AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಅಭಿನಂದನೆ ಕೆಕೆಆರ್​​” ಸಾಲು ಸಾಲು ವಿಕೆಟ್​ನಿಂದ ತತ್ತರಿಸಿದ ಎಸ್‌ಆರ್‌ಹೆಚ್​​: ಕೋಲ್ಕತ್ತಾ ವಿನ್​ ಎಂದ ನೆಟ್ಟಿಗರು

ಒಂದಾದರೊಂದರಂತೆ ವಿಕೆಟ್​ಗಳನ್ನು ಕಬಳಿಸಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ಭವಿಷ್ಯವನ್ನು ನೆಟ್ಟಿಗರು ನುಡಿದಿದ್ದಾರೆ. ಇದಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಟ್ವೀಟ್​ ಮಾಡಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಭಿನಂದಿಸಿದ್ದಾರೆ. ಬಳಿಕ ಕೆಲವೇ ಸಮಯದಲ್ಲಿ "ಅಭಿನಂದನೆಗಳು KKR" ಗೂಗಲ್​ನಲ್ಲಿ ಟ್ರೆಂಡ್​ ಸೃಷ್ಟಿ ಮಾಡಿದೆ.

ಅಭಿನಂದನೆ ಕೆಕೆಆರ್​​ ಸಾಲು ಸಾಲು ವಿಕೆಟ್​ನಿಂದ ತತ್ತರಿಸಿದ ಎಸ್‌ಆರ್‌ಹೆಚ್​​: ಕೋಲ್ಕತ್ತಾ ವಿನ್​ ಎಂದ ನೆಟ್ಟಿಗರು
"ಅಭಿನಂದನೆ ಕೆಕೆಆರ್​​" ಸಾಲು ಸಾಲು ವಿಕೆಟ್​ನಿಂದ ತತ್ತರಿಸಿದ ಎಸ್‌ಆರ್‌ಹೆಚ್​​: ಕೋಲ್ಕತ್ತಾ ವಿನ್​ ಎಂದ ನೆಟ್ಟಿಗರು
ಗಂಗಾಧರ​ ಬ. ಸಾಬೋಜಿ
|

Updated on: May 26, 2024 | 9:33 PM

Share

17ನೇ ಆವೃತ್ತಿಯ ಐಪಿಎಲ್ ಫೈನಲ್ ಕದನ ಈಗಾಗಲೇ ಶುರುವಾಗಿದೆ. ಚೆನ್ನೈನ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ಟ್ರೋಫಿ ಮುಡಿಗೇರಿಸಿಕೊಳ್ಳಲು ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಕಾದಾಡುತ್ತಿವೆ. ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಓವರ್‌ನಲ್ಲಿಯೇ ಮಿಚೆಲ್ ಸ್ಟಾರ್ಕ್, ಅಭಿಷೇಕ್ ಶರ್ಮಾರ ವಿಕೆಟ್​ ಪತನವಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಆಕ್ರೋಶ ವ್ಯಕ್ತಪಡಿಸಿದ್ದು, ಕೋಲ್ಕತ್ತಾವನ್ನು ವಿಜೇತರೆಂದು ಘೋಷಿಸಿದ್ದಾರೆ.

ಒಂದಾದರೊಂದರಂತೆ ವಿಕೆಟ್​ಗಳನ್ನು ಕಬಳಿಸಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡದ ಭವಿಷ್ಯವನ್ನು ನೆಟ್ಟಿಗರು ನುಡಿದಿದ್ದಾರೆ. ಇದಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಟ್ವೀಟ್​ ಮಾಡಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅಭಿನಂದಿಸಿದ್ದಾರೆ. ಬಳಿಕ ಕೆಲವೇ ಸಮಯದಲ್ಲಿ “ಅಭಿನಂದನೆಗಳು KKR” ಗೂಗಲ್​ನಲ್ಲಿ ಟ್ರೆಂಡ್​ ಸೃಷ್ಟಿ ಮಾಡಿದೆ.

ಹೈದರಾಬಾದ್ ಓಪನರ್ ಟ್ರಾವಿಸ್ ಹೆಡ್ ಅನ್ನು ವೈಭವ್ ಅರೋರಾ ಗೋಲ್ಡನ್ ಡಕ್‌ ಮಾಡಿದರು. ಹೈದರಾಬಾದ್​ ತಂಡವನ್ನು ಸಂಪೂರ್ಣ ಕಟ್ಟಿಹಾಕಲು ಜೊತೆಗೆ ರಾಹುಲ್ ತ್ರಿಪಾಠಿಯನ್ನು ತೆಗೆದುಹಾಕಲು ಸ್ಟಾರ್ಕ್ ಮರಳಿದರು.

ಇದನ್ನೂ ಓದಿ: IPL 2024 Final: RCB, CSK, MI ಇಲ್ಲದ ಮೂರನೇ ಫೈನಲ್

ಪವರ್‌ಪ್ಲೇಯೊಳಗೆ 3 ವಿಕೆಟ್‌ಗಳನ್ನು ಕಳೆದುಕೊಂಡ ನಂತರ ಬರ್ತ್‌ಡೇ ಬಾಯ್​ ನಿತೀಶ್ ಕುಮಾರ್ ರೆಡ್ಡಿ ತಮ್ಮ ಬ್ಯಾಟಿಂಗ್​ನೊಂದಿಗೆ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದು ಸನ್‌ರೈಸರ್ಸ್ ಹೈದರಾಬಾದ್​ ತಂಡ ಆಶಿಸಿತ್ತು. ಹರ್ಷಿತ್ ರಾಣಾ ಅವರ ವೇಗದ ಎಸೆತದಿಂದ ನಿತೀಶ್ ಕೂಡ ಔಟ್​ ಆದರು.

ಸನ್‌ರೈಸರ್ಸ್ ಹೈದರಾಬಾದ್ ಈ ಹಿಂದೆ 2016 ರಲ್ಲಿ ಒಮ್ಮೆ ಸ್ಪರ್ಧೆಯನ್ನು ಗೆದ್ದಿದ್ದರು. ಕೋಲ್ಕತ್ತಾ ನೈಟ್ ರೈಡರ್ಸ್ 2012 ಮತ್ತು 2014 ರಲ್ಲಿ ಪಂದ್ಯಾವಳಿಯನ್ನು ಗೆದ್ದು ಎರಡು ಬಾರಿ ಚಾಂಪಿಯನ್ ಆಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ