CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್

CPL 2024: ಕೆರಿಬಿಯನ್ ಪ್ರೀಮಿಯರ್ ಲೀಗ್​ನ 18ನೇ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ವಿರುದ್ಧ ಬಾರ್ಬಡೋಸ್ ರಾಯಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಆಲ್​ರೌಂಡರ್ ರಹ್​ಕೀಮ್ ಕಾರ್ನ್​ವಾಲ್. ಅಲ್ಲದೆ ಈ ಜಯದೊಂದಿಗೆ ಬಾರ್ಬಡೋಸ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
|

Updated on: Sep 18, 2024 | 9:26 AM

ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಹ್​ಕೀಮ್ ಕಾರ್ನ್​ವಾಲ್ ಕಮಾಲ್ ಮಾಡಿದ್ದಾರೆ. ಅದು ಸಹ ಕೇವಲ 16 ರನ್ ನೀಡಿ ಐದು ವಿಕೆಟ್​ಗಳನ್ನು ಉರುಳಿಸುವ ಮೂಲಕ. ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಸಿಪಿಎಲ್​ನ 18ನೇ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ಮತ್ತು ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾರ್ಬಡೋಸ್ ರಾಯಲ್ಸ್ ತಂಡದ ನಾಯಕ ರೋವ್​ಮನ್ ಪೊವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡಕ್ಕೆ ನವೀನ್ ಉಲ್ ಹಕ್ ಆರಂಭಿಕ ಆಘಾತ ನೀಡಿದ್ದರು.

ಇದಾದ ಬಳಿಕ ದಾಳಿಗಿಳಿದ ರಹ್​ಕೀಮ್ ಕಾರ್ನ್​ವಾಲ್ ಅವರ ಸ್ಪಿನ್ ಮೋಡಿಗೆ ಕ್ರೀಸ್​ ಕಚ್ಚಿ ನಿಲ್ಲಲು ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಬ್ಯಾಟರ್​ಗಳು ಪರದಾಡಿದರು. ಪರಿಣಾಮ 61 ರನ್​ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು. ಇನ್ನು ಕೆಳ ಕ್ರಮಾಂಕದ ಬ್ಯಾಟರ್​ಗಳಿಗೆ ಸುಲಭವಾಗಿ ಪೆವಿಲಿಯನ್ ಹಾದಿ ತೋರಿಸುವಲ್ಲಿ ರಹ್​ಕೀಮ್ ಯಶಸ್ವಿಯಾದರು.

ಅದರಲ್ಲೂ ರಹ್​ಕೀಮ್ ಕಾರ್ನ್​ವಾಲ್ ಎಸೆತದಲ್ಲಿ ಬೌಂಡರಿ ಲೈನ್​ ಬಳಿಕ ಅಲಿಕ್ ಅಥನಾಝ್ ಹಿಡಿದ ಡೈವಿಂಗ್ ಕ್ಯಾಚ್ ಅದ್ಭುತವಾಗಿತ್ತು. ಈ ವಿಕೆಟ್​ನೊಂದಿಗೆ ಕಾರ್ನ್​ವಾಲ್ 4 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 5 ವಿಕೆಟ್​ಗಳ ಸಾಧನೆ ಮಾಡಿದರು. ಅಲ್ಲದೆ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವನ್ನು 19.1 ಓವರ್​ಗಳಲ್ಲಿ 110 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಇನ್ನು 111 ರನ್​ಗಳ ಸುಲಭ ಗುರಿ ಬೆನ್ನತ್ತಿದ ಬಾರ್ಬಡೋಸ್ ರಾಯಲ್ಸ್ ತಂಡಕ್ಕೆ ಕ್ವಿಂಟನ್ ಡಿಕಾಕ್ (59) ಹಾಗೂ ಕಡೀಮ್ ಅಲ್ಗೆನೆ (25) ಉತ್ತಮ ಆರಂಭ ಒದಗಿಸಿದರು. ಈ ಮೂಲಕ 11.2 ಓವರ್​ಗಳಲ್ಲಿ 113 ರನ್​ ಬಾರಿಸಿ ಬಾರ್ಬಡೋಸ್ ರಾಯಲ್ಸ್ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

 

Follow us
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು