AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೊಲಂಬೊ ಟೆಸ್ಟ್; ಮಳೆಯಿಂದ ಆಟ ಸ್ಥಗಿತ, ಶತಕದ ಸನಿದಲ್ಲಿ ಜುರೇಲ್

India Dominates Day 2 of Colombo Test: ಕೊಲಂಬೊ ಟೆಸ್ಟ್‌ನ ಎರಡನೇ ದಿನ ಭಾರತ ಉತ್ತಮ ಪ್ರದರ್ಶನ ನೀಡಿದೆ. ಪಂತ್ ಮತ್ತು ಜುರೇಲ್ ಶತಕದ ಜೊತೆಯಾಟ ನಿರ್ಮಿಸಿ ತಂಡವನ್ನು 475/8ಕ್ಕೆ ಕೊಂಡೊಯ್ದರು. ಪಂತ್ ಅರ್ಧಶತಕ ಗಳಿಸಿದರೆ, ಜುರೇಲ್ ಶತಕದ ಅಂಚಿನಲ್ಲಿದ್ದಾರೆ. ದುರದೃಷ್ಟವಶಾತ್, ಮಳೆಯಿಂದಾಗಿ ಆಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಭಾರತದ ಬ್ಯಾಟಿಂಗ್ ಪ್ರಾಬಲ್ಯ ಮುಂದುವರೆಯಿತು.

IND vs SL: ಕೊಲಂಬೊ ಟೆಸ್ಟ್; ಮಳೆಯಿಂದ ಆಟ ಸ್ಥಗಿತ, ಶತಕದ ಸನಿದಲ್ಲಿ ಜುರೇಲ್
Ind Vs Sl
ಪೃಥ್ವಿಶಂಕರ
|

Updated on:Aug 24, 2026 | 3:06 PM

Share

ಕೊಲಂಬೊದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ (Team India) ಎರಡನೇ ದಿನವೂ ಅಮೋಘ ಪ್ರದರ್ಶನ ನೀಡಿದೆ. ಮೊದಲ ದಿನದಂದು 5 ವಿಕೆಟ್‌ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದ್ದ ಟೀಂ ಇಂಡಿಯಾ ಎರಡನೇ ದಿನದಂದು ಇಲ್ಲಿಂದ ತನ್ನ ಇನ್ನಿಂಗ್ಸ್ ಮುಂದುವರೆಸಿತು. ಮೊದಲ ಸೆಷನ್​ ಆರಂಭದಲ್ಲೇ ವಿಕೆಟ್ ಪತನವಾದರೂ ಆ ಬಳಿಕ ಜೊತೆಯಾದ ಪಂತ್ (Rishabh Pant) ಹಾಗೂ ಜುರೇಲ್ (Dhruv Jurel) ಶತಕದ ಜೊತೆಯಾಟ ನಿರ್ಮಿಸಿದರು. ಹೀಗಾಗಿ ತಂಡದ ಮೊತ್ತ 400 ರನ್​ಗಳ ಗಡಿ ದಾಟಿತು. ಪಂತ್ ಅರ್ಧಶತಕ ಬಾರಿಸಿ ವಿಕೆಟ್ ಒಪ್ಪಿಸಿದರೆ, ಜುರೇಲ್ ಮಾತ್ರ ಶತಕದ ಸಮೀಪಕ್ಕೆ ಬಂದಿದ್ದಾರೆ. ಆದರೆ ಜುರೇಲ್ ಶತಕಕ್ಕೆ ಮಳೆ ಅಡ್ಡಿಪಡಿಸಿದೆ. ಹೀಗಾಗಿ ಆಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆಯಿಂದ ಆಟ ನಿಂತಾಗ ಟೀಂ ಇಂಡಿಯಾ 8 ವಿಕೆಟ್‌ಗಳನ್ನು ಕಳೆದುಕೊಂಡು 475 ರನ್ ಕಲೆಹಾಕಿದೆ.

ಪಂತ್- ಜುರೇಲ್ ಜೊತೆಯಾಟ

ಎರಡನೇ ದಿನದಾಟದ ಮೊದಲ ಸೆಷನ್​ನ ಆರಂಭದಲ್ಲೇ ಯುವ ಆಟಗಾರ ಸರಾಂಶ್ ಜೈನ್ 6 ರನ್​ಗಳಿಗೆ ಔಟಾದರು. ಹೀಗಾಗಿ ಗಾಯದಿಂದಾಗಿ ಮೊದಲ ದಿನ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ್ದ ರಿಷಭ್ ಪಂತ್ ಬ್ಯಾಟಿಂಗ್​ಗೆ ಬಂದರು. ಪಂತ್​ಗೆ ಸಾಥ್ ನೀಡಿದ ಜುರೇಲ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರು ಅರ್ಧಶತಕ ಬಾರಿಸುವುದರೊಂದಿಗೆ ತಂಡವನ್ನು 400 ರನ್​ಗಳ ಗಡಿ ದಾಟಿಸಿದರು. ಹೀಗಾಗಿ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 6 ವಿಕೆಟ್‌ ಕಳೆದುಕೊಂಡು 419 ರನ್ ಕಲೆಹಾಕಿತು. ರಿಷಭ್ ಪಂತ್ 63 ರನ್‌ ಮತ್ತು ಧ್ರುವ್ ಜುರೆಲ್ 59 ರನ್‌ ಬಾರಿಸಿ ಅಜೇಯರಾಗಿ ಉಳಿದಿದ್ದಲ್ಲದೆ 112 ರನ್‌ಗಳ ಜೊತೆಯಾಟವನ್ನು ನಿರ್ಮಿಸಿದ್ದರು.

IND vs SL: ಐದು ಟೆಸ್ಟ್ ಅಥವಾ ಅಜೀವ ನಿಷೇಧ..! ಸಂಕಷ್ಟದಲ್ಲಿ ಜೈಸ್ವಾಲ್

63 ರನ್ ಬಾರಿಸಿ ಪಂತ್ ಔಟ್

ಎರಡನೇ ಸೆಷನ್ ಆರಂಭದಲ್ಲೇ ತಂಡ ತನ್ನ 7ನೇ ವಿಕೆಟ್ ಕಳೆದುಕೊಂಡಿತು. ರಿಷಭ್ ಪಂತ್ ಮೊದಲ ಎಸೆತದಲ್ಲೇ ಔಟಾದರು. ಮಾನವ್ ಸುತಾರ್ ಕೂಡ 18 ರನ್​ಗಳ ಕಾಣಿಕೆ ನೀಡಿ ಪೆವಿಲಿಯನ್ ಸೇರಿಕೊಂಡರು. ಆದಾಗ್ಯೂ ಒಂದು ತುದಿಯಲ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟುತ್ತಿದ್ದ ಜುರೇಲ್​ಗೆ ಸಿರಾಜ್ ಸಾಥ್ ನೀಡಿದರು. ಮಳೆಯಿಂದ ಪಂದ್ಯ ಸ್ಥಗಿತಗೊಳ್ಳುವುದಕ್ಕೂ ಮುನ್ನ ಸಿರಾಜ್ 17 ಎಸೆತಗಳನ್ನು ಎದುರಿಸಿ ಖಾತೆ ಕೂಡ ತೆರೆದಿರಲಿಲ್ಲ. ಇತ್ತ ಜುರೇಲ್ 155 ಎಸೆತಗಳಲ್ಲಿ 95 ರನ್ ಬಾರಿಸಿ ಶತಕದ ಸಮೀಪದಲ್ಲಿದ್ದಾರೆ. ಮಳೆಯಿಂದಾಗಿ ಅಂಪೈರ್​ಗಳು ಚಹಾ ವಿರಾಮವನ್ನು ಘೋಷಿಸಿದರು. ಹೀಗಾಗಿ ಎರಡನೇ ಸೆಷನ್​ ಬೇಗನೇ ಅಂತ್ಯವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Mon, 24 August 26

Follow Us
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್