಿಶತಕ ಪೂರೈಸಿದರು. ಅಲ್ಲದೆ ಮೊದಲ ಇನಿಂಗ್ಸ್​ನಲ್ಲಿ ತಂಡದ ಮೊತ್ತವನ್ನು 8 ವಿಕೆಟ್ ನಷ್ಟಕ್ಕೆ 550 ಕ್ಕೆ ತಲುಪಿಸಿ ಡಿಕ್ಲೇರ್ ಘೋಷಿಸಿದರು.

ವಿಶೇಷ ಎಂದರೆ ಇದು ವಿಶ್ವರಾಜ್‌ಸಿನ್ಹ ಜಡೇಜಾ ಅವರ ಕಂಬ್ಯಾಕ್ ಪಂದ್ಯ. ಅಂದರೆ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಯುಪಿ ವಿರುದ್ಧ ಕೊನೆಯ ಪಂದ್ಯವನ್ನು ಆಡಿದ್ದರು. 2018 ರಲ್ಲಿ ರಣಜಿ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಯುವ ಆಟಗಾರ ಇದೀಗ ಸಿಕೆ ನಾಯ್ಡು ಟೂರ್ನಿಯಲ್ಲಿ ಅಬ್ಬರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ
Image
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
Image
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Image
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ವಿಶ್ವರಾಜ್‌ಸಿನ್ಹ ಜಡೇಜಾ ಇದುವರೆಗೆ 12 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಒಟ್ಟು 671 ರನ್ ಕಲೆಹಾಕಿದ್ದಾರೆ. ಇದಕ್ಕೂ ಮುನ್ನ ಅಜೇಯ 105 ರನ್ ಗಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿತ್ತು. ಅಲ್ಲದೆ ತಮ್ಮ ವೃತ್ತಿಜೀವನದಲ್ಲಿ 1 ಶತಕ ಮತ್ತು 5 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 20 ಲಿಸ್ಟ್ ಎ ಪಂದ್ಯಗಳಲ್ಲಿ 499 ರನ್ ಗಳಿಸಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲೂ ಜಡೇಜಾ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಸಿಕೆ ನಾಯ್ಡು ಟೂರ್ನಿಯ ಮೂಲಕ ಮತ್ತೆ ರಣಜಿ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ ವಿಶ್ವರಾಜ್‌ಸಿನ್ಹ ಜಡೇಜಾ.

Follow Us
TV9 Web
TV9 Web

TV9 Kannada

Read More
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ