AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡುಮ್ಮ ಎಂದು ಜರೀದಿದ್ದ ರೋಹಿತ್​ಗೆ ಇಂದು ಸಲ್ಯೂಟ್ ಹೊಡೆದ ಕಾಂಗ್ರೆಸ್ ನಾಯಕಿ ಶಮಾ! ಹೇಳಿದ್ದೇನು?

Champions Trophy 2025: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಅಂತರದಿಂದ ಜಯಗಳಿಸಿದೆ. ರೋಹಿತ್ ಶರ್ಮಾ ಅವರ 76 ರನ್‌ಗಳ ಅಮೋಘ ಇನಿಂಗ್ಸ್ ಈ ಗೆಲುವಿಗೆ ಪ್ರಮುಖ ಕಾರಣವಾಗಿತ್ತು. ತಂಡದ ಗೆಲುವಿನ ಬಳಿಕ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಅವರು ರೋಹಿತ್​ ಶರ್ಮಾಗೆ ಸಲ್ಯೂಟ್ ಹೊಡೆದಿದ್ದಾರೆ.

ಡುಮ್ಮ ಎಂದು ಜರೀದಿದ್ದ ರೋಹಿತ್​ಗೆ ಇಂದು ಸಲ್ಯೂಟ್ ಹೊಡೆದ ಕಾಂಗ್ರೆಸ್ ನಾಯಕಿ ಶಮಾ! ಹೇಳಿದ್ದೇನು?
Shama Mohamed
ಪೃಥ್ವಿಶಂಕರ
|

Updated on: Mar 10, 2025 | 12:01 AM

Share

140 ಕೋಟಿ ಭಾರತೀಯ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಮುಳುಗೇಳುತ್ತಿದ್ದಾರೆ. ಇದಕ್ಕೆ ಕಾರಣ ದೂರದ ದುಬೈನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ (Team India) ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ. ಪ್ರಶಸ್ತಿ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಕಿವೀಸ್ ತಂಡ ನೀಡಿದ 252 ರನ್‌ಗಳ ಗುರಿಯನ್ನು ಟೀಂ ಇಂಡಿಯಾ 6 ವಿಕೆಟ್‌ಗಳನ್ನು ಕಳೆದುಕೊಂಡು ತಲುಪಿತು. ತಂಡದ ಈ ಗೆಲುವಿನಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಸಿಡಿಸಿದ 76 ರನ್​ಗಳು ಪ್ರಮುಖ ಪಾತ್ರವಹಿಸಿದವು. ನಾಯಕನ ಈ ಗೆಲುವಿನ ಇನ್ನಿಂಗ್ಸ್​ಗೆ ಇಡೀ ಕ್ರಿಕೆಟ್ ಲೋಕವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಇದರ ಜೊತೆಗೆ ಕೆಲವೇ ದಿನಗಳ ಹಿಂದೆ ರೋಹಿತ್​ರನ್ನು ಡುಮ್ಮ, ಕ್ರಿಕೆಟ್ ಆಡಲು ಲಾಯಕ್ ಇಲ್ಲ ಎಂದು ಜರಿದಿದ್ದ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್, ಇದೀಗ ಹಿಟ್​ಮ್ಯಾನ್​ಗೆ ಸಲ್ಯೂಟ್ ಹೊಡೆದಿದ್ದಾರೆ.

ರೋಹಿತ್ ಶರ್ಮಾಗೆ ಸೆಲ್ಯೂಟ್

ಅತ್ತ ದುಬೈನಲ್ಲಿ ಟೀಂ ಇಂಡಿಯಾ ವಿಜಯ ಪತಾಕೆ ಹಾರಿಸಿದರೆ. ಇತ್ತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದ ಟೀಂ ಇಂಡಿಯಾವನ್ನು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್ ಅಭಿನಂದಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅಭಿನಂದನೆಯ ಪೋಸ್ಟ್ ಮಾಡಿರುವ ಶಮಾ, ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾಗೆ ಅಭಿನಂದನೆಗಳು. ಹಾಗೆಯೇ 76 ರನ್ ಗಳಿಸುವ ಮೂಲಕ ಗೆಲುವಿಗೆ ಬಲವಾದ ಅಡಿಪಾಯ ಹಾಕಿದ ನಾಯಕ ರೋಹಿತ್ ಶರ್ಮಾಗೆ ಸೆಲ್ಯೂಟ್. ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವರ ಅಮೋಘ ಪ್ರದರ್ಶನವು ಭಾರತಕ್ಕೆ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಕೊಹ್ಲಿ ಆಟವನ್ನು ಹೊಗಳಿದ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್
Image
ನಾನು ಈ ವಿಷಯಗಳ ಬಗ್ಗೆ ಎಂದಿಗೂ ಗಮನ ಹರಿಸಲಿಲ್ಲ; ಕೊಹ್ಲಿ
Image
6 ನಾಕೌಟ್ ಪಂದ್ಯಗಳಲ್ಲಿ 390 ರನ್; ಕೊಹ್ಲಿಗೆ ಕೊಹ್ಲಿಯೇ ಸಾಟಿ
Image
ಮತ್ತೊಂದು ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ಕೊಹ್ಲಿ

ಭಾರತ ಕಂಡ ಅತ್ಯಂತ ಅಸಮರ್ಥ ನಾಯಕ

ವಾಸ್ತವವಾಗಿ ಕೆಲವು ದಿನಗಳ ಹಿಂದೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಫಿಟ್ನೆಸ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್, ‘ರೋಹಿತ್ ಶರ್ಮಾ ದಪ್ಪಗಿದ್ದಾರೆ, ಅವರು ತೂಕ ಇಳಿಸಿಕೊಳ್ಳಬೇಕು. ಅವರು ಖಂಡಿತವಾಗಿಯೂ ಭಾರತ ಕಂಡ ಅತ್ಯಂತ ಅಸಮರ್ಥ ನಾಯಕ ಎಂದು ಬರೆದು ಪೋಸ್ಟ್​ವೊಂದನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದರು. ಆ ಬಳಿಕ ಶಮಾ ಅವರ ಈ ಹೇಳಿಕೆ ಸಾಕಷ್ಟು ವಿವಾದ ಹುಟ್ಟುಹಾಕಿತ್ತು. ವಿವಾದ ಕಾವು ಹೆಚ್ಚಾದ ಬಳಿಕ ಅವರು ತಮ್ಮ ಪೋಸ್ಟ್ ಅನ್ನು ತೆಗೆದುಹಾಕಿದ್ದರು.

ಇದನ್ನೂ ಓದಿ: IND vs NZ: ಕನ್ನಡಿಗನ ಕೈಸೇರಿದ ಗೋಲ್ಡನ್ ಬ್ಯಾಟ್, ಪಂದ್ಯಾವಳಿಯ ಆಟಗಾರ ಕಿರೀಟ

ಪಂದ್ಯ ಹೀಗಿತ್ತು

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯವು ನ್ಯೂಜಿಲೆಂಡ್ ಮತ್ತು ಟೀಂ ಇಂಡಿಯಾ ನಡುವೆ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಆರು ವಿಕೆಟ್ ಕಳೆದುಕೊಂಡು ಆರು ಎಸೆತಗಳು ಬಾಕಿ ಇರುವಾಗಲೇ ಪಂದ್ಯವನ್ನು ಗೆದ್ದುಕೊಂಡಿತು. ಪಂದ್ಯದಲ್ಲಿ 83 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 76 ರನ್ ಗಳಿಸಿದ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್