AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇ ಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು? ಇಲ್ಲಿದೆ ವಿವರ

IPL 2025 Playoffs Race: ಐಪಿಎಲ್ 2025ರ ಅರ್ಧಕ್ಕಿಂತ ಹೆಚ್ಚು ಪ್ರಯಾಣ ಮುಗಿದಿದ್ದು, ಪ್ಲೇಆಫ್‌ಗೆ ತಲುಪಲು ತಂಡಗಳ ಪೈಪೋಟಿ ತೀವ್ರವಾಗಿದೆ. ಆರ್ಸಿಬಿ ಅಗ್ರಸ್ಥಾನದಲ್ಲಿದ್ದರೆ, ಗುಜರಾತ್ ಟೈಟನ್ಸ್, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಹೋರಾಡುತ್ತಿವೆ. ಉಳಿದ ತಂಡಗಳಿಗೆ ಪ್ಲೇಆಫ್‌ ತಲುಪುವುದು ಕಷ್ಟಕರವಾಗಿದೆ. ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗೆ ಅವಕಾಶಗಳು ಕಡಿಮೆ.

IPL 2025: ಪ್ಲೇ ಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು? ಇಲ್ಲಿದೆ ವಿವರ
Ipl 2025
Follow us
ಪೃಥ್ವಿಶಂಕರ
|

Updated on: Apr 28, 2025 | 7:42 PM

ಇಂಡಿಯನ್ ಪ್ರೀಮಿಯರ್ ಲೀಗ್ 2025  (IPL 2025)ರ ಅರ್ಧಕ್ಕಿಂತ ಹೆಚ್ಚು ಪ್ರಯಾಣ ಪೂರ್ಣಗೊಂಡಿದೆ. ಈಗ ಎಲ್ಲಾ ತಂಡಗಳ ದೃಷ್ಟಿ ಪ್ಲೇಆಫ್​ನತ್ತ ನೆಟ್ಟಿದ್ದು, ಕೆಲವು ತಂಡಗಳ ಮುಂದಿನ ಪ್ರಯಾಣ ತುಂಬಾ ಕಷ್ಟಕರವಾಗಿದೆ. ಹೀಗಾಗಿ ಪ್ರತಿ ತಂಡಕ್ಕೂ ಈಗ ಪ್ರತಿಯೊಂದು ಪಂದ್ಯವೂ ಬಹಳ ಮುಖ್ಯವಾಗಿದೆ. ಆದರೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಒಂದು ಬಾರಿಯ ಚಾಂಪಿಯನ್ ರಾಜಸ್ಥಾನ ರಾಯಲ್ಸ್ (RR) ತಂಡಗಳ ಪ್ರಯಾಣ ಲೀಗ್ ಹಂತದಲ್ಲೇ ಅಂತ್ಯಗೊಳ್ಳುವುದು ಬಹುತೇಕ ಖಚಿತವಾಗಿದೆ. ಉಳಿದಂತೆ ಎಲ್ಲಾ ತಂಡಗಳು ಪ್ಲೇಆಫ್‌ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿವೆ.

ಇಲ್ಲಿದೆ ಎಲ್ಲಾ ತಂಡಗಳ ಪ್ಲೇಆಫ್‌ ಲೆಕ್ಕಾಚಾರ

ಈ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಿದೆ. ರಜತ್ ಪಟಿದಾರ್ ನಾಯಕತ್ವದಲ್ಲಿ ತಂಡವು ಆಡಿರುವ 10 ಪಂದ್ಯಗಳಲ್ಲಿ 7 ರಲ್ಲಿ ಜಯಗಳಿಸಿದ್ದು 14 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ಬೆಂಗಳೂರು ತಂಡಕ್ಕೆ ಇನ್ನೂ ನಾಲ್ಕು ಪಂದ್ಯಗಳು ಬಾಕಿ ಇದ್ದು, ಒಂದು ಪಂದ್ಯ ಗೆದ್ದರೂ ಪ್ಲೇಆಫ್ ತಲುಪಲಿದೆ. ಗುಜರಾತ್ ಟೈಟನ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ತಂಡವು ಆಡಿರುವ 8 ಪಂದ್ಯಗಳಲ್ಲಿ 6 ಜಯಗಳೊಂದಿಗೆ 12 ಅಂಕಗಳನ್ನು ಗಳಿಸಿದೆ. ಈಗ, ಪ್ಲೇಆಫ್ ತಲುಪಲು ಗಿಲ್ ಪಡೆ ಕೇವಲ ಎರಡು ಪಂದ್ಯಗಳನ್ನು ಗೆಲ್ಲಬೇಕಾಗಿದೆ.

ಮುಂಬೈ ಇಂಡಿಯನ್ಸ್ ತಂಡ 10 ಪಂದ್ಯಗಳಲ್ಲಿ 6 ರಲ್ಲಿ ಜಯಗಳಿಸಿದ್ದು, 12 ಅಂಕಗಳನ್ನು ಸಹ ಹೊಂದಿದೆ. ಇದೀಗ ಹಾರ್ದಿಕ್ ಪಡೆ ಪ್ಲೇಆಫ್ ತಲುಪಲು ಉಳಿದಿರುವ 4 ಪಂದ್ಯಗಳಲ್ಲಿ 2 ಪಂದ್ಯಗಳನ್ನು ಗೆಲ್ಲಲೇಬೇಕು. ಡೆಲ್ಲಿ ಕ್ಯಾಪಿಟಲ್ಸ್ ಕೂಡ ಆಡಿರುವ 9 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿದ್ದು, 12 ಅಂಕಗಳನ್ನು ಹೊಂದಿದೆ. ಪ್ಲೇಆಫ್ ತಲುಪಲು ಅಕ್ಷರ್ ಪಡೆ 2 ಪಂದ್ಯಗಳನ್ನು ಗೆಲ್ಲಬೇಕು. ಡಿಸಿ ತಂಡಕ್ಕೆ ಇನ್ನೂ 5 ಪಂದ್ಯಗಳು ಬಾಕಿ ಇವೆ.

ಇತರ ತಂಡಗಳ ಮುಂದಿನ ಪ್ರಯಾಣ ಕಷ್ಟಕರ

ಅಗ್ರ ನಾಲ್ಕು ತಂಡಗಳನ್ನು ಹೊರತುಪಡಿಸಿ, ಇತರ ತಂಡಗಳಿಗೆ ಹಾದಿ ತುಂಬಾ ಕಷ್ಟಕರವಾಗಿದೆ. ಹೀಗಾಗಿ ಪ್ರತಿಯೊಂದು ಪಂದ್ಯವೂ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಪಂಜಾಬ್ ಕಿಂಗ್ಸ್ ಪ್ಲೇಆಫ್ ತಲುಪಲು 5 ಪಂದ್ಯಗಳಲ್ಲಿ 3 ರಲ್ಲಿ ಗೆಲ್ಲಬೇಕು. ಲಕ್ನೋ ಸೂಪರ್‌ಜೈಂಟ್ಸ್ ತಂಡ ಕೂಡ ಆಡಬೇಕಾಗಿರುವ 4 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಲೇಬೇಕು. ಇದಲ್ಲದೆ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಉಳಿದಿರುವ ಐದು ಪಂದ್ಯಗಳಲ್ಲಿ ಐದನ್ನೂ ಗೆಲ್ಲಲೇಬೇಕು.

IPL 2025: ಸಾವನ್ನೇ ಗೆದ್ದು ಬಂದ ರಿಷಬ್ ಪಂತ್​ಗೆ 27 ಕೋಟಿಯ ಒತ್ತಡವನ್ನು ಗೆಲ್ಲಲಾಗ್ತಿಲ್ಲ..!

ಹೈದರಾಬಾದ್‌ಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿ

ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರಿಸ್ಥಿತಿ ಈಗ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. SRH ಇನ್ನೂ 5 ಪಂದ್ಯಗಳನ್ನು ಆಡಬೇಕಾಗಿದೆ. ಇದರಲ್ಲಿ ಒಂದೇ ಒಂದು ಸೋಲು ಕೂಡ ತಂಡವನ್ನು ಈ ಸೀಸನ್​ನಿಂದ ಹೊರದಬ್ಬಬಹುದು. ಇದರರ್ಥ SRH ತನ್ನ ಐದು ಪಂದ್ಯಗಳನ್ನು ಗೆಲ್ಲಲೇಬೇಕು. ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ತಲುಪುವ ಸಾಧ್ಯತೆಗಳು ಬಹುತೇಕ ನಗಣ್ಯ. ಎರಡೂ ತಂಡಗಳಿಗೆ ತಲಾ 5 ಪಂದ್ಯಗಳು ಉಳಿದಿವೆ. ಎರಡೂ ತಂಡಗಳು ಐದು ಪಂದ್ಯಗಳಲ್ಲಿ ಗೆದ್ದರೂ 16 ಅಂಕಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಒಂದು ಪವಾಡ ಮಾತ್ರ ಈ ಎರಡು ತಂಡಗಳನ್ನು ಪ್ಲೇಆಫ್‌ಗೆ ಕೊಂಡೊಯ್ಯಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ