AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್​ಪ್ರೀತ್ ಬುಮ್ರಾಗೆ ಕೆರಿಯರ್ ಕೊನೆಗೊಳ್ಳುವ ಭೀತಿ..!

Jasprit Bumrah: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಗುಳಿದಿದ್ದರು. ಬೆನ್ನು ನೋವಿನ ಸಮಸ್ಯೆ ಕಾರಣ ಐಸಿಸಿ ಟೂರ್ನಿಗೆ ಅಲಭ್ಯರಾಗಿದ್ದ ಬುಮ್ರಾ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಆರಂಭಿಕ ಪಂದ್ಯಗಳಲ್ಲೂ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ.

ಜಸ್​ಪ್ರೀತ್ ಬುಮ್ರಾಗೆ ಕೆರಿಯರ್ ಕೊನೆಗೊಳ್ಳುವ ಭೀತಿ..!
Jasprit Bumrah
ಝಾಹಿರ್ ಯೂಸುಫ್
|

Updated on:Mar 12, 2025 | 8:31 AM

Share

ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ 2022ರ ಟಿ20 ವಿಶ್ವಕಪ್​ಗೆ ಅಲಭ್ಯರಾಗಿದ್ದರು. ಕಾರಣ ಬೆನ್ನು ನೋವಿನ ಸಮಸ್ಯೆ. 2025ರ ಚಾಂಪಿಯನ್ಸ್ ಟ್ರೋಫಿಯಲ್ಲೂ ಬುಮ್ರಾ ಕಾಣಿಸಿಕೊಂಡಿರಲಿಲ್ಲ. ಕಾರಣ ಅದೇ ಬೆನ್ನು ನೋವಿನ ಸಮಸ್ಯೆ. ಹೀಗೆ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾಗೆ ಇದೀಗ ವೃತ್ತಿಜೀವನ ಕೊನೆಗೊಳ್ಳುವ ಭೀತಿ ಎದುರಾಗಿದೆ. ಏಕೆಂದರೆ ಇಂತಹದ್ದೇ ಸಮಸ್ಯೆಗೆ ಒಳಗಾಗಿದ್ದ ನ್ಯೂಝಿಲೆಂಡ್​ನ ವೇಗಿ ಶೇನ್ ಬಾಂಡ್ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಕ್ರಿಕೆಟ್​ ಕೆರಿಯರ್​ಗೆ ವಿದಾಯ ಹೇಳಿದ್ದರು.

ಜಸ್​ಪ್ರೀತ್ ಬುಮ್ರಾ ಈಗ ಎಚ್ಚರಿಕೆವಹಿಸದಿದ್ದರೆ ನನ್ನಂತೆ ದಿಢೀರ್ ವೃತ್ತಿಜೀವನ ಕೊನೆಗೊಳಿಸಬೇಕಾಗಿ ಬರಬಹುದು ಎಂದು ಶೇನ್ ಬಾಂಡ್ ಹೇಳಿದ್ದಾರೆ. ಇಎಸ್‌ಪಿಎನ್-ಕ್ರಿಕ್‌ಇನ್ಫೋ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಬಾಂಡ್, ಬುಮ್ರಾ ಅವರ ಬೆನ್ನಿನ ಒಂದೇ ಭಾಗದಲ್ಲಿ ಸಮಸ್ಯೆ ಎದುರಾಗುತ್ತಿದೆ. ಇದು ಅತ್ಯಂತ ಅಪಾಯಕಾರಿ.

ಏಕೆಂದರೆ ಜಸ್​ಪ್ರೀತ್ ಬುಮ್ರಾ ಮತ್ತೊಮ್ಮೆ ಅದೇ ಸ್ಥಳದಲ್ಲಿ ಗಾಯಗೊಂಡರೆ, ಅದು ಅವರ ವೃತ್ತಿಜೀವನವನ್ನು ಕೊನೆಗೊಳಿಸಬಹುದು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ನೀವು ಮತ್ತೆ ಅದೇ ಸ್ಥಳದಲ್ಲಿ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಿಲ್ಲ ಎಂಬುದನ್ನು. ಹೀಗಾಗಿ ಇನ್ನೊಮ್ಮೆ ಜಸ್​ಪ್ರೀತ್ ಬುಮ್ರಾ ಇದೇ ಬೆನ್ನು ನೋವಿನ ಸಮಸ್ಯೆಗೆ ಒಳಗಾದರೆ ಅವರು ಕ್ರಿಕೆಟ್ ಅಂತ್ಯಗೊಳಿಸಬೇಕಾಗಿ ಬರಬಹುದು ಎಂದು ಶೇನ್ ಬಾಂಡ್ ಹೇಳಿದ್ದಾರೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗುತ್ತಿರುವುದು ಇದೇ ಮೊದಲಲ್ಲ. ಎರಡು-ಮೂರು ವರ್ಷಗಳ ಹಿಂದೆಯೂ ಬುಮ್ರಾ ಅವರ ಬೆನ್ನಿನ ಮೂಳೆಯಲ್ಲಿ ಸಮಸ್ಯೆ ತಲೆದೂರಿತ್ತು. ಇದರಿಂದಾಗಿ ಅವರು 2022 ರ ಟಿ 20 ವಿಶ್ವಕಪ್‌ ಆಡಿರಲಿಲ್ಲ. ಆ ಬಳಿಕ ನ್ಯೂಝಿಲೆಂಡ್‌ನ ಪ್ರಸಿದ್ಧ ವೈದ್ಯರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಲ್ಲದೆ ಸುಮಾರು ಒಂದು ವರ್ಷ ಕ್ರಿಕೆಟ್‌ನಿಂದ ದೂರ ಉಳಿದಿದ್ದರು.

ಇದೀಗ ಮತ್ತದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಒಂದೇ ಕಡೆ ಮತ್ತೆ ಮತ್ತೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಿಲ್ಲ. ಇದರಿಂದ ಬುಮ್ರಾ ಅವರ ಕೆರಿಯರ್ ಅಂತ್ಯದತ್ತ ಸಾಗಬಹುದು. ಹೀಗಾಗಿ ಅವರು ಹೆಚ್ಚಿನ ವಿಶ್ರಾಂತಿಯೊಂದಿಗೆ ಕ್ರಿಕೆಟ್ ವೃತ್ತಿಜೀವನ ಮುಂದುವರೆಸುವುದು ಉತ್ತಮ ಎಂದು ಶೇನ್ ಬಾಂಡ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ಶೇನ್ ಬಾಂಡ್ ಅವರ ಪ್ರಕಾರ, ಜಸ್​ಪ್ರೀತ್ ಬುಮ್ರಾ ದೀರ್ಘಕಾಲ ಕ್ರಿಕೆಟ್ ಆಡಬೇಕಿದ್ದರೆ ಅವರು ಒಂದೇ ಬಾರಿಗೆ ಸತತ ಎರಡು ಟೆಸ್ಟ್‌ಗಳಿಗಿಂತ ಹೆಚ್ಚು ಪಂದ್ಯಗಳನ್ನು ಆಡಬಾರದು. ಏಕೆಂದರೆ ಇಲ್ಲಿ ಟೆಸ್ಟ್​ನಲ್ಲಿ ಹೆಚ್ಚು ಓವರ್​ಗಳನ್ನು ಎಸೆಯಬೇಕಾಗುತ್ತದೆ. ಅದಕ್ಕೂ ಮುನ್ನ ಬೌಲಿಂಗ್ ಅಭ್ಯಾಸವನ್ನು ಸಹ ನಡೆಸಬೇಕು. ಅಲ್ಲದೆ ಅವರು ಮೂರು ಫಾರ್ಮ್ಯಾಟ್​ನಲ್ಳೂ ಟೀಮ್ ಇಂಡಿಯಾವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ ಬುಮ್ರಾ ಪ್ರತಿ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳ ಬಳಿಕ ವಿಶ್ರಾಂತಿ ಪಡೆಯುವುದು ಉತ್ತಮ ಎಂದು ಶೇನ್ ಬಾಂಡ್ ಹೇಳಿದ್ದಾರೆ.

Shane Bond Bumrah

ಶೇನ್ ಬಾಂಡ್ – ಜಸ್​ಪ್ರೀತ್ ಬುಮ್ರಾ

ಅಂದಹಾಗೆ ಶೇನ್ ಬಾಂಡ್ ಅವರು ಜಸ್​ಪ್ರೀತ್ ಬುಮ್ರಾ ಅವರ ಬೌಲಿಂಗ್ ಕೋಚ್. ಅಂದರೆ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿ ಬಾಂಡ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಬಾಂಡ್ ಅವರಿಗೆ ಬುಮ್ರಾ ಸಾಮರ್ಥ್ಯ ಹಾಗೂ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವಿರುತ್ತದೆ. ಹೀಗಾಗಿಯೇ ಜಸ್​ಪ್ರೀತ್ ಬುಮ್ರಾ ಅವರನ್ನು ಟೀಮ್ ಇಂಡಿಯಾ ಸತತ ಪಂದ್ಯಗಳಲ್ಲಿ ಕಣಕ್ಕಿಳಿಸಬಾರದೆಂದು ಶೇನ್ ಬಾಂಡ್ ಅಭಿಪ್ರಾಯಪಟ್ಟಿದ್ದಾರೆ.

Published On - 8:31 am, Wed, 12 March 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ