AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುನಿಲ್ ನರೈನ್​ಗೆ ರೆಡ್ ಕಾರ್ಡ್​: ಮೈದಾನದಿಂದ ಹೊರಕ್ಕೆ..!

CPL 2023: ಸ್ಲೋ ಓವರ್ ರೇಟ್​ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೆಡ್ ಕಾರ್ಡ್ ನಿಯಮವನ್ನು ಜಾರಿಗೆ ತರಲಾಗಿದೆ. ಈ ನಿಯಮದ ಪ್ರಕಾರ ನಿಧಾನಗತಿಯಲ್ಲಿ ಓವರ್ ಪೂರೈಸಿದ ತಂಡ ಓರ್ವ ಫೀಲ್ಡರ್​ನನ್ನು ಕಳೆದುಕೊಳ್ಳಬಹುದು. ಹಾಗೆಯೇ ಬ್ಯಾಟಿಂಗ್ ತಂಡಕ್ಕೆ 5 ರನ್​ಗಳ ಪೆನಾಲ್ಟಿ ಕೂಡ ಬೀಳಬಹುದು. ಈ ನಿಯಮದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಸುನಿಲ್ ನರೈನ್​ಗೆ ರೆಡ್ ಕಾರ್ಡ್​: ಮೈದಾನದಿಂದ ಹೊರಕ್ಕೆ..!
Sunil Narine
TV9 Web
| Edited By: |

Updated on: Aug 28, 2023 | 4:25 PM

Share

ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ (CPL 2023) ರೆಡ್ ಕಾರ್ಡ್​ ನಿಯಮವನ್ನು ಜಾರಿಗೆ ತರಲಾಗಿದ್ದು, ಇದರ ಮೊದಲ ಬಲಿಪಶುವಾಗಿ ಸುನಿಲ್ ನರೈನ್ ಮೈದಾನ ತೊರೆದಿದ್ದಾರೆ. ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಹಾಗೂ ಟ್ರಿನ್‌ಬಾಗೊ ನೈಟ್ ರೈಡರ್ಸ್ ನಡುವಣ ಪಂದ್ಯದ ವೇಳೆ ಅಂಪೈರ್ ಮೊದಲ ಬಾರಿಗೆ ರೆಡ್ ಕಾರ್ಡ್ ತೋರಿಸಿದರು.

ಈ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 19 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಅಂಪೈರ್​ ರೆಡ್ ಕಾರ್ಡ್ ತೋರಿಸಿದ್ದರು. ಅಲ್ಲದೆ ಈ ನಿಯಮದಂತೆ ಒಬ್ಬ ಆಟಗಾರನು ಮೈದಾನದಿಂದ ಹೊರಗುಳಿಯಬೇಕಿತ್ತು. ಇಲ್ಲಿ ನಾಯಕ ಕೀರನ್ ಪೊಲಾರ್ಡ್, ಸುನಿಲ್ ನರೈನ್ ಅವರಿಗೆ ರೆಡ್ ಕಾರ್ಡ್​ ತೋರಿಸುವಂತೆ ಅಂಪೈರ್​ಗೆ ತಿಳಿಸಿದರು. ಅದರಂತೆ 19ನೇ ಓವರ್​ ಮುಕ್ತಾಯದ ಬೆನ್ನಲ್ಲೇ ನರೈನ್ ಮೈದಾನ ತೊರೆದರು. ಇದರೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೆಡ್ ಕಾರ್ಡ್​ ಪಡೆದ ಮೊದಲ ಆಟಗಾರ ಎನಿಸಿಕೊಂಡರು.

ಏನಿದು ರೆಡ್ ಕಾರ್ಡ್ ನಿಯಮ?

ಸ್ಲೋ ಓವರ್ ರೇಟ್​ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ರೆಡ್ ಕಾರ್ಡ್ ನಿಯಮವನ್ನು ಜಾರಿಗೆ ತರಲಾಗಿದೆ. ಈ ನಿಯಮದ ಪ್ರಕಾರ ನಿಧಾನಗತಿಯಲ್ಲಿ ಓವರ್ ಪೂರೈಸಿದ ತಂಡ ಓರ್ವ ಫೀಲ್ಡರ್​ನನ್ನು ಕಳೆದುಕೊಳ್ಳಬಹುದು. ಹಾಗೆಯೇ ಬ್ಯಾಟಿಂಗ್ ತಂಡಕ್ಕೆ 5 ರನ್​ಗಳ ಪೆನಾಲ್ಟಿ ಕೂಡ ಬೀಳಬಹುದು. ಈ ನಿಯಮದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

  • ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಿಯಮದಂತೆ ಸಿಪಿಎಲ್​ನಲ್ಲೂ ಒಂದು ಇನಿಂಗ್ಸ್​ಗೆ 85 ನಿಮಿಷಗಳನ್ನು ನಿಗದಿ ಮಾಡಲಾಗಿದೆ.
  • ಇಲ್ಲಿ ಬೌಲಿಂಗ್ ತಂಡವು 17ನೇ ಓವರ್ ಅನ್ನು 72 ನಿಮಿಷ ಮತ್ತು 15 ಸೆಕೆಂಡುಗಳಲ್ಲಿ ಮುಗಿಸಬೇಕು. ಈ ಸಮಯದೊಳಗೆ 17 ಓವರ್ ಪೂರ್ಣಗೊಳಿಸಲು ವಿಫಲವಾದರೆ ಬೌಂಡರಿ ಲೈನ್​ನಿಂದ ಓರ್ವ ಫೀಲ್ಡರ್ ಅನ್ನು 30 ಯಾರ್ಡ್ ಸರ್ಕಲ್​ನಲ್ಲಿ ನಿಲ್ಲಿಸಬೇಕಾಗುತ್ತದೆ.
  • ಇನ್ನು 18ನೇ ಓವರ್ ಅನ್ನು 76 ನಿಮಿಷಗಳು ಮತ್ತು 30 ಸೆಕೆಂಡುಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 18 ಓವರ್​ ಮುಗಿಸಲು ಸಾಧ್ಯವಾಗದಿದ್ದರೆ, ಬೌಂಡರಿ ಲೈನ್​ನಿಂದ ಇಬ್ಬರು ಫೀಲ್ಡರ್‌ಗಳನ್ನು ಕಡಿತಗೊಳಿಸಿ 30 ಯಾರ್ಡ್ ಸರ್ಕಲ್​ ಒಳಗೆ ನಿಲ್ಲಿಸಬೇಕಾಗುತ್ತದೆ.
  • 18ನೇ ಓವರ್‌ನ ಪ್ರಾರಂಭದಲ್ಲಿ ಅಗತ್ಯವಿರುವ ಓವರ್ ರೇಟ್​ಗಿಂತ ಹಿಂದೆ ಉಳಿದಿದ್ದರೆ, ಬೌಂಡರಿ ಲೈನ್​ನಿಂದ ಓರ್ವ ಆಟಗಾರ 30 ಯಾರ್ಡ್ ಸರ್ಕಲ್​ನಲ್ಲಿರಬೇಕಾಗುತ್ತದೆ. ಅಂದರೆ 30 ಯಾರ್ಡ್ ಸರ್ಕಲ್​ನಲ್ಲಿ ಒಟ್ಟು 5 ಫೀಲ್ಡರ್ ಇರಬೇಕಾಗುತ್ತದೆ.
  • 19ನೇ ಓವರ್‌ನ ಪ್ರಾರಂಭದಲ್ಲಿ ಓವರ್​ ರೇಟ್​ನಲ್ಲಿ ಹಿಂದೆ ಉಳಿದಿದ್ದರೆ, ಬೌಂಡರಿ ಲೈನ್​ನಿಂದ ಇಬ್ಬರು ಫೀಲ್ಡರ್​ಗಳು 30 ಯಾರ್ಡ್ ಸರ್ಕಲ್​ನಲ್ಲಿ ಫೀಲ್ಡಿಂಗ್ ಮಾಡಬೇಕಾಗುತ್ತದೆ. ಅಂದರೆ 30 ಯಾರ್ಡ್ ಸರ್ಕಲ್​ನಲ್ಲಿ ಒಟ್ಟು 6 ಫೀಲ್ಡರ್​ಗಳಿರಬೇಕಾಗುತ್ತದೆ.​
  • 20ನೇ ಓವರ್‌ನ ಆರಂಭದ ವೇಳೆ ಓವರ್​ ರೇಟ್​ನಲ್ಲಿ ಹಿಂದೆ ಉಳಿದಿದ್ದರೆ, ಓರ್ವ ಫೀಲ್ಡರ್ ಮೈದಾನ ತೊರೆಯಬೇಕಾಗುತ್ತದೆ. ಅಂದರೆ 10 ಮಂದಿಯೊಂದಿಗೆ ಫೀಲ್ಡಿಂಗ್ ಮಾಡಬೇಕಾಗುತ್ತದೆ. ಇಲ್ಲಿ ಯಾರು ಮೈದಾನದಿಂದ ಹೊರಬೇಕು ಎಂಬುದನ್ನು ನಾಯಕ ನಿರ್ಧರಿಸುತ್ತಾನೆ.
  • ಇನ್ನು ಬ್ಯಾಟಿಂಗ್​ ತಂಡವು ಪಂದ್ಯವನ್ನು ನಿಧಾನಗೊಳಿಸಿದರೆ ರನ್​ಗಳ ದಂಡ ವಿಧಿಸಲಾಗುತ್ತದೆ. ಅಂದರೆ ಬ್ಯಾಟಿಂಗ್​ಗೆ ನಿಲ್ಲಲು ಅಥವಾ ಗ್ಲೌಸ್ ಮತ್ತು ಬ್ಯಾಟ್​ಗಳನ್ನು ಬದಲಿಸುವ ಮೂಲಕ ಪಂದ್ಯದ ಸಮಯವನ್ನು ವ್ಯರ್ಥ ಮಾಡಿದರೆ 5 ರನ್​​ಗಳ ಪೆನಾಲ್ಟಿ ಬೀಳಲಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಫೀಲ್ಡ್​ ಅಂಪೈರ್​ ರೆಡ್ ಕಾರ್ಡ್ ತೋರಿಸಿ ಈ ನಿಯಮವನ್ನು ತಕ್ಷಣವೇ ಜಾರಿಗೊಳಿಸುತ್ತಾರೆ. ಅದರಂತೆ ಟ್ರಿನ್​ಬಾಗೊ ನೈಟ್​ ರೈಡರ್ಸ್​ 20ನೇ ಓವರ್‌ನ ಆರಂಭದ ವೇಳೆ ಓವರ್​ ರೇಟ್​ನಲ್ಲಿ ಹಿಂದೆ ಉಳಿದಿದ್ದ ಕಾರಣ ಸುನಿಲ್ ನರೈನ್ ಅವರನ್ನು ಹೊರಗೆ ಕಳುಹಿಸಿ, ಕೊನೆಯ ಓವರ್​ನಲ್ಲಿ 10 ಮಂದಿಯೊಂದಿಗೆ ಫೀಲ್ಡಿಂಗ್ ಮಾಡಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್