AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನಿಲ್ ನರೈನ್​ಗೆ ರೆಡ್ ಕಾರ್ಡ್​: ಮೈದಾನದಿಂದ ಹೊರಕ್ಕೆ..!

CPL 2023: ಸ್ಲೋ ಓವರ್ ರೇಟ್​ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೆಡ್ ಕಾರ್ಡ್ ನಿಯಮವನ್ನು ಜಾರಿಗೆ ತರಲಾಗಿದೆ. ಈ ನಿಯಮದ ಪ್ರಕಾರ ನಿಧಾನಗತಿಯಲ್ಲಿ ಓವರ್ ಪೂರೈಸಿದ ತಂಡ ಓರ್ವ ಫೀಲ್ಡರ್​ನನ್ನು ಕಳೆದುಕೊಳ್ಳಬಹುದು. ಹಾಗೆಯೇ ಬ್ಯಾಟಿಂಗ್ ತಂಡಕ್ಕೆ 5 ರನ್​ಗಳ ಪೆನಾಲ್ಟಿ ಕೂಡ ಬೀಳಬಹುದು. ಈ ನಿಯಮದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಸುನಿಲ್ ನರೈನ್​ಗೆ ರೆಡ್ ಕಾರ್ಡ್​: ಮೈದಾನದಿಂದ ಹೊರಕ್ಕೆ..!
Sunil Narine
TV9 Web
| Edited By: |

Updated on: Aug 28, 2023 | 4:25 PM

Share

ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ (CPL 2023) ರೆಡ್ ಕಾರ್ಡ್​ ನಿಯಮವನ್ನು ಜಾರಿಗೆ ತರಲಾಗಿದ್ದು, ಇದರ ಮೊದಲ ಬಲಿಪಶುವಾಗಿ ಸುನಿಲ್ ನರೈನ್ ಮೈದಾನ ತೊರೆದಿದ್ದಾರೆ. ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಹಾಗೂ ಟ್ರಿನ್‌ಬಾಗೊ ನೈಟ್ ರೈಡರ್ಸ್ ನಡುವಣ ಪಂದ್ಯದ ವೇಳೆ ಅಂಪೈರ್ ಮೊದಲ ಬಾರಿಗೆ ರೆಡ್ ಕಾರ್ಡ್ ತೋರಿಸಿದರು.

ಈ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 19 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಅಂಪೈರ್​ ರೆಡ್ ಕಾರ್ಡ್ ತೋರಿಸಿದ್ದರು. ಅಲ್ಲದೆ ಈ ನಿಯಮದಂತೆ ಒಬ್ಬ ಆಟಗಾರನು ಮೈದಾನದಿಂದ ಹೊರಗುಳಿಯಬೇಕಿತ್ತು. ಇಲ್ಲಿ ನಾಯಕ ಕೀರನ್ ಪೊಲಾರ್ಡ್, ಸುನಿಲ್ ನರೈನ್ ಅವರಿಗೆ ರೆಡ್ ಕಾರ್ಡ್​ ತೋರಿಸುವಂತೆ ಅಂಪೈರ್​ಗೆ ತಿಳಿಸಿದರು. ಅದರಂತೆ 19ನೇ ಓವರ್​ ಮುಕ್ತಾಯದ ಬೆನ್ನಲ್ಲೇ ನರೈನ್ ಮೈದಾನ ತೊರೆದರು. ಇದರೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೆಡ್ ಕಾರ್ಡ್​ ಪಡೆದ ಮೊದಲ ಆಟಗಾರ ಎನಿಸಿಕೊಂಡರು.

ಏನಿದು ರೆಡ್ ಕಾರ್ಡ್ ನಿಯಮ?

ಸ್ಲೋ ಓವರ್ ರೇಟ್​ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೆಡ್ ಕಾರ್ಡ್ ನಿಯಮವನ್ನು ಜಾರಿಗೆ ತರಲಾಗಿದೆ. ಈ ನಿಯಮದ ಪ್ರಕಾರ ನಿಧಾನಗತಿಯಲ್ಲಿ ಓವರ್ ಪೂರೈಸಿದ ತಂಡ ಓರ್ವ ಫೀಲ್ಡರ್​ನನ್ನು ಕಳೆದುಕೊಳ್ಳಬಹುದು. ಹಾಗೆಯೇ ಬ್ಯಾಟಿಂಗ್ ತಂಡಕ್ಕೆ 5 ರನ್​ಗಳ ಪೆನಾಲ್ಟಿ ಕೂಡ ಬೀಳಬಹುದು. ಈ ನಿಯಮದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

  • ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಿಯಮದಂತೆ ಸಿಪಿಎಲ್​ನಲ್ಲೂ ಒಂದು ಇನಿಂಗ್ಸ್​ಗೆ 85 ನಿಮಿಷಗಳನ್ನು ನಿಗದಿ ಮಾಡಲಾಗಿದೆ.
  • ಇಲ್ಲಿ ಬೌಲಿಂಗ್ ತಂಡವು 17ನೇ ಓವರ್ ಅನ್ನು 72 ನಿಮಿಷ ಮತ್ತು 15 ಸೆಕೆಂಡುಗಳಲ್ಲಿ ಮುಗಿಸಬೇಕು. ಈ ಸಮಯದೊಳಗೆ 17 ಓವರ್ ಪೂರ್ಣಗೊಳಿಸಲು ವಿಫಲವಾದರೆ ಬೌಂಡರಿ ಲೈನ್​ನಿಂದ ಓರ್ವ ಫೀಲ್ಡರ್ ಅನ್ನು 30 ಯಾರ್ಡ್ ಸರ್ಕಲ್​ನಲ್ಲಿ ನಿಲ್ಲಿಸಬೇಕಾಗುತ್ತದೆ.
  • ಇನ್ನು 18ನೇ ಓವರ್ ಅನ್ನು 76 ನಿಮಿಷಗಳು ಮತ್ತು 30 ಸೆಕೆಂಡುಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 18 ಓವರ್​ ಮುಗಿಸಲು ಸಾಧ್ಯವಾಗದಿದ್ದರೆ, ಬೌಂಡರಿ ಲೈನ್​ನಿಂದ ಇಬ್ಬರು ಫೀಲ್ಡರ್‌ಗಳನ್ನು ಕಡಿತಗೊಳಿಸಿ 30 ಯಾರ್ಡ್ ಸರ್ಕಲ್​ ಒಳಗೆ ನಿಲ್ಲಿಸಬೇಕಾಗುತ್ತದೆ.
  • 18ನೇ ಓವರ್‌ನ ಪ್ರಾರಂಭದಲ್ಲಿ ಅಗತ್ಯವಿರುವ ಓವರ್ ರೇಟ್​ಗಿಂತ ಹಿಂದೆ ಉಳಿದಿದ್ದರೆ, ಬೌಂಡರಿ ಲೈನ್​ನಿಂದ ಓರ್ವ ಆಟಗಾರ 30 ಯಾರ್ಡ್ ಸರ್ಕಲ್​ನಲ್ಲಿರಬೇಕಾಗುತ್ತದೆ. ಅಂದರೆ 30 ಯಾರ್ಡ್ ಸರ್ಕಲ್​ನಲ್ಲಿ ಒಟ್ಟು 5 ಫೀಲ್ಡರ್ ಇರಬೇಕಾಗುತ್ತದೆ.
  • 19ನೇ ಓವರ್‌ನ ಪ್ರಾರಂಭದಲ್ಲಿ ಓವರ್​ ರೇಟ್​ನಲ್ಲಿ ಹಿಂದೆ ಉಳಿದಿದ್ದರೆ, ಬೌಂಡರಿ ಲೈನ್​ನಿಂದ ಇಬ್ಬರು ಫೀಲ್ಡರ್​ಗಳು 30 ಯಾರ್ಡ್ ಸರ್ಕಲ್​ನಲ್ಲಿ ಫೀಲ್ಡಿಂಗ್ ಮಾಡಬೇಕಾಗುತ್ತದೆ. ಅಂದರೆ 30 ಯಾರ್ಡ್ ಸರ್ಕಲ್​ನಲ್ಲಿ ಒಟ್ಟು 6 ಫೀಲ್ಡರ್​ಗಳಿರಬೇಕಾಗುತ್ತದೆ.​
  • 20ನೇ ಓವರ್‌ನ ಆರಂಭದ ವೇಳೆ ಓವರ್​ ರೇಟ್​ನಲ್ಲಿ ಹಿಂದೆ ಉಳಿದಿದ್ದರೆ, ಓರ್ವ ಫೀಲ್ಡರ್ ಮೈದಾನ ತೊರೆಯಬೇಕಾಗುತ್ತದೆ. ಅಂದರೆ 10 ಮಂದಿಯೊಂದಿಗೆ ಫೀಲ್ಡಿಂಗ್ ಮಾಡಬೇಕಾಗುತ್ತದೆ. ಇಲ್ಲಿ ಯಾರು ಮೈದಾನದಿಂದ ಹೊರಬೇಕು ಎಂಬುದನ್ನು ನಾಯಕ ನಿರ್ಧರಿಸುತ್ತಾನೆ.
  • ಇನ್ನು ಬ್ಯಾಟಿಂಗ್​ ತಂಡವು ಪಂದ್ಯವನ್ನು ನಿಧಾನಗೊಳಿಸಿದರೆ ರನ್​ಗಳ ದಂಡ ವಿಧಿಸಲಾಗುತ್ತದೆ. ಅಂದರೆ ಬ್ಯಾಟಿಂಗ್​ಗೆ ನಿಲ್ಲಲು ಅಥವಾ ಗ್ಲೌಸ್ ಮತ್ತು ಬ್ಯಾಟ್​ಗಳನ್ನು ಬದಲಿಸುವ ಮೂಲಕ ಪಂದ್ಯದ ಸಮಯವನ್ನು ವ್ಯರ್ಥ ಮಾಡಿದರೆ 5 ರನ್​​ಗಳ ಪೆನಾಲ್ಟಿ ಬೀಳಲಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಫೀಲ್ಡ್​ ಅಂಪೈರ್​ ರೆಡ್ ಕಾರ್ಡ್ ತೋರಿಸಿ ಈ ನಿಯಮವನ್ನು ತಕ್ಷಣವೇ ಜಾರಿಗೊಳಿಸುತ್ತಾರೆ. ಅದರಂತೆ ಟ್ರಿನ್​ಬಾಗೊ ನೈಟ್​ ರೈಡರ್ಸ್​ 20ನೇ ಓವರ್‌ನ ಆರಂಭದ ವೇಳೆ ಓವರ್​ ರೇಟ್​ನಲ್ಲಿ ಹಿಂದೆ ಉಳಿದಿದ್ದ ಕಾರಣ ಸುನಿಲ್ ನರೈನ್ ಅವರನ್ನು ಹೊರಗೆ ಕಳುಹಿಸಿ, ಕೊನೆಯ ಓವರ್​ನಲ್ಲಿ 10 ಮಂದಿಯೊಂದಿಗೆ ಫೀಲ್ಡಿಂಗ್ ಮಾಡಿದೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ