AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಪೂಜೆಗೆ ಶುಭಕೋರಿದ ಬಾಂಗ್ಲಾ ಕ್ರಿಕೆಟಿಗನಿಗೆ ಮತಾಂತರವಾಗುವಂತೆ ಬೆದರಿಕೆ..!

Litton Das: ಬಾಂಗ್ಲಾದೇಶ್ ಪರ 35 ಟೆಸ್ಟ್, 57 ಏಕದಿನ ಹಾಗೂ 56 ಟಿ20 ಪಂದ್ಯಗಳನ್ನಾಡಿರುವ ಲಿಟನ್ ದಾಸ್ ಒಟ್ಟು 5066 ರನ್​ ಕಲೆಹಾಕಿದ್ದಾರೆ.

ದುರ್ಗಾ ಪೂಜೆಗೆ ಶುಭಕೋರಿದ ಬಾಂಗ್ಲಾ ಕ್ರಿಕೆಟಿಗನಿಗೆ ಮತಾಂತರವಾಗುವಂತೆ ಬೆದರಿಕೆ..!
Litton das
TV9 Web
| Updated By: ಝಾಹಿರ್ ಯೂಸುಫ್|

Updated on: Sep 29, 2022 | 11:55 AM

Share

ಬಾಂಗ್ಲಾದೇಶ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಲಿಟನ್ ಕುಮಾರ್ ದಾಸ್ (Litton das) ಇದೀಗ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಹಾಲಯದ ಶುಭ ಸಂದರ್ಭದಲ್ಲಿ ಲಿಟನ್ ದಾಸ್ ತಮ್ಮ ಅಭಿಮಾನಿಗಳಿಗೆ ಫೇಸ್‌ಬುಕ್‌ನಲ್ಲಿ ಶುಭಾಶಯಗಳನ್ನು ಕೋರಿದ್ದರು. ಇದನ್ನು ಸಹಿಸದ ಮೂಲಭೂತವಾದಿಗಳು ಇದೀಗ ಬಾಂಗ್ಲಾ ಕ್ರಿಕೆಟಿಗನ ಮೇಲೆ ಸೋಷಿಯಲ್ ಮೀಡಿಯಾದಲ್ಲಿ ಧರ್ಮನಿಂದನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ, ಮಹಾಲಯವನ್ನು ದುರ್ಗಾ ಪೂಜೆಯ ಆರಂಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅದರಂತೆ ಹಿಂದೂ ಧರ್ಮೀರಾಗಿರುವ ಲಿಟನ್ ದಾಸ್ ಸೋಷಿಯಲ್ ಮೀಡಿಯಾದಲ್ಲಿ ದುರ್ಗಾಪೂಜೆಗೆ ಶುಭಾಶಯ ತಿಳಿಸಿದ್ದರು. ಇದರ ಬೆನ್ನಲ್ಲೇ ಕ್ರಿಕೆಟಿಗನಿಗೆ ಮೂಲಭೂತವಾದಿಗಳಿಂದ ಬೆದರಿಕೆಗಳು ಬರಲಾರಂಭಿಸಿದೆ.

ಅಷ್ಟೇ ಅಲ್ಲದೆ ಕೆಲವರು ವಿಗ್ರಹ ಪೂಜೆಯನ್ನು ಖಂಡಿಸಿ, ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆ. ಇನ್ನೂ ಕೆಲವರು ಲಿಟನ್ ದಾಸ್ ಅವರಿಗೆ ಇಸ್ಲಾಂಗೆ ಮತಾಂತರಗೊಳ್ಳುವಂತೆ ಸೂಚಿಸಿದ್ದಾರೆ. ಈ ಬಗ್ಗೆ ಲಿಟನ್ ದಾಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಪರ ವಿರೋಧ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಈ ನಿಂದನೆ, ಅವಹೇಳನದ ನಡುವೆಯೂ ಲಿಟನ್ ದಾಸ್ ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್​ ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಅಲ್ಲದೆ ಬಾಂಗ್ಲಾ ಕ್ರಿಕೆಟಿಗನಿಗೆ ಅಭಿಮಾನಿಗಳಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿರುವುದು ಕೂಡ ಇದೀಗ ಮೂಲಭೂತವಾದಿಗಳ ಚಿಂತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಬಾಂಗ್ಲಾದೇಶ್ ಪರ 35 ಟೆಸ್ಟ್, 57 ಏಕದಿನ ಹಾಗೂ 56 ಟಿ20 ಪಂದ್ಯಗಳನ್ನಾಡಿರುವ ಲಿಟನ್ ದಾಸ್ ಒಟ್ಟು 5066 ರನ್​ ಕಲೆಹಾಕಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ಗೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಲಿಟನ್ ದಾಸ್ ಆಯ್ಕೆಯಾಗಿದ್ದಾರೆ.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ