AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 2 ಜಿಲ್ಲೆಗಳಲ್ಲಿ 1,400 ಕೋಟಿ ರೂ. ಹೂಡಿಕೆಗೆ ಮುಂದಾದ ಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

Muttiah Muralitharan: ಚಾಮರಾಜನಗರ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲೂ ಬಂಡವಾಳ ಹೂಡಿಕೆ ಹೆಚ್ಚಿಸಲು ಮುರಳೀಧರನ್ ಉತ್ಸುಕರಾಗಿದ್ದಾರೆ. ಸದ್ಯ ಚಾಮರಾಜನಗರದಲ್ಲಿ 1000 ಕೋಟಿ ವೆಚ್ಚದ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಧಾರವಾಡದಲ್ಲೂ ಹೂಡಿಕೆ ಆಗುವುದರಿಂದ ರಾಜ್ಯಕ್ಕೆ ಒಟ್ಟು 1400 ಕೋಟಿ ರೂ. ಬಂಡವಾಳ ಹರಿದುಬರುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ 2 ಜಿಲ್ಲೆಗಳಲ್ಲಿ 1,400 ಕೋಟಿ ರೂ. ಹೂಡಿಕೆಗೆ ಮುಂದಾದ ಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್
ಮುತ್ತಯ್ಯ ಮುರಳೀಧರನ್, ಎಂಬಿ ಪಾಟೀಲ್
ಪೃಥ್ವಿಶಂಕರ
|

Updated on: Jun 19, 2024 | 3:45 PM

Share

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ (Muttiah Muralitharan) ಕರ್ನಾಟಕದಲ್ಲಿ ಭಾರಿ ಹೂಡಿಕೆಗೆ ಮುಂದಾಗಿದ್ದಾರೆ. ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಉದ್ಯಮ ಲೋಕದಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಮುರಳೀಧರನ್, ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಹೆಸರಿನ ತಂಪು ಪಾನೀಯಗಳ ಉತ್ಪಾದನಾ ಘಟಕವನ್ನು ಕನಾರ್ಟಟಕದ ಗಡಿನಾಡ ಜಿಲ್ಲೆ ಚಾಮರಾಜನಗರದ (Chamarajanagar) ಬದನಗುಪ್ಪೆಯಲ್ಲಿ ತೆರೆಯಲಿದ್ದಾರೆ. ಇದಕ್ಕಾಗಿ ಕರ್ನಾಟಕ ಸರ್ಕಾರದೊಂದಿಗೆ ಒಪ್ಪಂದ ಕೂಡ ಮಾಡಿಕೊಂಡಿದ್ದಾರೆ. ಅಲ್ಲದೆ ಮುರಳೀಧರನ್ ಧಾರವಾಡ ಜಿಲ್ಲೆಯಲ್ಲಿ ಹೂಡಿಕೆ ಮಾಡಲು ಇಚ್ಛಿಸಿದ್ದು, ಒಟ್ಟು 1400 ಕೋಟಿ ರೂ.ಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಮುರುಳೀಧರನ್ ಮುಂದಾಗಿದ್ದಾರೆ.

ಸಚಿವ ಎಂಬಿ ಪಾಟೀಲ್ ಮಾಹಿತಿ

ಕರ್ನಾಟಕದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಈ ಒಪ್ಪಂದದ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ಚಾಮರಾಜನಗರ ಜಿಲ್ಲೆಯ ಬದನಗುಪ್ಪೆಯಲ್ಲಿ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಎಂ.ಬಿ.ಪಾಟೀಲ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಮುರಳೀಧರನ್ ಮತ್ತು ಅವರ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯ ನಂತರ ಮಾಡಿದ ಪೋಸ್ಟ್‌ನಲ್ಲಿ, ಮುತ್ತಯ್ಯ ಮುರಳೀಧರನ್ ಕರ್ನಾಟಕದಲ್ಲಿ ತಮ್ಮ ವ್ಯವಹಾರವನ್ನು ವಿಸ್ತರಿಸಲು ಬಯಸಿದ್ದಾರೆ. ತಮ್ಮ ತಾಯ್ನಾಡಿನಲ್ಲಿ ತಮ್ಮ ವ್ಯಾಪಾರವನ್ನು ಬೆಳೆಸಲು ಪ್ರಯತ್ನಿಸುತ್ತಿರುವ ಅವರು ಇದಕ್ಕಾಗಿ ತಮ್ಮ ರಾಜ್ಯವನ್ನು ಆಯ್ಕೆ ಮಾಡಿದ್ದಾರೆ.

2 ಜಿಲ್ಲೆಗಳಲ್ಲಿ ಹೂಡಿಕೆ

ಚಾಮರಾಜನಗರ ಹೊರತುಪಡಿಸಿ ಧಾರವಾಡ ಜಿಲ್ಲೆಯಲ್ಲೂ ಬಂಡವಾಳ ಹೂಡಿಕೆ ಹೆಚ್ಚಿಸಲು ಮುರಳೀಧರನ್ ಉತ್ಸುಕರಾಗಿದ್ದಾರೆ. ಸದ್ಯ ಚಾಮರಾಜನಗರದಲ್ಲಿ 1000 ಕೋಟಿ ವೆಚ್ಚದ ಕಾರ್ಖಾನೆ ಸ್ಥಾಪನೆ ಕಾಮಗಾರಿ ನಡೆಯುತ್ತಿದೆ. ಧಾರವಾಡದಲ್ಲೂ ಹೂಡಿಕೆ ಆಗುವುದರಿಂದ ರಾಜ್ಯಕ್ಕೆ ಒಟ್ಟು 1400 ಕೋಟಿ ರೂ. ಬಂಡವಾಳ ಹರಿದುಬರುತ್ತಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಜನವರಿಯಿಂದ ಆರಂಭ

ಮಾಧ್ಯಮಗಳ ವರದಿ ಪ್ರಕಾರ ಈಗಾಗಲೇ 46 ಎಕರೆ ಭೂಮಿಯನ್ನು ತಂಪು ಪಾನೀಯ ಉತ್ಪಾದನೆಗೆ ಮಂಜೂರು ಮಾಡಲಾಗಿದ್ದು, ಆ ಜಮೀನಿನಲ್ಲಿ ಕಾರ್ಖಾನೆ ಸ್ಥಾಪಿಸುವ ಕಾರ್ಯ ನಡೆಯುತ್ತಿದೆ. 2025ರ ಜನವರಿ ವೇಳೆಗೆ ಕಾರ್ಖಾನೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್