AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್! ಸೋಂಕಿತನ ಸಂಪರ್ಕದಲ್ಲಿದ್ದ 6 ಸದಸ್ಯರ ವಿವರ ಇಲ್ಲಿದೆ

IPL 2021: ಸನ್ ರೈಸರ್ಸ್ ಹೈದರಾಬಾದ್ ಕ್ರಿಕೆಟಿಗ ನಟರಾಜನ್​ಗೆ ಕೊರೊನಾ ಪಾಸಿಟಿವ್ ಎಂಬ ಹುದ್ದಿ ಹೊರಬಿದ್ದಿದೆ. ಇದರೊಂದಿಗೆ, ಅವರ ಸಂಪರ್ಕಕ್ಕೆ ಬಂದ ಇತರ ಆರು ಜನರನ್ನು (ಆಟಗಾರರು, ಸಿಬ್ಬಂದಿ) ಪ್ರತ್ಯೇಕವಾಗಿ ಇರಿಸಲಾಗಿದೆ.

IPL 2021: ಟಿ. ನಟರಾಜನ್​ಗೆ ಕೊರೊನಾ ಪಾಸಿಟಿವ್! ಸೋಂಕಿತನ ಸಂಪರ್ಕದಲ್ಲಿದ್ದ 6 ಸದಸ್ಯರ ವಿವರ ಇಲ್ಲಿದೆ
ಟಿ. ನಟರಾಜನ್
TV9 Web
| Edited By: |

Updated on:Sep 22, 2021 | 3:55 PM

Share

ಸನ್ ರೈಸರ್ಸ್ ಹೈದರಾಬಾದ್ ಕ್ರಿಕೆಟಿಗ ನಟರಾಜನ್​ಗೆ ಕೊರೊನಾ ಪಾಸಿಟಿವ್ ಎಂಬ ಹುದ್ದಿ ಹೊರಬಿದ್ದಿದೆ. ಇದರೊಂದಿಗೆ, ಅವರ ಸಂಪರ್ಕಕ್ಕೆ ಬಂದ ಇತರ ಆರು ಜನರನ್ನು (ಆಟಗಾರರು, ಸಿಬ್ಬಂದಿ) ಪ್ರತ್ಯೇಕವಾಗಿ ಇರಿಸಲಾಗಿದೆ. ಇದರೊಂದಿಗೆ, ಇಂದು ಸಂಜೆ ದೆಹಲಿ ಕ್ಯಾಪಿಟಲ್ಸ್‌ನೊಂದಿಗೆ ನಡೆಯಲಿರುವ ಪಂದ್ಯ ನಡೆಯುವುದು ಅನುಮಾನವಾಗಿದೆ. ಉಳಿದ ಆಟಗಾರರು ಮತ್ತು ಸಿಬ್ಬಂದಿಯ ಬಗ್ಗೆ ಆರ್‌ಟಿ ಪಿಸಿಆರ್ ವರದಿ ಬರಬೇಕಿದೆ. ಅವರ ಪರೀಕ್ಷಾ ಫಲಿತಾಂಶದ ನಂತರ ಪಂದ್ಯ ನಿರ್ವಹಣೆ ಅಥವಾ ಮುಂದೂಡುವಿಕೆಯ ಕುರಿತು ಪ್ರಕಟಣೆ ಬರುವ ಸಾಧ್ಯತೆಯಿದೆ.

6 ಮಂದಿ ಕ್ವಾರಂಟೈನ್ ನಟರಾಜನ್​ ಸಂಪರ್ಕಕದಲ್ಲಿದ್ದ ಆರು ಸದಸ್ಯರನ್ನು ಆಲ್ ರೌಂಡರ್ ವಿಜಯ್ ಶಂಕರ್, ತಂಡದ ಮ್ಯಾನೇಜರ್ ವಿಜಯ್ ಕುಮಾರ್, ಫಿಸಿಯೋಥೆರಪಿಸ್ಟ್ ಶ್ಯಾಮ್ ಸುಂದರ್ ಜೆ, ತಂಡದ ವೈದ್ಯ ಅಂಜನಾ ವನ್ನನ್, ಲಾಜಿಸ್ಟಿಕ್ಸ್ ಮ್ಯಾನೇಜರ್ ತುಷಾರ್ ಖೇಡ್ಕರ್ ಮತ್ತು ನೆಟ್ ಬೌಲರ್ ಪೆರಿಯಸಾಮಿ ಗಣೇಶನ್ ಎಂದು ಗುರುತಿಸಲಾಗಿದೆ.

ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಐಪಿಎಲ್ 2021 ಪಂದ್ಯಾವಳಿಯನ್ನು ಈಗಾಗಲೇ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಗಿತ್ತು. ಆದರೆ ಈಗ ಬಿಸಿಸಿಐನ ಕಟ್ಟುನಿಟ್ಟಿನ ಬಯೋ ಬಬಲ್ ನಿಯಮದಲ್ಲೂ ಆಟಗಾರರಿಗೆ ಕೊರೊನಾ ತಗುಲಿರುವುದು ಕ್ರಿಕೆಟ್​ ಬಿಗ್​ಬಾಸ್​ಗಳಿಗೆ ನುಂಗಲಾರದ ತುತ್ತಾಗಿದೆ. ಅದಾಗ್ಯೂ ನಟರಾಜನ್​ ಅವರಿಗೆ ಕೊರೊನಾ ಹೇಗೆ ತಗುಲಿತು ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.

Published On - 3:53 pm, Wed, 22 September 21

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ