AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2023: ಸರಣಿಗಳಲ್ಲಿ ಹೀರೋ-ಐಸಿಸಿ ಟೂರ್ನಿಯಲ್ಲಿ ಝೀರೋ: ಇದು ಟೀಮ್ ಇಂಡಿಯಾ

Team India: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯೊಂದಿಗೆ ಭಾರತ ತಂಡವು ಈ ವರ್ಷವನ್ನು ಆರಂಭಿಸಿತ್ತು. ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆತಿಥೇಯ ಭಾರತ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು.

Year Ender 2023: ಸರಣಿಗಳಲ್ಲಿ ಹೀರೋ-ಐಸಿಸಿ ಟೂರ್ನಿಯಲ್ಲಿ ಝೀರೋ: ಇದು ಟೀಮ್ ಇಂಡಿಯಾ
Team India
TV9 Web
| Edited By: |

Updated on: Dec 13, 2023 | 8:59 PM

Share

Team India In 2023: ಭಾರತ ಕ್ರಿಕೆಟ್ ತಂಡವು 2023 ರಲ್ಲಿ ಯಾವುದೇ ಐಸಿಸಿ ಟ್ರೋಫಿಯನ್ನು ಗೆಲ್ಲದಿರಬಹುದು. ಆದರೆ, ಈ ವರ್ಷ ಟೀಮ್ ಇಂಡಿಯಾ (Team India) ಅದ್ಭುತ ಪ್ರದರ್ಶನವಂತು ನೀಡಿದೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು. ಭಾರತ ತಂಡವು ಈ ವರ್ಷ ಟಿ20, ಏಕದಿನ ಮತ್ತು ಟೆಸ್ಟ್ ಸ್ವರೂಪಗಳಲ್ಲಿ ಒಟ್ಟು 11 ದ್ವಿಪಕ್ಷೀಯ ಸರಣಿಗಳನ್ನು ಆಡಿದೆ. ಈ ವೇಳೆ 9 ಸರಣಿಗಳನ್ನು ಗೆದ್ದುಕೊಂಡಿದೆ. ಅಂದರೆ ಕೇವಲ 2 ಸರಣಿಗಳಲ್ಲಿ ಮಾತ್ರ ಭಾರತ ತಂಡ ಪರಾಜಯಗೊಂಡಿದೆ. ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲೂ ಸೋಲಿಲ್ಲದ ಸರದಾರನಾಗಿ​ ಫೈನಲ್​ಗೆ ಪ್ರವೇಶಿಸಿತ್ತು. ಆದರೆ ಅಂತಿಮ ಹಣಾಹಣಿಯಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿ ನಿರಾಸೆ ಮೂಡಿಸಿತು.

ಏಕದಿನ ಸರಣಿಗಳಲ್ಲಿ ಪರಾಕ್ರಮ:

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯೊಂದಿಗೆ ಭಾರತ ತಂಡವು ಈ ವರ್ಷವನ್ನು ಆರಂಭಿಸಿತ್ತು. ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆತಿಥೇಯ ಭಾರತ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು.

ಆದರೆ, ಮಾರ್ಚ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 1-2 ಅಂತರದ ಸೋಲು ಅನುಭವಿಸಿತು. ವಿಶೇಷ ಎಂದರೆ ಸೆಪ್ಟೆಂಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸೇಡು ತೀರಿಸಿಕೊಂಡಿತ್ತು. ಮತ್ತೊಂದೆಡೆ, ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ 2-1 ರಿಂದ ಗೆದ್ದುಕೊಂಡಿದೆ.

ಟಿ20ಯಲ್ಲೂ ಮಿಂಚಿಂಗ್:

ಈ ವರ್ಷ ಭಾರತ ತಂಡವು ನಾಲ್ಕು ಟಿ20 ಸರಣಿಗಳನ್ನು ಆಡಿದೆ. ಜನವರಿಯಲ್ಲಿ ಶ್ರೀಲಂಕಾವನ್ನು 2-1 ರಿಂದ ಸೋಲಿಸಿದ ಟೀಮ್ ಇಂಡಿಯಾ, ಆ ಬಳಿಕ ನ್ಯೂಝಿಲೆಂಡ್ ವಿರುದ್ಧ 2-1 ಅಂತರದಿಂದ ಜಯ ಸಾಧಿಸಿತ್ತು. ಆಗಸ್ಟ್‌ನಲ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ 2-3 ಅಂತರದಿಂದ ಸೋಲನುಭವಿಸಬೇಕಾಯಿತು. ಆ ಬಳಿಕ ಐರ್ಲೆಂಡ್ ವಿರುದ್ಧ 2-0 ಹಾಗೂ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಟೀಮ್ ಇಂಡಿಯಾ ಜಯಭೇರಿ ಬಾರಿಸಿತ್ತು.

ಟೆಸ್ಟ್​ನಲ್ಲೂ ಪಾಸ್:

ಈ ವರ್ಷ ಭಾರತ ಕೇವಲ ಎರಡು ಟೆಸ್ಟ್ ಸರಣಿಗಳನ್ನು ಮಾತ್ರ ಗೆದ್ದಿದೆ. ಮೊದಲ ಟೆಸ್ಟ್ ಸರಣಿ ಆಸ್ಟ್ರೇಲಿಯಾ ವಿರುದ್ಧವಾಗಿತ್ತು. 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿತು. ಇನ್ನು ಜುಲೈನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 1-0 ಅಂತರದಿಂದ ಸೋಲಿಸಿತು.

ಐಸಿಸಿ ಫೈನಲ್​ನಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ:

ಟೀಮ್ ಇಂಡಿಯಾ ಈ ವರ್ಷ 2 ಐಸಿಸಿ ಫೈನಲ್​ಗಳಲ್ಲಿ ಸೋಲನುಭವಿಸಿತ್ತು ಎಂಬುದು ಬೇಸರದ ಸಂಗತಿ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸುವ ಮೂಲಕ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳುವ ಅವಕಾಶ ಕೈಚೆಲ್ಲಿಕೊಂಡಿತು.

ಇನ್ನು ಈ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿ ನಿರಾಸೆ ಮೂಡಿಸಿತು.

ಇದನ್ನೂ ಓದಿ: IPL 2024 Auction: ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 333 ಆಟಗಾರರ ಪಟ್ಟಿ ಇಲ್ಲಿದೆ

ಏಷ್ಯನ್ ಚಾಂಪಿಯನ್​:

ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಸೋತರೂ ಈ ಬಾರಿ ಏಷ್ಯಾ ಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ವಿಶೇಷ. ಒಟ್ಟಾರೆ ಹೇಳುವುದಾದರೆ 2023 ಟೀಮ್ ಇಂಡಿಯಾ ಪಾಲಿಗೆ ಅಭೂತಪೂರ್ವ ಯಶಸ್ಸನ್ನು ನೀಡಿತ್ತು ಎನ್ನಬಹುದು. ಈ ಯಶಸ್ಸಿನ ಹಾದಿಯು 2024 ರಲ್ಲೂ ಮುಂದುವರೆಯುವುದನ್ನು ನಿರೀಕ್ಷಿಸಬಹುದು.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ