AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್‌ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್

cricketer Mayank Agarwal: ಕರ್ನಾಟಕ ಕ್ರಿಕೆಟ್ ತಂಡದ ಕ್ಯಾಪ್ಟನ್ ಮಯಾಂಕ್ ಅರ್ಗವಾಲ್ ಅವರನ್ನು ತ್ರಿಪುರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನಲ್ಲೇ ಪಡೆದುಕೊಳ್ಳುವುದರಿಂದ ಅವರನ್ನು ತ್ರಿಪುರದಿಂದ ಶಿಫ್ಟ್ ಮಾಡಲಾಗಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್‌ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್
ಮಯಾಂಕ್ ಅರ್ಗವಾಲ್
ರಮೇಶ್ ಬಿ. ಜವಳಗೇರಾ
|

Updated on: Jan 31, 2024 | 9:12 PM

Share

ನೀರು ಎಂದುಕೊಂಡು ಸ್ಪಿರಿಟಿ ಸೇವಿಸಿ ಅಸ್ವಸ್ಥರಾಗಿರುವ ಕರ್ನಾಟಕ ಕ್ರಿಕೆಟ್ ತಂಡದ ಕ್ಯಾಪ್ಟನ್ ಮಯಾಂಕ್ ಅರ್ಗವಾಲ್ (cricketer Mayank Agarwal) ಅವರನ್ನು ತ್ರಿಪುರದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಇಂದು(ಜನವರಿ 31) ತ್ರಿಪುರಾದಿಂದ 6E525 ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನಲ್ಲೇ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಕರ್ನಾಟಕ ಕ್ರಿಕೆಟ್‌ ತಂಡದ ಮ್ಯಾನೇಜರ್ ರಮೇಶ್ ಪ್ರತಿಕ್ರಿಯಿಸಿದ್ದು, ಮಯಾಂಕ್ ಅರ್ಗವಾಲ್ ಅವರು ಅಪಾಯದಿಂದ ಪಾರಾಗಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದು, ನಾಳೆ (ಫೆಬ್ರವರಿ 01) ಬೆಂಗಳೂರಿನಲ್ಲಿ ವೈದ್ಯರನ್ನ ಸಂಪರ್ಕಿಸಲಿದ್ದಾರೆ. ಥ್ರೋಟ್ ಇನ್ಪೇಕ್ಷನ್ ಆಗಿರುವ ಕಾರಣ ಅವರಿಗೆ ಮಾತನಾಡಲು ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Mayank Agarwal: ವಿಷಕಾರಿ ದ್ರವ ಸೇವನೆ: 48 ಗಂಟೆಗಳವರೆಗೆ ಮಯಾಂಕ್​ಗೆ ಮಾತನಾಡಲಾಗುವುದಿಲ್ಲ

ತ್ರಿಪುರಾದಿಂದ ಸೂರತ್ ಗೆ ಹೋಗುವಾಗ ವಿಮಾನದಲ್ಲಿ ನೀರು ಕುಡಿದ ಪರಿಣಾಮ ತೊಂದರೆಯಾಯ್ತು. ಕೂಡಲೇ ಅವರಿಗೆ ಸೂಕ್ತ ಚಿಕಿತ್ಸೆ ಕೂಡಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ತನಿಖೆ ನಂತರ ಏನಾಗಿತ್ತು ಎನ್ನುವುದು ಗೊತ್ತಾಗಲಿದೆ ಎಂದು ಸ್ಪಷ್ಟಪಡಿಸಿದರು.

ಘಟನೆ ಹಿನ್ನೆಲೆ

ತ್ರಿಪುರ ವಿರುದ್ಧದ ರಣಜಿ ಪಂದ್ಯದ ಬಳಿಕ ಕರ್ನಾಟಕ ತಂಡ ತನ್ನ ಮುಂದಿನ ಪಂದ್ಯವಾಡಲು ಗುಜರಾತ್​ಗೆ ತೆರಳಬೇಕಿತ್ತು. ಮಯಾಂಕ್ ಅಗರ್ವಾಲ್ ಸೇರಿದಂತೆ ಕರ್ನಾಟಕ ತಂಡದ ಆಟಗಾರರು ಸೂರತ್​ಗೆ ತೆರಳಲು ಇಂಡಿಗೋ ವಿಮಾನ ಹತ್ತಿದ್ದರು. ಈ ವೇಳೆ ವಿಮಾನದಲ್ಲಿ ಇಡಲಾಗಿದ್ದ ವಿಷಕಾರಿ ದ್ರವ ಪದಾರ್ಥವನ್ನು ನೀರು ಎಂದು ಮಯಾಂಕ್ ಅಗರ್ವಾಲ್ ಕುಡಿದಿದ್ದರು. ಇದರ ಬೆನ್ನಲ್ಲೇ ಅವರ ಗಂಟಲಿನಲ್ಲಿ ಉರಿಯ ಅನುಭವವಾಗಿದೆ. ಇದರಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ತ್ರಿಪುರದ ಎಎಲ್​ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ರಿಪೋರ್ಟ್ ವರದಿ ಬಳಿಕ ಮಯಾಂಕ್ ಅಗರ್ವಾಲ್ ತನ್ನ ಮ್ಯಾನೇಜರ್ ಮೂಲಕ ತ್ರಿಪುರದ NCCPS ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ